Homeಮುಖಪುಟಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

ಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

- Advertisement -
- Advertisement -

ಫತೇಪುರ್ ಸಿಕ್ರಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದ್ದು , ಪಕ್ಷದ ಸ್ಥಳೀಯ ಶಾಸಕ ಬಾಬುಲಾಲ್ ಚೌಧರಿ ಅವರು ಪಕ್ಷದ ಅಭ್ಯರ್ಥಿ ಮತ್ತು ಹಾಲಿ ಸಂಸದ ರಾಜ್‌ಕುಮಾರ್ ಚಹಾರ್ ವಿರುದ್ಧ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.

2014ರಿಂದ 2019ರವರೆಗೆ ಬಿಜೆಪಿ ಸಂಸದರಾಗಿದ್ದ ಚೌಧರಿ ಅವರಿಗೆ 2022ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿತ್ತು. ಸಂಸದ ರಾಜ್‌ಕುಮಾರ್ ಚಹಾರ್ ಅವರು ಆ ಬಳಿಕ ಕ್ಷೇತ್ರದಲ್ಲಿ ಸಂಸದರಾಗಿದ್ದರು. ಈ ಬಾರಿಯು ಲೋಕಸಭೆ ಚುನಾವಣೆಗೆ ಅವರಿಗೆ ಟಿಕೆಟ್‌ ನೀಡಲಾಗಿದೆ, ಆದರೆ ಸ್ವಪಕ್ಷದ ಅಭ್ಯರ್ಥಿಯ ವಿರುದ್ಧವೇ ಶಾಸಕ ಬಾಬುಲಾಲ್ ಚೌಧರಿ ತನ್ನ ಪುತ್ರ ರಾಮೇಶ್ವರ್ ಚೌಧರಿ (50) ಅವರನ್ನು ಕಣಕ್ಕಿಳಿಸಿದ್ದಾರೆ.

ಜಾಟ್ ಸಮುದಾಯದಿಂದ ಬಂದಿರುವ ಬಾಬುಲಾಲ್ ಚೌಧರಿ ಅವರು ಬಿಜೆಪಿಗೆ ಸೇರುವ ಮೊದಲು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಜೊತೆಗಿದ್ದರು. ತಮ್ಮ ಪುತ್ರನನ್ನು ಬಾಬುಲಾಲ್ ಚೌಧರಿ  “ಜನರ ಅಭ್ಯರ್ಥಿ” ಎಂದು ಹೇಳಿದ್ದು, ಜಾಟ್‌ ಸಮುದಾಯದ ಪಂಚಾಯತ್‌ನಲ್ಲಿ ಒಮ್ಮತದ ಆಗ್ರಹ ಬಂದ ಕೇಳಿ ಬಂದ ಕಾರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸ್ಥಳೀಯರು ಪಕ್ಷದ ಅಭ್ಯರ್ಥಿ ರಾಜ್‌ಕುಮಾರ್‌ಗಿಂತ ತಮ್ಮ ಮಗನಿಗೆ ಆದ್ಯತೆ ನೀಡುತ್ತಾರೆ, ಸಂಸದರು ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಲ್ಲ, ಅವರಿಗೆ ಇಲ್ಲಿನ ಸಮಸ್ಯೆ, ಕೊರತೆ ಬಗ್ಗೆ ಗೊತ್ತಿಲ್ಲ, ಜನರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಆಗ್ರಾ ಜಿಲ್ಲಾಧ್ಯಕ್ಷ ಗಿರಿರಾಜ್ ಕುಶ್ವಾಹ ಅವರು ಈ ಬಗ್ಗೆ ಮಾತನಾಡಿದ್ದು, ತಮ್ಮ ಮಗನ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಶಾಸಕ ಬಾಬುಲಾಲ್ ಅವರ ಮನವೊಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್‌ಕುಮಾರ್ ಚಾಹರ್ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ರಾಮೇಶ್ವರ್ ಚೌಧರಿ ಅವರು 1998 ಮತ್ತು 1999ರಲ್ಲಿ ಆಗ್ರಾ ಮತ್ತು ಮಥುರಾದಿಂದ ಅನುಕ್ರಮವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಮೂರು ಬಾರಿ ಶಾಸಕರಾಗಿದ್ದ ಬಾಬುಲಾಲ್ ಚೌಧರಿ ಅವರು 1996ರಲ್ಲಿ ಸ್ವತಂತ್ರವಾಗಿ ಮತ್ತು ನಂತರ ಲೋಕದಳದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ಮೂರನೇ ಬಾರಿಗೆ ಬಿಜೆಪಿಯಿಂದ ಗೆಲುವನ್ನು ಸಾಧಿಸಿದ್ದರು.

ಕಳೆದ ಐದು ವರ್ಷಗಳಲ್ಲಿ ಹಾಲಿ ಸಂಸದರು ಜನರ ಕೈಗೆ ಸಿಕ್ಕಿಲ್ಲ, ಕ್ಷೇತ್ರದ ಜನರ ಕೆಲಸವನ್ನು ಮಾಡಿಲ್ಲ, ಅದಕ್ಕೆ ಅವರ ವಿರುದ್ಧದ ಅಲೆ ಕ್ಷೇತ್ರದಲ್ಲಿದೆ ಎಂದು ಶಾಸಕ ಬಾಬುಲಾಲ್ ಚೌಧರಿ ಹೇಳಿದ್ದಾರೆ. ನಾನು ಕಳೆದ 10 ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಜನರ ಸುಖ-ದುಃಖಗಳಲ್ಲಿ ಅವರೊಂದಿಗಿದ್ದೆ, ನಾನೇಕೆ ಸ್ಪರ್ಧಿಸಬಾರದು? ಎಂದು ರಾಮೇಶ್ವರ್ ಪ್ರಶ್ನಿಸಿದ್ದಾರೆ.

ಸುಮಾರು 18 ಲಕ್ಷ ಮತದಾರರನ್ನು ಹೊಂದಿರುವ ಫತೇಪುರ್ ಸಿಕ್ರಿ ಲೋಕಸಭೆ ಕ್ಷೇತ್ರದಲ್ಲಿ ಸುಮಾರು 3 ಲಕ್ಷ ಜಾಟ್ ಸಮುದಾಯದ ಜನರಿದ್ದಾರೆ. ಈ ಲೋಕಸಭಾ ಕ್ಷೇತ್ರ ಫತೇಪುರ್ ಸಿಕ್ರಿ, ಫತೇಹಾಬಾದ್, ಖೇರಗಢ್, ಆಗ್ರಾ ಗ್ರಾಮಾಂತರ ಮತ್ತು ಬಹ್ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...