Homeಮುಖಪುಟಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಶಾಸಕರಾದ ಸುರೇಶ್ ತಿವಾರಿ ಮುಸ್ಲಿಮರಿಂದ ತರಕಾರಿ ಗಳನ್ನು ಖರೀದಿಸಬಾರದು ಎಂದು ಜನರಿಗೆ ಎಚ್ಚರಿಕೆ ನೀಡುವ ವಿಡಿಯೊ ವೈರಲಾಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ತಿವಾರಿ “ನಾನು ಏನಾದರೂ ತಪ್ಪು ಹೇಳಿದ್ದೇನಾ ?” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವೈರಲಾಗಿದ್ದ ವಿಡಿಯೊದಲ್ಲಿ “ಒಂದು ವಿಷಯವನ್ನು ನೆನಪಿನಲ್ಲಿಡಿ. ನಾನು ಎಲ್ಲರಿಗೂ ಹೇಳುತ್ತಿದ್ದೇನೆ. ಮಿಯಾಗಳಿಂದ(ಮುಸ್ಲಿಮರು) ತರಕಾರಿಗಳನ್ನು ಖರೀದಿಸುವ ಅಗತ್ಯವಿಲ್ಲ” ಎಂದು ಹೇಳುವುದನ್ನು ಕೇಳಬಹುದು.

ವಿವಾದದ ಬಗ್ಗೆ ಸುರೇಶ್ ತಿವಾರಿ ತನ್ನ ಮಾತನ್ನು ಸಮರ್ಥಿಸಿಕೊಂಡಿದ್ದಾರೆ, “ನಾನು ನನ್ನ ಕ್ಷೇತ್ರದಲ್ಲಿ 10-12 ಜನರ ಗುಂಪಿನೊಂದಿಗೆ ಸಂವಹನ ಮಾಡುತ್ತಾ, ಲಾಕ್ ಡೌನ್ ಬಗ್ಗೆ ನಾವು ಸಂವಾದ ನಡೆದ್ದೆವು. ಮುಸ್ಲಿಂ ತರಕಾರಿ ಮಾರಾಟಗಾರರು ಅದರ ಮೇಲೆ ಉಗುಳುತ್ತಿದ್ದಾರೆ ಎಂದು ನನಗೆ ತಿಳಿಸಿದ್ದರಿಂದ, ನಾನು ಹಾಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.

ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಒವೈಸಿ ಹಿಂದೂಗಳ ವಿರುದ್ದ ಆಕ್ಷೇಪಾರ್ಹ ವಿಷಯಗಳನ್ನು ಹೇಳುತ್ತಾರೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?


ಕೊರೊನಾ ಸಾಂಕ್ರಾಮಿಕವು ಎಲ್ಲರನ್ನೂ ಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ಕಳೆದ ವಾರ ಪ್ರಧಾನಿ ಮೋದಿ ಹೇಳಿದ್ದರು. “ಕೊರೊನಾ ಜನಾಂಗ, ಧರ್ಮ, ಬಣ್ಣ, ಜಾತಿ, ಮತ, ಭಾಷೆ ಅಥವಾ ಗಡಿಯನ್ನು ನೋಡುವುದಿಲ್ಲ. ನಾವು ಒಗ್ಗಟ್ಟಿನಿಂದ ಇದಬೇಕು” ಎಂದು ಪ್ರಧಾನಿ ಮೋದಿ ಲಿಂಕ್ಡಿನ್‌ ಪೋಸ್ಟ್‌ನಲ್ಲಿ ತಿಳಿಸಿದ್ದರು.

ತಿವಾರಿಯ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಟೀಕಿಸಿದ್ದಾರೆ. ನಟಿ ಹಾಗೂ ಕಾಂಗ್ರೆಸ್ ನಾಯಕಿ ನಗ್ಮಾ “ಮೋದಿ ಮೊದಲು ನಿಮ್ಮ ಜನರಿಗೆ ಪಾಠ ಕಲಿಸಿ” ಎಂದು ಟ್ವೀಟಿಸಿದ್ದಾರೆ.

 

ಉತ್ತರಪ್ರದೇಶದಲ್ಲಿ, ಕೊರೊನಾ ವೈರಸ್ ಬಗೆಗಿನ ವದಂತಿಗಳನ್ನು ನಂಬಿ ಮುಸ್ಲಿಂ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಹಲವಾರು ಘಟನೆಗಳು ವರದಿಯಾಗಿವೆ.

ಲಖಿಂಪುರದ ಮುಸ್ಲಿಂ ಹಣ್ಣು ಮಾರಾಟಗಾರನನ್ನು ಕಲ್ಲಂಗಡಿಗಳನ್ನು ಮಾರಾಟ ಮಾಡುವ ಮೊದಲು ಉಗುಳಿದ್ದಾರೆ ಎಂದು ಆರೋಪಿಸಲಾಗಿತ್ತು. ವ್ಯಕ್ತಿಯೊಬ್ಬ ಅತ್ತು ಕೈಮುಗಿದು ತಾನು ಯಾವುದೇ ತಪ್ಪು ಮಾಡಿಲ್ಲ ಹಾಗು ನನಗೆ ಹೋಗಲು ಅವಕಾಶ ನೀಡಬೇಕು ಎಂದು ಮನವಿ ಮಾಡುತ್ತಿರುವ ವಿಡಿಯೊ ವೈರಲಾಗಿತ್ತು. ಆದರೆ ಯುಪಿ ಪೊಲೀಸರ ತಂಡ ಸ್ಥಳಕ್ಕೆ ತಲುಪಿ ವ್ಯಕ್ತಿಯನ್ನು ರಕ್ಷಿಸಿ, ಮಾರಾಟಗಾರರ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ತಿಳಿಸಿದೆ.

ಕೆಲವು ದಿನಗಳ ಹಿಂದೆ ಕೂಡಾ ಮಹೋಬಾ ಜಿಲ್ಲೆಯ ತರಕಾರಿ ಮಾರಾಟಗಾರರು ತಮ್ಮನ್ನು ಬೆದರಿಸಲಾಗುತ್ತಿದೆ ಎಂದು ಜಿಲ್ಲಾಡಳಿತಕ್ಕೆ ಪತ್ರ ಬರೆದು ದೂರು ನೀಡಿದ್ದರು. ಆದರೆ ಜಿಲ್ಲಾಡಳಿತವು ವಿಚಾರಣೆ ನಡೆಸಿ ಆರೋಪವನ್ನು ದೃಡೀಕರಿಸಲು ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಕೊರೊನಾ ಹರಡಲು ಮುಸ್ಲಿಂ ವ್ಯಕ್ತಿ ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದನೆ ??


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...