Homeಕರ್ನಾಟಕ'ಆತ್ಮಸಾಕ್ಷಿಗೂ ದರ ಇದೆಯೇ?' ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪೋಸ್ಟ್‌ ಮಾಡಿ ಪೇಚೆಗೆ ಸಿಲುಕಿದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌

- Advertisement -
- Advertisement -

ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರು ಅಡ್ಡಮತದಾನ ಮಾಡಿದ್ದರು. “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ” ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದರು. ಈ ಬಗ್ಗೆ ಮಾಜಿ ಸಚಿವ ಮತ್ತು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌  ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು  ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳ ಬಳಕೆದಾರರು ಸುರೇಶ್‌ ಕುಮಾರ್‌ಗೆ ಸರಿಯಾಗಿ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಮತ ಚಲಾಯಿಸಿದ ಬಳಿಕ‌ ಮಾಧ್ಯಮಗಳ ಜೊತೆ ಮಾತನಾಡಿದ್ದ ಎಸ್‌ಟಿ ಸೋಮಶೇಖರ್‌, “ಆತ್ಮಸಾಕ್ಷಿಯಂತೆ ಮತ ಚಲಾಯಿಸಿ, ಮತ ಪತ್ರವನ್ನು ಚುನಾವಣಾ ಏಜೆಂಟ್‌ಗೆ ತೋರಿಸಿದ್ದೇನೆ. “ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡುವುದಾಗಿ ಭರವಸೆ ನೀಡಿದ್ದಾರೋ, ಅವರಿಗೆ ಮತ ಹಾಕಿದ್ದೇನೆ. ಇದುವರೆಗೆ ಪಕ್ಷ ಹೇಳಿದ ಹಾಗೆ ಕೇಳಿದ್ದೇನೆ. ಆದರೆ, ಈ ಬಾರಿ ನನ್ನ ಕ್ಷೇತ್ರದ ಅಭಿವೃದ್ದಿಗೆ ಅನುದಾನ ಕೊಡುವುದಾಗಿ ಭರವಸೆ ನೀಡಿದವರ ಪರ ಮತ ಚಲಾಯಿಸಿದ್ದೇನೆ ಎಂದು ಹೇಳಿದ್ದರು.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ‘ಆತ್ಮಸಾಕ್ಷಿಗೂ ದರ ಇದೆಯೇ?’ ಎಂದು ಪ್ರಶ್ನಿಸಿದ್ದರು. ಇದಕ್ಕೆ ಎಕ್ಸ್‌ ಬಳಕೆದಾರರು ಸುರೇಶ್‌ ಕುಮಾರ್‌ಗೆ ಹಲವು ಘಟನೆಗಳನ್ನು ನೆನೆಪಿಸಿ ಮಂಗಳಾರತಿ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಸುರೇಶ್‌ ಕುಮಾರ್‌ ಅವರಿಗೆ ಪ್ರತಿಕ್ರಿಯಿಸಿರುವ ಚೆನ್ನ ಸೋಮೇಶ್ವರ ಎಂಬವರು, ಆತ್ಮಸಾಕ್ಷಿಗೆ ದರವಿಲ್ಲಾ… ದರ ಕಟ್ಟಲು ಪ್ರಯತ್ನಿಸಿದವರಿಗೆ ಆತ್ಮರಾಮನಿಂದ ತಪ್ಪಿಸಿಕೊಂಡರೂ ಕಾನೂನಿನ ಆಯಾಮದಿಂದ ತಪ್ಪಿಸಿಕೊಳ್ಳಲಾಗದು. ಸಂವಿಧಾನದ ಆತ್ಮವೇ ಪ್ರಜಾಪ್ರಭುತ್ವ, ಅದನ್ನು ತೆಲಂಗಾಣದಲ್ಲಿ, ಇತ್ತೀಚೆಗೆ ಚಂಡೀಗಡದಲ್ಲಿ ಮಾರಣಹೋಮ ಮಾಡಲೆತ್ನಿಸಿದ್ದಾಗಿದೆ ಎಂದು ಬಿಜೆಪಿಯ ಬಿಎಲ್‌ ಸಂತೋಷ್‌ಗೆ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನಿಸಿರುವ ಕುರಿತ ಸುದ್ದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿದ್ದಾರೆ.

ಇದಲ್ಲದೆ ಕಳೆದ ಅವಧಿಯಲ್ಲಿ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸರಕಾರವನ್ನು ಉರುಳಿಸಿ 14 ಮಂದಿ ಕಾಂಗ್ರೆಸ್‌ ಶಾಸಕರು, ಮೂವರು ಜೆಡಿಎಸ್‌ ಶಾಸಕರು ಸೇರಿ ಒಟ್ಟು 17 ಮಂದಿ ಶಾಸಕರು ಆಪರೇಷನ್‌ ಕಮಲಕ್ಕೆ ಒಳಗಾಗಿ  ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿ ಸರಕಾರವನ್ನು ರಚಿಸಿದ್ದರು. ಈ ವೇಳೆ ನಿಮ್ಮ ಆತ್ಮಸಾಕ್ಷಿ ಎಲ್ಲಿಗೆ ಹೋಗಿತ್ತು ಎಂದು ಹಲವರು ಸರೇಶ್‌ ಕುಮಾರ್‌ಗೆ ಪ್ರಶ್ನೆಯನ್ನು ಮಾಡಿದ್ದಾರೆ.

ರೋಹನ್‌ ಗೌಡ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ನೀವು ಆತ್ಮಸಾಕ್ಷಿಯನ್ನು ನಿಮ್ಮ ಪಕ್ಷಕ್ಕೆ ಕರೆತಂದಾಗ ದರ ನಿಗದಿ ಆಗಿ ವಿಲೇವಾರಿ ಕೂಡ ಆಗಿತ್ತು ಎಂದು ಹೇಳಿದ್ದಾರೆ. ಸಾಗರ್‌ ಕಟೀಲ್‌ ಎಂಬವರು ಪ್ರತಿಕ್ರಿಯಿಸಿದ್ದು, ನಿಮ್ಮನ್ನೇ ಕೇಳಬೇಕು, ಹೋದ ಸರಕಾರದಲ್ಲಿ 18 ಶಾಸಕರನ್ನು ಖರೀದಿ ಮಾಡಿದ್ರಲ್ಲ, ಅವರ ಹತ್ತಿರ ಕೇಲ್ನೋಡಿ ಎಂದು ಪ್ರತಿಕ್ರಿಯಿಸಿದ್ದಾರೆ. ಗುರು ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು,  ಬಿಎಲ್ ಸಂತೋಷ್‌ ಅವರನ್ನು ಕೇಳಿ, ಅವರಿಗೆ ಷರತ್ತು, ದರ ಎಲ್ಲಾ ಚೆನ್ನಾಗಿ ಗೊತ್ತು, ಸಿಕ್ಕರೆ ತಪ್ಪಿಸಿಕೊಳ್ಳುವ ದಾರಿಗಳು ಕೂಡ ಗೊತ್ತು ಎಂದು ಪ್ರತಿಕ್ರಿಯಿಸಿದ್ದಾರೆ.

ಭಾಸ್ಕರ್‌ ಎಂಬವರು ಈ ಕುರಿತು ಪ್ರತಿಕ್ರಿಯಿಸಿದ್ದು, ದರದ ಮುಂದೆ ಆತ್ಮಸಾಕ್ಷಿ ಓಡಿ ಹೋಗುತ್ತದೆ, ನಿಮ್ಮ ಸಹೋದ್ಯೋಗಿಗಳಿಗೆ ಒಮ್ಮೆ ಕೇಳಿ ನೋಡಿ ಎಂದು ಸುರೇಶ್‌ ಕುಮಾರ್‌ಗೆ ಕಾಲೆಳೆದಿದ್ದಾರೆ. ಅರುಣ್‌ ಎಂಬವರು ಪ್ರತಿಕ್ರಿಯಿಸಿ, ನೀವೇ ಅಲ್ವ ರೇಟ್‌ ಫಿಕ್ಸ್‌ ಮಾಡುವವರು, ನಿಮಗೆ ಮರೆತು ಹೋಯ್ತಾ ಎಂದು ಪ್ರಶ್ನಿಸಿದ್ದಾರೆ. ಕೃಷ್ಣ ಎಂಬವರು ಪ್ರತಿಕ್ರಿಯಿಸಿದ್ದು, ಆಪರೇಷನ್‌ ಕಮಲದಲ್ಲಿ ಆತ್ಮಸಾಕ್ಷಿಗೆ ದರ ನಿಗದಿ ಮಾಡಿದಂತಿದೆ ಎಂದು ಪೋಸ್ಟ್‌ ಮಾಡಿದ್ದಾರೆ. ಹಾರಿಸ್‌ ಎಂಬವರು ಪ್ರತಿಕ್ರಿಯಿಸಿ, ಮೊದಲು ನಿಮ್ಮನ್ನು ನೀವೇ ಕೇಳ್ಕೊಳ್ಳಿ ಎಂದು ಹೇಳಿದ್ದಾರೆ.

ಮುರಳಿ ರಮೇಶ್‌ ಎಂಬವರು, ಕಾಂಗ್ರೆಸ್‌ನಿಂದ ಬಂದು ಬಿಜೆಪಿ ಸೇರಿದಾಗ ನಿನ್ನ ಆತ್ಮಸಾಕ್ಷಿ ಏನಾಯ್ತು ಎಂದ ಸುರೇಶ್‌ ಕುಮಾರ್‌ಗೆ ಪ್ರಶ್ನಿಸಿದ್ದಾರೆ. ಅಪ್ಪು ಎಂಬವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮೊದಲ ಬಾರಿ ಅಂದರೆ 2008ರಲ್ಲಿ ಯಡಿಯೂರಪ್ಪ ಆಪರೇಷನ್ ಕಮಲ ಮಾಡಿ ಶಾಸಕರನ್ನು ಕರೆದುಕೊಂಡು ಸರ್ಕಾರ ಮಾಡಿದ್ರಲ್ಲ ಅವನನ್ನ ಕೇಳು ಎಂದು ಸುರೇಶ್‌ ಕುಮಾರ್‌ಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ, ಕರ್ನಾಟಕ ಅಲ್ಲದೆ ಮಧ್ಯಪ್ರದೇಶ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಆಪರೇಷನ್‌ ಕಮಲ ಮೂಲಕ ಈ ಮೊದಲು ಸರಕಾರವನ್ನು ರಚಿಸಿತ್ತು. ಇದರ ಇತ್ತೀಚಿನ ನಿದರ್ಶನ ಹಿಮಾಚಲ ಪ್ರದೇಶದಲ್ಲಿ ನಡೆಯುತ್ತಿದೆ. ಬಿಜೆಪಿ ಸರಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿ ಪ್ರತಿಪಕ್ಷಗಳ ನಾಯಕರನ್ನು ಪಕ್ಷಕ್ಕೆ ಸೇರುವಂತೆ ಒತ್ತಡ ಹಾಕುತ್ತಿದೆ ಎಂಬ ಆರೋಪಗಳು ಕೂಡ ಈ ಮೊದಲು ಕೇಳಿ ಬಂದಿತ್ತು. ತೆಲಂಗಾಣದಲ್ಲಿ ಬಿಎಲ್‌ ಸಂತೋಷ್‌ ಟಿಆರ್‌ಎಸ್‌ ಶಾಸಕರನ್ನು ಖರೀದಿಸಲು ಯತ್ನವನ್ನು ಮಾಡಿ ಸಿಕ್ಕಿಬಿದ್ದಿದ್ದರು. ಈ ಕುರಿತ ಪ್ರಕರಣವನ್ನು ಅವರು ಇದೀಗ ಎದುರಿಸುತ್ತಿದ್ದಾರೆ. ಈ ಮಧ್ಯೆ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌, ರಾಜ್ಯಸಭೆ ಚುನಾವಣೆಯಲ್ಲಿ ಎಸ್‌ಟಿ ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದಕ್ಕೆ ಕೇಳಿದ ‘ಆತ್ಮಸಾಕ್ಷಿಯ ಪ್ರಶ್ನೆಗೆ ಸಾಮಾಜಿಕ ಜಾಲತಾಣ ಬಳಕೆದಾರರು ಸರಿಯಾಗಿ ಪಾಠ ಮಾಡಿದ್ದಾರೆ.

 ಇದನ್ನು ಓದಿ: ರಾಜ್ಯಸಭಾ ಚುನಾವಣೆ: ಅಡ್ಡ ಮತದಾನ ಮಾಡಿದ ಎಸ್‌.ಟಿ ಸೋಮಶೇಖರ್: ವರದಿ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...