Homeಮುಖಪುಟಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

ಸ್ವಪಕ್ಷದ ಅಭ್ಯರ್ಥಿ ವಿರುದ್ದ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ ಶಾಸಕ

- Advertisement -
- Advertisement -

ಫತೇಪುರ್ ಸಿಕ್ರಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ದೊಡ್ಡ ಹೊಡೆತ ಬಿದ್ದಿದ್ದು , ಪಕ್ಷದ ಸ್ಥಳೀಯ ಶಾಸಕ ಬಾಬುಲಾಲ್ ಚೌಧರಿ ಅವರು ಪಕ್ಷದ ಅಭ್ಯರ್ಥಿ ಮತ್ತು ಹಾಲಿ ಸಂಸದ ರಾಜ್‌ಕುಮಾರ್ ಚಹಾರ್ ವಿರುದ್ಧ ತಮ್ಮ ಪುತ್ರನನ್ನು ಕಣಕ್ಕಿಳಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.

2014ರಿಂದ 2019ರವರೆಗೆ ಬಿಜೆಪಿ ಸಂಸದರಾಗಿದ್ದ ಚೌಧರಿ ಅವರಿಗೆ 2022ರ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿತ್ತು. ಸಂಸದ ರಾಜ್‌ಕುಮಾರ್ ಚಹಾರ್ ಅವರು ಆ ಬಳಿಕ ಕ್ಷೇತ್ರದಲ್ಲಿ ಸಂಸದರಾಗಿದ್ದರು. ಈ ಬಾರಿಯು ಲೋಕಸಭೆ ಚುನಾವಣೆಗೆ ಅವರಿಗೆ ಟಿಕೆಟ್‌ ನೀಡಲಾಗಿದೆ, ಆದರೆ ಸ್ವಪಕ್ಷದ ಅಭ್ಯರ್ಥಿಯ ವಿರುದ್ಧವೇ ಶಾಸಕ ಬಾಬುಲಾಲ್ ಚೌಧರಿ ತನ್ನ ಪುತ್ರ ರಾಮೇಶ್ವರ್ ಚೌಧರಿ (50) ಅವರನ್ನು ಕಣಕ್ಕಿಳಿಸಿದ್ದಾರೆ.

ಜಾಟ್ ಸಮುದಾಯದಿಂದ ಬಂದಿರುವ ಬಾಬುಲಾಲ್ ಚೌಧರಿ ಅವರು ಬಿಜೆಪಿಗೆ ಸೇರುವ ಮೊದಲು ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಜೊತೆಗಿದ್ದರು. ತಮ್ಮ ಪುತ್ರನನ್ನು ಬಾಬುಲಾಲ್ ಚೌಧರಿ  “ಜನರ ಅಭ್ಯರ್ಥಿ” ಎಂದು ಹೇಳಿದ್ದು, ಜಾಟ್‌ ಸಮುದಾಯದ ಪಂಚಾಯತ್‌ನಲ್ಲಿ ಒಮ್ಮತದ ಆಗ್ರಹ ಬಂದ ಕೇಳಿ ಬಂದ ಕಾರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಸ್ಥಳೀಯರು ಪಕ್ಷದ ಅಭ್ಯರ್ಥಿ ರಾಜ್‌ಕುಮಾರ್‌ಗಿಂತ ತಮ್ಮ ಮಗನಿಗೆ ಆದ್ಯತೆ ನೀಡುತ್ತಾರೆ, ಸಂಸದರು ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಿಲ್ಲ, ಅವರಿಗೆ ಇಲ್ಲಿನ ಸಮಸ್ಯೆ, ಕೊರತೆ ಬಗ್ಗೆ ಗೊತ್ತಿಲ್ಲ, ಜನರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿಯ ಆಗ್ರಾ ಜಿಲ್ಲಾಧ್ಯಕ್ಷ ಗಿರಿರಾಜ್ ಕುಶ್ವಾಹ ಅವರು ಈ ಬಗ್ಗೆ ಮಾತನಾಡಿದ್ದು, ತಮ್ಮ ಮಗನ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಶಾಸಕ ಬಾಬುಲಾಲ್ ಅವರ ಮನವೊಲಿಸಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ರಾಜ್‌ಕುಮಾರ್ ಚಾಹರ್ ಬಿಜೆಪಿಯ ಅಧಿಕೃತ ಅಭ್ಯರ್ಥಿಯಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ.

ರಾಮೇಶ್ವರ್ ಚೌಧರಿ ಅವರು 1998 ಮತ್ತು 1999ರಲ್ಲಿ ಆಗ್ರಾ ಮತ್ತು ಮಥುರಾದಿಂದ ಅನುಕ್ರಮವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಮೂರು ಬಾರಿ ಶಾಸಕರಾಗಿದ್ದ ಬಾಬುಲಾಲ್ ಚೌಧರಿ ಅವರು 1996ರಲ್ಲಿ ಸ್ವತಂತ್ರವಾಗಿ ಮತ್ತು ನಂತರ ಲೋಕದಳದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಗೆಲುವನ್ನು ಕಂಡಿದ್ದರು. ಮೂರನೇ ಬಾರಿಗೆ ಬಿಜೆಪಿಯಿಂದ ಗೆಲುವನ್ನು ಸಾಧಿಸಿದ್ದರು.

ಕಳೆದ ಐದು ವರ್ಷಗಳಲ್ಲಿ ಹಾಲಿ ಸಂಸದರು ಜನರ ಕೈಗೆ ಸಿಕ್ಕಿಲ್ಲ, ಕ್ಷೇತ್ರದ ಜನರ ಕೆಲಸವನ್ನು ಮಾಡಿಲ್ಲ, ಅದಕ್ಕೆ ಅವರ ವಿರುದ್ಧದ ಅಲೆ ಕ್ಷೇತ್ರದಲ್ಲಿದೆ ಎಂದು ಶಾಸಕ ಬಾಬುಲಾಲ್ ಚೌಧರಿ ಹೇಳಿದ್ದಾರೆ. ನಾನು ಕಳೆದ 10 ವರ್ಷಗಳಿಂದ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಜನರ ಸುಖ-ದುಃಖಗಳಲ್ಲಿ ಅವರೊಂದಿಗಿದ್ದೆ, ನಾನೇಕೆ ಸ್ಪರ್ಧಿಸಬಾರದು? ಎಂದು ರಾಮೇಶ್ವರ್ ಪ್ರಶ್ನಿಸಿದ್ದಾರೆ.

ಸುಮಾರು 18 ಲಕ್ಷ ಮತದಾರರನ್ನು ಹೊಂದಿರುವ ಫತೇಪುರ್ ಸಿಕ್ರಿ ಲೋಕಸಭೆ ಕ್ಷೇತ್ರದಲ್ಲಿ ಸುಮಾರು 3 ಲಕ್ಷ ಜಾಟ್ ಸಮುದಾಯದ ಜನರಿದ್ದಾರೆ. ಈ ಲೋಕಸಭಾ ಕ್ಷೇತ್ರ ಫತೇಪುರ್ ಸಿಕ್ರಿ, ಫತೇಹಾಬಾದ್, ಖೇರಗಢ್, ಆಗ್ರಾ ಗ್ರಾಮಾಂತರ ಮತ್ತು ಬಹ್ ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದೆ.

ಇದನ್ನು ಓದಿ: ಬಡ ಜನರಿಗೆ ಬದುಕು ಕಟ್ಟಿಕೊಳ್ಳಲು ನೆರವಾದ ‘ಕಾಂಗ್ರೆಸ್‌’ ಸರಕಾರದ ‘ಗ್ಯಾರಂಟಿ ಯೋಜನೆ’ ಬಗ್ಗೆ ತೇಜಸ್ವಿ ಸೂರ್ಯ ತುಚ್ಛ ಮಾತು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....