Homeಮುಖಪುಟಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

- Advertisement -
- Advertisement -

ಮುಸ್ಲಿಮರ ಮತದಾನದ ಹಕ್ಕನ್ನು ಹಿಂಪಡೆಯುವಂತೆ ಬಿಹಾರದ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಅವರು ಗುರುವಾರ ಒತ್ತಾಯಿಸಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಹಕ್ಕುಗಳನ್ನು ನೀಡಬೇಕು ಎಂದು ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಮಾತನ್ನು ಹೇಳಿದ್ದಾರೆ. 1947ರಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಮುಸ್ಲಿಂ ಸಮುದಾಯಕ್ಕೆ ಪಾಕಿಸ್ತಾನದ ರೂಪದಲ್ಲಿ ತುಂಡು ಭೂಮಿ ನೀಡಲಾಗಿತ್ತು. ಅವರು ಅಲ್ಲಿಗೆ ಹೋಗಬೇಕಿತ್ತು. ಅವರು ಈ ದೇಶದಲ್ಲಿ ನಮಗೆ ಬೇಡ ಎಂದು ಠಾಕೂರ್ ಹೇಳಿದ್ದಾರೆ.

“ಮುಸ್ಲಿಮರು ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆ ಮತ್ತು ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡಲು ಬಯಸುತ್ತಾರೆ. ಮುಸ್ಲಿಂ ನಾಯಕರು ಪ್ರತಿ ದೇಶವನ್ನು ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡುವ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಹಾಗೆ ಆಗಲು ನಾವು ಬಿಡಲಾರೆವು. ಆದ್ದರಿಂದ ನಾವು ಅವರಿಂದ ಮತದಾನದ ಹಕ್ಕುಗಳನ್ನು ಹಿಂಪಡೆದು ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ದೇಶದಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ ಎಂದು ಠಾಕೂರ್ ಹೇಳಿದ್ದಾರೆ. “ಮುಸ್ಲಿಮ್ ಸಮುದಾಯಕ್ಕೆ ಅಲ್ಪಸಂಖ್ಯಾತ ಎಂಬ ಪದವು ಸಂವಿಧಾನದ ಅಪಹಾಸ್ಯ ಎಂದು ನಾನು ಹೇಳುತ್ತೇನೆ. ಅವರು ಅಲ್ಪಸಂಖ್ಯಾತರಲ್ಲ. ಅವರ ಜನಸಂಖ್ಯೆಯು ನಿರಂತರವಾಗಿ ಹೆಚ್ಚುತ್ತಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಅಖ್ತರುಲ್ ಇಮಾಮ್ ಅವರು ಮತ್ತು ಎಐಎಂಐಎಂನ ಇತರ ಸದಸ್ಯರು ವಂದೇ ಮಾತರಂ ಅನ್ನು ಯಾವುದೇ ಸಾರ್ವಜನಿಕ ವೇದಿಕೆಗಳಲ್ಲಿ ವಿಶೇಷವಾಗಿ ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಹಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಸಂಪ್ರದಾಯದ ಪ್ರಕಾರ, ಬಿಹಾರ ವಿಧಾನಸಭಾ ಅಧಿವೇಶನಗಳು ರಾಷ್ಟ್ರಗೀತೆ ಜನ ಗಣ ಮನ ಮತ್ತು ವಂದೇ ಮಾತರಂನೊಂದಿಗೆ ಪ್ರಾರಂಭವಾಗುತ್ತವೆ ಅಥವಾ ಕೊನೆಗೊಳ್ಳುತ್ತವೆ.

ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅಖ್ತರುಲ್‌ ಇಮಾಮ್ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

“ರಾಷ್ಟ್ರಗೀತೆಯನ್ನು ಹಾಡಲು ನನಗೆ ಯಾವುದೇ ಅಭ್ಯಂತರವಿಲ್ಲ, ಆದರೆ ವಂದೇ ಮಾತರಂ ಹೇಳಲು ಅಥವಾ ಹಾಡಲು ನನ್ನ ವಿರೋಧವಿದೆ. ವಂದೇ ಮಾತರಂ ಬದಲಿಗೆ, ನಾನು ಸಂತೋಷದಿಂದ ‘ಮದರ್‌-ಎ-ವತನ್’ ಎಂದು ಹೇಳುತ್ತೇನೆ” ಎಂದು ಇಮಾಮ್‌ ಹೇಳಿದ್ದಾರೆ.

“ವಂದೇ ಮಾತರಂ ಭೂಮಿ ಮತ್ತು ಇಸ್ಲಾಂ ಅನುಮತಿಸದ ವಸ್ತುಗಳನ್ನು ಪೂಜಿಸುವಂತೆ ಹೇಳುತ್ತದೆ. ಆದ್ದರಿಂದ, ಅದನ್ನು ನಾವು ಯಾವುದೇ ವೇದಿಕೆಯಲ್ಲಿ ಹಾಡಲು ನಿರಾಕರಿಸುತ್ತೇವೆ. ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಬಹುಮತ ಹೊಂದಿದೆ. ಅವರು ವಿಧಾನ ಸಭಾ ಕಲಾಪದಿಂದ ವಂದೇ ಮಾತರಂ ಗೀತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಭಾರತದ ಪ್ರಜಾಪ್ರಭುತ್ವವನ್ನು ಪ್ರದರ್ಶಿಸಲು ಅವರು ಪ್ರತಿಯೊಂದು ಜಾತಿ ಮತ್ತು ಧರ್ಮವನ್ನು ಗೌರವಿಸಬೇಕು” ಎಂದು ಇಮಾಮ್ ಹೇಳಿದ್ದಾರೆ.

“ವಿಧಾನಸಭಾ ಸ್ಪೀಕರ್ ವಿಜಯ್ ಸಿನ್ಹಾ ಅವರು ಉಭಯ ಸದನಗಳಲ್ಲಿ ಪ್ರತಿಯೊಬ್ಬ ಸದಸ್ಯರು ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿದ್ದಾರೆ. ಇದನ್ನು ಅನುಸರಿಸದವರ ಸದನದ ಸದಸ್ಯತ್ವವನ್ನು ಸ್ಪೀಕರ್ ರದ್ದುಗೊಳಿಸಬೇಕು. ಎಐಎಂಐಎಂ ನಾಯಕರ ವರ್ತನೆ ನಮ್ಮ ದೇಶಕ್ಕೆ ಮಾಡಿದ ಅವಮಾನ. ವಂದೇ ಮಾತರಂ ಹಾಡಲು ಅವರಿಗೇಕೆ ಆಕ್ಷೇಪ?” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...