Homeಮುಖಪುಟಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

ಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

- Advertisement -
- Advertisement -

ಫತೇಪುರ್ ಸಿಕ್ರಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದ್ದು , ಪಕ್ಷದ ಸ್ಥಳೀಯ ಶಾಸಕ ಬಾಬುಲಾಲ್ ಚೌಧರಿ ಅವರು ಪಕ್ಷದ ಅಭ್ಯರ್ಥಿ ಮತ್ತು ಹಾಲಿ ಸಂಸದ ರಾಜ್‌ಕುಮಾರ್ ಚಹಾರ್ ವಿರುದ್ಧ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.

2014ರಿಂದ 2019ರವರೆಗೆ ಬಿಜೆಪಿ ಸಂಸದರಾಗಿದ್ದ ಚೌಧರಿ ಅವರಿಗೆ 2022ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿತ್ತು. ಸಂಸದ ರಾಜ್‌ಕುಮಾರ್ ಚಹಾರ್ ಅವರು ಆ ಬಳಿಕ ಕ್ಷೇತ್ರದಲ್ಲಿ ಸಂಸದರಾಗಿದ್ದರು. ಈ ಬಾರಿಯು ಲೋಕಸಭೆ ಚುನಾವಣೆಗೆ ಅವರಿಗೆ ಟಿಕೆಟ್‌ ನೀಡಲಾಗಿದೆ, ಆದರೆ ಸ್ವಪಕ್ಷದ ಅಭ್ಯರ್ಥಿಯ ವಿರುದ್ಧವೇ ಶಾಸಕ ಬಾಬುಲಾಲ್ ಚೌಧರಿ ತನ್ನ ಪುತ್ರ ರಾಮೇಶ್ವರ್ ಚೌಧರಿ (50) ಅವರನ್ನು ಕಣಕ್ಕಿಳಿಸಿದ್ದಾರೆ.

ಜಾಟ್ ಸಮುದಾಯದಿಂದ ಬಂದಿರುವ ಬಾಬುಲಾಲ್ ಚೌಧರಿ ಅವರು ಬಿಜೆಪಿಗೆ ಸೇರುವ ಮೊದಲು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಜೊತೆಗಿದ್ದರು. ತಮ್ಮ ಪುತ್ರನನ್ನು ಬಾಬುಲಾಲ್ ಚೌಧರಿ  “ಜನರ ಅಭ್ಯರ್ಥಿ” ಎಂದು ಹೇಳಿದ್ದು, ಜಾಟ್‌ ಸಮುದಾಯದ ಪಂಚಾಯತ್‌ನಲ್ಲಿ ಒಮ್ಮತದ ಆಗ್ರಹ ಬಂದ ಕೇಳಿ ಬಂದ ಕಾರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸ್ಥಳೀಯರು ಪಕ್ಷದ ಅಭ್ಯರ್ಥಿ ರಾಜ್‌ಕುಮಾರ್‌ಗಿಂತ ತಮ್ಮ ಮಗನಿಗೆ ಆದ್ಯತೆ ನೀಡುತ್ತಾರೆ, ಸಂಸದರು ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಲ್ಲ, ಅವರಿಗೆ ಇಲ್ಲಿನ ಸಮಸ್ಯೆ, ಕೊರತೆ ಬಗ್ಗೆ ಗೊತ್ತಿಲ್ಲ, ಜನರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಆಗ್ರಾ ಜಿಲ್ಲಾಧ್ಯಕ್ಷ ಗಿರಿರಾಜ್ ಕುಶ್ವಾಹ ಅವರು ಈ ಬಗ್ಗೆ ಮಾತನಾಡಿದ್ದು, ತಮ್ಮ ಮಗನ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಶಾಸಕ ಬಾಬುಲಾಲ್ ಅವರ ಮನವೊಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್‌ಕುಮಾರ್ ಚಾಹರ್ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ರಾಮೇಶ್ವರ್ ಚೌಧರಿ ಅವರು 1998 ಮತ್ತು 1999ರಲ್ಲಿ ಆಗ್ರಾ ಮತ್ತು ಮಥುರಾದಿಂದ ಅನುಕ್ರಮವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಮೂರು ಬಾರಿ ಶಾಸಕರಾಗಿದ್ದ ಬಾಬುಲಾಲ್ ಚೌಧರಿ ಅವರು 1996ರಲ್ಲಿ ಸ್ವತಂತ್ರವಾಗಿ ಮತ್ತು ನಂತರ ಲೋಕದಳದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ಮೂರನೇ ಬಾರಿಗೆ ಬಿಜೆಪಿಯಿಂದ ಗೆಲುವನ್ನು ಸಾಧಿಸಿದ್ದರು.

ಕಳೆದ ಐದು ವರ್ಷಗಳಲ್ಲಿ ಹಾಲಿ ಸಂಸದರು ಜನರ ಕೈಗೆ ಸಿಕ್ಕಿಲ್ಲ, ಕ್ಷೇತ್ರದ ಜನರ ಕೆಲಸವನ್ನು ಮಾಡಿಲ್ಲ, ಅದಕ್ಕೆ ಅವರ ವಿರುದ್ಧದ ಅಲೆ ಕ್ಷೇತ್ರದಲ್ಲಿದೆ ಎಂದು ಶಾಸಕ ಬಾಬುಲಾಲ್ ಚೌಧರಿ ಹೇಳಿದ್ದಾರೆ. ನಾನು ಕಳೆದ 10 ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಜನರ ಸುಖ-ದುಃಖಗಳಲ್ಲಿ ಅವರೊಂದಿಗಿದ್ದೆ, ನಾನೇಕೆ ಸ್ಪರ್ಧಿಸಬಾರದು? ಎಂದು ರಾಮೇಶ್ವರ್ ಪ್ರಶ್ನಿಸಿದ್ದಾರೆ.

ಸುಮಾರು 18 ಲಕ್ಷ ಮತದಾರರನ್ನು ಹೊಂದಿರುವ ಫತೇಪುರ್ ಸಿಕ್ರಿ ಲೋಕಸಭೆ ಕ್ಷೇತ್ರದಲ್ಲಿ ಸುಮಾರು 3 ಲಕ್ಷ ಜಾಟ್ ಸಮುದಾಯದ ಜನರಿದ್ದಾರೆ. ಈ ಲೋಕಸಭಾ ಕ್ಷೇತ್ರ ಫತೇಪುರ್ ಸಿಕ್ರಿ, ಫತೇಹಾಬಾದ್, ಖೇರಗಢ್, ಆಗ್ರಾ ಗ್ರಾಮಾಂತರ ಮತ್ತು ಬಹ್ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...