Homeಕರ್ನಾಟಕ'ಆತ್ಮಸಾಕ್ಷಿಗೂ ದರ ಇದೆಯೇ?' ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದರು. “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರು. ಈ ಬಗ್ಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌  ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು  ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ಸುರೇಶ್‌ ಕುಮಾರ್‌ಗೆ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ್ದ ಎಸ್‌ಟಿ ಸೋಮಶೇಖರ್‌, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ. “ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪ್ರಶ್ನಿಸಿದ್ದರು. ಇದಕ್ಕೆ ಎಕ್ಸ್‌ ಬಳಕೆದಾರರು ಸುರೇಶ್‌ ಕುಮಾರ್‌ಗೆ ಹಲವು ಘಟನೆಗಳನ್ನು ನೆನೆಪಿಸಿ ಮಂಗಳಾರತಿ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಸುರೇಶ್‌ ಕುಮಾರ್‌ ಅವರಿಗೆ ಪ್ರತಿಕ್ರಿಯಿಸಿರುವ ಚೆನ್ನ ಸೋಮೇಶ್ವರ ಎಂಬವರು, ಆತ್ಮಸಾಕ್ಷಿಗೆ ದರವಿಲ್ಲಾ… ದರ ಕಟ್ಟಲು ಪ್ರಯತ್ನಿಸಿದವರಿಗೆ ಆತ್ಮರಾಮನಿಂದ ತಪ್ಪಿಸಿಕೊಂಡರೂ ಕಾನೂನಿನ ಆಯಾಮದಿಂದ ತಪ್ಪಿಸಿಕೊಳ್ಳಲಾಗದು. ಸಂವಿಧಾನದ ಆತ್ಮವೇ ಪ್ರಜಾಪ್ರಭುತ್ವ, ಅದನ್ನು ತೆಲಂಗಾಣದಲ್ಲಿ, ಇತ್ತೀಚೆಗೆ ಚಂಡೀಗಡದಲ್ಲಿ ಮಾರಣಹೋಮ ಮಾಡಲೆತ್ನಿಸಿದ್ದಾಗಿದೆ ಎಂದು ಬಿಜೆಪಿಯ ಬಿಎಲ್‌ ಸಂತೋಷ್‌ಗೆ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನಿಸಿರುವ ಕುರಿತ ಸುದ್ದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದಾರೆ.

ಇದಲ್ಲದೆ ಕಳೆದ ಅವಧಿಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರಕಾರವನ್ನು ಉರುಳಿಸಿ 14 ಮಂದಿ ಕಾಂಗ್ರೆಸ್‌ ಶಾಸಕರು, ಮೂವರು ಜೆಡಿಎಸ್‌ ಶಾಸಕರು ಸೇರಿ ಒಟ್ಟು 17 ಮಂದಿ ಶಾಸಕರು ಆಪರೇಷನ್‌ ಕಮಲಕ್ಕೆ ಒಳಗಾಗಿ  ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸರಕಾರವನ್ನು ರಚಿಸಿದ್ದರು. ಈ ವೇಳೆ ನಿಮ್ಮ ಆತ್ಮಸಾಕ್ಷಿ ಎಲ್ಲಿಗೆ ಹೋಗಿತ್ತು ಎಂದು ಹಲವರು ಸರೇಶ್‌ ಕುಮಾರ್‌ಗೆ ಪ್ರಶ್ನೆಯನ್ನು ಮಾಡಿದ್ದಾರೆ.

ರೋಹನ್‌ ಗೌಡ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ನೀವು ಆತ್ಮಸಾಕ್ಷಿಯನ್ನು ನಿಮ್ಮ ಪಕ್ಷಕ್ಕೆ ಕರೆತಂದಾಗ ದರ ನಿಗದಿ ಆಗಿ ವಿಲೇವಾರಿ ಕೂಡ ಆಗಿತ್ತು ಎಂದು ಹೇಳಿದ್ದಾರೆ. ಸಾಗರ್‌ ಕಟೀಲ್‌ ಎಂಬವರು ಪ್ರತಿಕ್ರಿಯಿಸಿದ್ದು, ನಿಮ್ಮನ್ನೇ ಕೇಳಬೇಕು, ಹೋದ ಸರಕಾರದಲ್ಲಿ 18 ಶಾಸಕರನ್ನು ಖರೀದಿ ಮಾಡಿದ್ರಲ್ಲ, ಅವರ ಹತ್ತಿರ ಕೇಲ್ನೋಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಗುರು ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು,  ಬಿಎಲ್ ಸಂತೋಷ್‌ ಅವರನ್ನು ಕೇಳಿ, ಅವರಿಗೆ ಷರತ್ತು, ದರ ಎಲ್ಲಾ ಚೆನ್ನಾಗಿ ಗೊತ್ತು, ಸಿಕ್ಕರೆ ತಪ್ಪಿಸಿಕೊಳ್ಳುವ ದಾರಿಗಳು ಕೂಡ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಭಾಸ್ಕರ್‌ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ದರದ ಮುಂದೆ ಆತ್ಮಸಾಕ್ಷಿ ಓಡಿ ಹೋಗುತ್ತದೆ, ನಿಮ್ಮ ಸಹೋದ್ಯೋಗಿಗಳಿಗೆ ಒಮ್ಮೆ ಕೇಳಿ ನೋಡಿ ಎಂದು ಸುರೇಶ್‌ ಕುಮಾರ್‌ಗೆ ಕಾಲೆಳೆದಿದ್ದಾರೆ. ಅರುಣ್‌ ಎಂಬವರು ಪ್ರತಿಕ್ರಿಯಿಸಿ, ನೀವೇ ಅಲ್ವ ರೇಟ್‌ ಫಿಕ್ಸ್‌ ಮಾಡುವವರು, ನಿಮಗೆ ಮರೆತು ಹೋಯ್ತಾ ಎಂದು ಪ್ರಶ್ನಿಸಿದ್ದಾರೆ. ಕೃಷ್ಣ ಎಂಬವರು ಪ್ರತಿಕ್ರಿಯಿಸಿದ್ದು, ಆಪರೇಷನ್‌ ಕಮಲದಲ್ಲಿ ಆತ್ಮಸಾಕ್ಷಿಗೆ ದರ ನಿಗದಿ ಮಾಡಿದಂತಿದೆ ಎಂದು ಪೋಸ್ಟ್‌ ಮಾಡಿದ್ದಾರೆ. ಹಾರಿಸ್‌ ಎಂಬವರು ಪ್ರತಿಕ್ರಿಯಿಸಿ, ಮೊದಲು ನಿಮ್ಮನ್ನು ನೀವೇ ಕೇಳ್ಕೊಳ್ಳಿ ಎಂದು ಹೇಳಿದ್ದಾರೆ.

ಮುರಳಿ ರಮೇಶ್‌ ಎಂಬವರು, ಕಾಂಗ್ರೆಸ್‌ನಿಂದ ಬಂದು ಬಿಜೆಪಿ ಸೇರಿದಾಗ ನಿನ್ನ ಆತ್ಮಸಾಕ್ಷಿ ಏನಾಯ್ತು ಎಂದ ಸುರೇಶ್‌ ಕುಮಾರ್‌ಗೆ ಪ್ರಶ್ನಿಸಿದ್ದಾರೆ. ಅಪ್ಪು ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೊದಲ ಬಾರಿ ಅಂದರೆ 2008ರಲ್ಲಿ ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಶಾಸಕರನ್ನು ಕರೆದುಕೊಂಡು ಸರ್ಕಾರ ಮಾಡಿದ್ರಲ್ಲ ಅವನನ್ನ ಕೇಳು ಎಂದು ಸುರೇಶ್‌ ಕುಮಾರ್‌ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ, ಕರ್ನಾಟಕ ಅಲ್ಲದೆ ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮೂಲಕ ಈ ಮೊದಲು ಸರಕಾರವನ್ನು ರಚಿಸಿತ್ತು. ಇದರ ಇತ್ತೀಚಿನ ನಿದರ್ಶನ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿದೆ. ಬಿಜೆಪಿ ಸರಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಪ್ರತಿಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರುವಂತೆ ಒತ್ತಡ ಹಾಕುತ್ತಿದೆ ಎಂಬ ಆರೋಪಗಳು ಕೂಡ ಈ ಮೊದಲು ಕೇಳಿ ಬಂದಿತ್ತು. ತೆಲಂಗಾಣದಲ್ಲಿ ಬಿಎಲ್‌ ಸಂತೋಷ್‌ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನವನ್ನು ಮಾಡಿ ಸಿಕ್ಕಿಬಿದ್ದಿದ್ದರು. ಈ ಕುರಿತ ಪ್ರಕರಣವನ್ನು ಅವರು ಇದೀಗ ಎದುರಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ರಾಜ್ಯಸಭೆ ಚುನಾವಣೆಯಲ್ಲಿ ಎಸ್‌ಟಿ ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದಕ್ಕೆ ಕೇಳಿದ ‘ಆತ್ಮಸಾಕ್ಷಿಯ ಪ್ರಶ್ನೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ಸರಿಯಾಗಿ ಪಾಠ ಮಾಡಿದ್ದಾರೆ.

 ಇದನ್ನು ಓದಿ: ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...