Homeಮುಖಪುಟಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

ಮುಸ್ಲಿಮರಿಂದ ತರಕಾರಿ ಖರೀದಿಸಬೇಡಿ ಎಂದು ವಿವಾದವೆಬ್ಬಿಸಿದ ಯುಪಿ ಶಾಸಕ

- Advertisement -
- Advertisement -

ಉತ್ತರ ಪ್ರದೇಶದ ಬಿಜೆಪಿ ಶಾಸಕರಾದ ಸುರೇಶ್ ತಿವಾರಿ ಮುಸ್ಲಿಮರಿಂದ ತರಕಾರಿ ಗಳನ್ನು ಖರೀದಿಸಬಾರದು ಎಂದು ಜನರಿಗೆ ಎಚ್ಚರಿಕೆ ನೀಡುವ ವಿಡಿಯೊ ವೈರಲಾಗಿದ್ದು ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ಆದರೆ ತಿವಾರಿ “ನಾನು ಏನಾದರೂ ತಪ್ಪು ಹೇಳಿದ್ದೇನಾ ?” ಎಂದು ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ವೈರಲಾಗಿದ್ದ ವಿಡಿಯೊದಲ್ಲಿ “ಒಂದು ವಿಷಯವನ್ನು ನೆನಪಿನಲ್ಲಿಡಿ. ನಾನು ಎಲ್ಲರಿಗೂ ಹೇಳುತ್ತಿದ್ದೇನೆ. ಮಿಯಾಗಳಿಂದ(ಮುಸ್ಲಿಮರು) ತರಕಾರಿಗಳನ್ನು ಖರೀದಿಸುವ ಅಗತ್ಯವಿಲ್ಲ” ಎಂದು ಹೇಳುವುದನ್ನು ಕೇಳಬಹುದು.

ವಿವಾದದ ಬಗ್ಗೆ ಸುರೇಶ್ ತಿವಾರಿ ತನ್ನ ಮಾತನ್ನು ಸಮರ್ಥಿಸಿಕೊಂಡಿದ್ದಾರೆ, “ನಾನು ನನ್ನ ಕ್ಷೇತ್ರದಲ್ಲಿ 10-12 ಜನರ ಗುಂಪಿನೊಂದಿಗೆ ಸಂವಹನ ಮಾಡುತ್ತಾ, ಲಾಕ್ ಡೌನ್ ಬಗ್ಗೆ ನಾವು ಸಂವಾದ ನಡೆದ್ದೆವು. ಮುಸ್ಲಿಂ ತರಕಾರಿ ಮಾರಾಟಗಾರರು ಅದರ ಮೇಲೆ ಉಗುಳುತ್ತಿದ್ದಾರೆ ಎಂದು ನನಗೆ ತಿಳಿಸಿದ್ದರಿಂದ, ನಾನು ಹಾಗೆ ಹೇಳಿದ್ದೇನೆ” ಎಂದು ಹೇಳಿದ್ದಾರೆ.

ತಮ್ಮ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಒವೈಸಿ ಹಿಂದೂಗಳ ವಿರುದ್ದ ಆಕ್ಷೇಪಾರ್ಹ ವಿಷಯಗಳನ್ನು ಹೇಳುತ್ತಾರೆ ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೊರೊನಾ ಹರಡುವುದೇಗೆಂದು ಮುಸ್ಲಿಂ ಯುವಕನಿಂದ ಟಿಕ್‌ಟಾಕ್‌? ಈ ಸುದ್ದಿ ನಿಜವೇ?


ಕೊರೊನಾ ಸಾಂಕ್ರಾಮಿಕವು ಎಲ್ಲರನ್ನೂ ಸಮಾನವಾಗಿ ಪರಿಣಾಮ ಬೀರುತ್ತದೆ ಎಂದು ಕಳೆದ ವಾರ ಪ್ರಧಾನಿ ಮೋದಿ ಹೇಳಿದ್ದರು. “ಕೊರೊನಾ ಜನಾಂಗ, ಧರ್ಮ, ಬಣ್ಣ, ಜಾತಿ, ಮತ, ಭಾಷೆ ಅಥವಾ ಗಡಿಯನ್ನು ನೋಡುವುದಿಲ್ಲ. ನಾವು ಒಗ್ಗಟ್ಟಿನಿಂದ ಇದಬೇಕು” ಎಂದು ಪ್ರಧಾನಿ ಮೋದಿ ಲಿಂಕ್ಡಿನ್‌ ಪೋಸ್ಟ್‌ನಲ್ಲಿ ತಿಳಿಸಿದ್ದರು.

ತಿವಾರಿಯ ಹೇಳಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಟೀಕಿಸಿದ್ದಾರೆ. ನಟಿ ಹಾಗೂ ಕಾಂಗ್ರೆಸ್ ನಾಯಕಿ ನಗ್ಮಾ “ಮೋದಿ ಮೊದಲು ನಿಮ್ಮ ಜನರಿಗೆ ಪಾಠ ಕಲಿಸಿ” ಎಂದು ಟ್ವೀಟಿಸಿದ್ದಾರೆ.

 

ಉತ್ತರಪ್ರದೇಶದಲ್ಲಿ, ಕೊರೊನಾ ವೈರಸ್ ಬಗೆಗಿನ ವದಂತಿಗಳನ್ನು ನಂಬಿ ಮುಸ್ಲಿಂ ಮಾರಾಟಗಾರರನ್ನು ಗುರಿಯಾಗಿಸಿಕೊಂಡು ಹಲವಾರು ಘಟನೆಗಳು ವರದಿಯಾಗಿವೆ.

ಲಖಿಂಪುರದ ಮುಸ್ಲಿಂ ಹಣ್ಣು ಮಾರಾಟಗಾರನನ್ನು ಕಲ್ಲಂಗಡಿಗಳನ್ನು ಮಾರಾಟ ಮಾಡುವ ಮೊದಲು ಉಗುಳಿದ್ದಾರೆ ಎಂದು ಆರೋಪಿಸಲಾಗಿತ್ತು. ವ್ಯಕ್ತಿಯೊಬ್ಬ ಅತ್ತು ಕೈಮುಗಿದು ತಾನು ಯಾವುದೇ ತಪ್ಪು ಮಾಡಿಲ್ಲ ಹಾಗು ನನಗೆ ಹೋಗಲು ಅವಕಾಶ ನೀಡಬೇಕು ಎಂದು ಮನವಿ ಮಾಡುತ್ತಿರುವ ವಿಡಿಯೊ ವೈರಲಾಗಿತ್ತು. ಆದರೆ ಯುಪಿ ಪೊಲೀಸರ ತಂಡ ಸ್ಥಳಕ್ಕೆ ತಲುಪಿ ವ್ಯಕ್ತಿಯನ್ನು ರಕ್ಷಿಸಿ, ಮಾರಾಟಗಾರರ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ತಿಳಿಸಿದೆ.

ಕೆಲವು ದಿನಗಳ ಹಿಂದೆ ಕೂಡಾ ಮಹೋಬಾ ಜಿಲ್ಲೆಯ ತರಕಾರಿ ಮಾರಾಟಗಾರರು ತಮ್ಮನ್ನು ಬೆದರಿಸಲಾಗುತ್ತಿದೆ ಎಂದು ಜಿಲ್ಲಾಡಳಿತಕ್ಕೆ ಪತ್ರ ಬರೆದು ದೂರು ನೀಡಿದ್ದರು. ಆದರೆ ಜಿಲ್ಲಾಡಳಿತವು ವಿಚಾರಣೆ ನಡೆಸಿ ಆರೋಪವನ್ನು ದೃಡೀಕರಿಸಲು ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಕೊರೊನಾ ಹರಡಲು ಮುಸ್ಲಿಂ ವ್ಯಕ್ತಿ ಪೆಟ್ರೋಲ್‌ ಪಂಪ್‌ನಲ್ಲಿ ನೋಟು ಎಸೆದನೆ ??


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...