Homeಕರ್ನಾಟಕ'ಆತ್ಮಸಾಕ್ಷಿಗೂ ದರ ಇದೆಯೇ?' ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದರು. “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರು. ಈ ಬಗ್ಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌  ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು  ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ಸುರೇಶ್‌ ಕುಮಾರ್‌ಗೆ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ್ದ ಎಸ್‌ಟಿ ಸೋಮಶೇಖರ್‌, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ. “ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪ್ರಶ್ನಿಸಿದ್ದರು. ಇದಕ್ಕೆ ಎಕ್ಸ್‌ ಬಳಕೆದಾರರು ಸುರೇಶ್‌ ಕುಮಾರ್‌ಗೆ ಹಲವು ಘಟನೆಗಳನ್ನು ನೆನೆಪಿಸಿ ಮಂಗಳಾರತಿ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಸುರೇಶ್‌ ಕುಮಾರ್‌ ಅವರಿಗೆ ಪ್ರತಿಕ್ರಿಯಿಸಿರುವ ಚೆನ್ನ ಸೋಮೇಶ್ವರ ಎಂಬವರು, ಆತ್ಮಸಾಕ್ಷಿಗೆ ದರವಿಲ್ಲಾ… ದರ ಕಟ್ಟಲು ಪ್ರಯತ್ನಿಸಿದವರಿಗೆ ಆತ್ಮರಾಮನಿಂದ ತಪ್ಪಿಸಿಕೊಂಡರೂ ಕಾನೂನಿನ ಆಯಾಮದಿಂದ ತಪ್ಪಿಸಿಕೊಳ್ಳಲಾಗದು. ಸಂವಿಧಾನದ ಆತ್ಮವೇ ಪ್ರಜಾಪ್ರಭುತ್ವ, ಅದನ್ನು ತೆಲಂಗಾಣದಲ್ಲಿ, ಇತ್ತೀಚೆಗೆ ಚಂಡೀಗಡದಲ್ಲಿ ಮಾರಣಹೋಮ ಮಾಡಲೆತ್ನಿಸಿದ್ದಾಗಿದೆ ಎಂದು ಬಿಜೆಪಿಯ ಬಿಎಲ್‌ ಸಂತೋಷ್‌ಗೆ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನಿಸಿರುವ ಕುರಿತ ಸುದ್ದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದಾರೆ.

ಇದಲ್ಲದೆ ಕಳೆದ ಅವಧಿಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರಕಾರವನ್ನು ಉರುಳಿಸಿ 14 ಮಂದಿ ಕಾಂಗ್ರೆಸ್‌ ಶಾಸಕರು, ಮೂವರು ಜೆಡಿಎಸ್‌ ಶಾಸಕರು ಸೇರಿ ಒಟ್ಟು 17 ಮಂದಿ ಶಾಸಕರು ಆಪರೇಷನ್‌ ಕಮಲಕ್ಕೆ ಒಳಗಾಗಿ  ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸರಕಾರವನ್ನು ರಚಿಸಿದ್ದರು. ಈ ವೇಳೆ ನಿಮ್ಮ ಆತ್ಮಸಾಕ್ಷಿ ಎಲ್ಲಿಗೆ ಹೋಗಿತ್ತು ಎಂದು ಹಲವರು ಸರೇಶ್‌ ಕುಮಾರ್‌ಗೆ ಪ್ರಶ್ನೆಯನ್ನು ಮಾಡಿದ್ದಾರೆ.

ರೋಹನ್‌ ಗೌಡ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ನೀವು ಆತ್ಮಸಾಕ್ಷಿಯನ್ನು ನಿಮ್ಮ ಪಕ್ಷಕ್ಕೆ ಕರೆತಂದಾಗ ದರ ನಿಗದಿ ಆಗಿ ವಿಲೇವಾರಿ ಕೂಡ ಆಗಿತ್ತು ಎಂದು ಹೇಳಿದ್ದಾರೆ. ಸಾಗರ್‌ ಕಟೀಲ್‌ ಎಂಬವರು ಪ್ರತಿಕ್ರಿಯಿಸಿದ್ದು, ನಿಮ್ಮನ್ನೇ ಕೇಳಬೇಕು, ಹೋದ ಸರಕಾರದಲ್ಲಿ 18 ಶಾಸಕರನ್ನು ಖರೀದಿ ಮಾಡಿದ್ರಲ್ಲ, ಅವರ ಹತ್ತಿರ ಕೇಲ್ನೋಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಗುರು ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು,  ಬಿಎಲ್ ಸಂತೋಷ್‌ ಅವರನ್ನು ಕೇಳಿ, ಅವರಿಗೆ ಷರತ್ತು, ದರ ಎಲ್ಲಾ ಚೆನ್ನಾಗಿ ಗೊತ್ತು, ಸಿಕ್ಕರೆ ತಪ್ಪಿಸಿಕೊಳ್ಳುವ ದಾರಿಗಳು ಕೂಡ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಭಾಸ್ಕರ್‌ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ದರದ ಮುಂದೆ ಆತ್ಮಸಾಕ್ಷಿ ಓಡಿ ಹೋಗುತ್ತದೆ, ನಿಮ್ಮ ಸಹೋದ್ಯೋಗಿಗಳಿಗೆ ಒಮ್ಮೆ ಕೇಳಿ ನೋಡಿ ಎಂದು ಸುರೇಶ್‌ ಕುಮಾರ್‌ಗೆ ಕಾಲೆಳೆದಿದ್ದಾರೆ. ಅರುಣ್‌ ಎಂಬವರು ಪ್ರತಿಕ್ರಿಯಿಸಿ, ನೀವೇ ಅಲ್ವ ರೇಟ್‌ ಫಿಕ್ಸ್‌ ಮಾಡುವವರು, ನಿಮಗೆ ಮರೆತು ಹೋಯ್ತಾ ಎಂದು ಪ್ರಶ್ನಿಸಿದ್ದಾರೆ. ಕೃಷ್ಣ ಎಂಬವರು ಪ್ರತಿಕ್ರಿಯಿಸಿದ್ದು, ಆಪರೇಷನ್‌ ಕಮಲದಲ್ಲಿ ಆತ್ಮಸಾಕ್ಷಿಗೆ ದರ ನಿಗದಿ ಮಾಡಿದಂತಿದೆ ಎಂದು ಪೋಸ್ಟ್‌ ಮಾಡಿದ್ದಾರೆ. ಹಾರಿಸ್‌ ಎಂಬವರು ಪ್ರತಿಕ್ರಿಯಿಸಿ, ಮೊದಲು ನಿಮ್ಮನ್ನು ನೀವೇ ಕೇಳ್ಕೊಳ್ಳಿ ಎಂದು ಹೇಳಿದ್ದಾರೆ.

ಮುರಳಿ ರಮೇಶ್‌ ಎಂಬವರು, ಕಾಂಗ್ರೆಸ್‌ನಿಂದ ಬಂದು ಬಿಜೆಪಿ ಸೇರಿದಾಗ ನಿನ್ನ ಆತ್ಮಸಾಕ್ಷಿ ಏನಾಯ್ತು ಎಂದ ಸುರೇಶ್‌ ಕುಮಾರ್‌ಗೆ ಪ್ರಶ್ನಿಸಿದ್ದಾರೆ. ಅಪ್ಪು ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೊದಲ ಬಾರಿ ಅಂದರೆ 2008ರಲ್ಲಿ ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಶಾಸಕರನ್ನು ಕರೆದುಕೊಂಡು ಸರ್ಕಾರ ಮಾಡಿದ್ರಲ್ಲ ಅವನನ್ನ ಕೇಳು ಎಂದು ಸುರೇಶ್‌ ಕುಮಾರ್‌ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ, ಕರ್ನಾಟಕ ಅಲ್ಲದೆ ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮೂಲಕ ಈ ಮೊದಲು ಸರಕಾರವನ್ನು ರಚಿಸಿತ್ತು. ಇದರ ಇತ್ತೀಚಿನ ನಿದರ್ಶನ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿದೆ. ಬಿಜೆಪಿ ಸರಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಪ್ರತಿಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರುವಂತೆ ಒತ್ತಡ ಹಾಕುತ್ತಿದೆ ಎಂಬ ಆರೋಪಗಳು ಕೂಡ ಈ ಮೊದಲು ಕೇಳಿ ಬಂದಿತ್ತು. ತೆಲಂಗಾಣದಲ್ಲಿ ಬಿಎಲ್‌ ಸಂತೋಷ್‌ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನವನ್ನು ಮಾಡಿ ಸಿಕ್ಕಿಬಿದ್ದಿದ್ದರು. ಈ ಕುರಿತ ಪ್ರಕರಣವನ್ನು ಅವರು ಇದೀಗ ಎದುರಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ರಾಜ್ಯಸಭೆ ಚುನಾವಣೆಯಲ್ಲಿ ಎಸ್‌ಟಿ ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದಕ್ಕೆ ಕೇಳಿದ ‘ಆತ್ಮಸಾಕ್ಷಿಯ ಪ್ರಶ್ನೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ಸರಿಯಾಗಿ ಪಾಠ ಮಾಡಿದ್ದಾರೆ.

 ಇದನ್ನು ಓದಿ: ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...