Homeಮುಖಪುಟಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

- Advertisement -
- Advertisement -

ಮುಸ್ಲಿಮರ ಮತದಾನದ ಹಕ್ಕನ್ನು ಹಿಂಪಡೆಯುವಂತೆ ಬಿಹಾರದ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಅವರು ಗುರುವಾರ ಒತ್ತಾಯಿಸಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಹಕ್ಕುಗಳನ್ನು ನೀಡಬೇಕು ಎಂದು ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಮಾತನ್ನು ಹೇಳಿದ್ದಾರೆ. 1947ರಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಮುಸ್ಲಿಂ ಸಮುದಾಯಕ್ಕೆ ಪಾಕಿಸ್ತಾನದ ರೂಪದಲ್ಲಿ ತುಂಡು ಭೂಮಿ ನೀಡಲಾಗಿತ್ತು. ಅವರು ಅಲ್ಲಿಗೆ ಹೋಗಬೇಕಿತ್ತು. ಅವರು ಈ ದೇಶದಲ್ಲಿ ನಮಗೆ ಬೇಡ ಎಂದು ಠಾಕೂರ್ ಹೇಳಿದ್ದಾರೆ.

“ಮುಸ್ಲಿಮರು ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆ ಮತ್ತು ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡಲು ಬಯಸುತ್ತಾರೆ. ಮುಸ್ಲಿಂ ನಾಯಕರು ಪ್ರತಿ ದೇಶವನ್ನು ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡುವ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಹಾಗೆ ಆಗಲು ನಾವು ಬಿಡಲಾರೆವು. ಆದ್ದರಿಂದ ನಾವು ಅವರಿಂದ ಮತದಾನದ ಹಕ್ಕುಗಳನ್ನು ಹಿಂಪಡೆದು ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ದೇಶದಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ ಎಂದು ಠಾಕೂರ್ ಹೇಳಿದ್ದಾರೆ. “ಮುಸ್ಲಿಮ್ ಸಮುದಾಯಕ್ಕೆ ಅಲ್ಪಸಂಖ್ಯಾತ ಎಂಬ ಪದವು ಸಂವಿಧಾನದ ಅಪಹಾಸ್ಯ ಎಂದು ನಾನು ಹೇಳುತ್ತೇನೆ. ಅವರು ಅಲ್ಪಸಂಖ್ಯಾತರಲ್ಲ. ಅವರ ಜನಸಂಖ್ಯೆಯು ನಿರಂತರವಾಗಿ ಹೆಚ್ಚುತ್ತಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಅಖ್ತರುಲ್ ಇಮಾಮ್ ಅವರು ಮತ್ತು ಎಐಎಂಐಎಂನ ಇತರ ಸದಸ್ಯರು ವಂದೇ ಮಾತರಂ ಅನ್ನು ಯಾವುದೇ ಸಾರ್ವಜನಿಕ ವೇದಿಕೆಗಳಲ್ಲಿ ವಿಶೇಷವಾಗಿ ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಹಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಸಂಪ್ರದಾಯದ ಪ್ರಕಾರ, ಬಿಹಾರ ವಿಧಾನಸಭಾ ಅಧಿವೇಶನಗಳು ರಾಷ್ಟ್ರಗೀತೆ ಜನ ಗಣ ಮನ ಮತ್ತು ವಂದೇ ಮಾತರಂನೊಂದಿಗೆ ಪ್ರಾರಂಭವಾಗುತ್ತವೆ ಅಥವಾ ಕೊನೆಗೊಳ್ಳುತ್ತವೆ.

ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅಖ್ತರುಲ್‌ ಇಮಾಮ್ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

“ರಾಷ್ಟ್ರಗೀತೆಯನ್ನು ಹಾಡಲು ನನಗೆ ಯಾವುದೇ ಅಭ್ಯಂತರವಿಲ್ಲ, ಆದರೆ ವಂದೇ ಮಾತರಂ ಹೇಳಲು ಅಥವಾ ಹಾಡಲು ನನ್ನ ವಿರೋಧವಿದೆ. ವಂದೇ ಮಾತರಂ ಬದಲಿಗೆ, ನಾನು ಸಂತೋಷದಿಂದ ‘ಮದರ್‌-ಎ-ವತನ್’ ಎಂದು ಹೇಳುತ್ತೇನೆ” ಎಂದು ಇಮಾಮ್‌ ಹೇಳಿದ್ದಾರೆ.

“ವಂದೇ ಮಾತರಂ ಭೂಮಿ ಮತ್ತು ಇಸ್ಲಾಂ ಅನುಮತಿಸದ ವಸ್ತುಗಳನ್ನು ಪೂಜಿಸುವಂತೆ ಹೇಳುತ್ತದೆ. ಆದ್ದರಿಂದ, ಅದನ್ನು ನಾವು ಯಾವುದೇ ವೇದಿಕೆಯಲ್ಲಿ ಹಾಡಲು ನಿರಾಕರಿಸುತ್ತೇವೆ. ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಬಹುಮತ ಹೊಂದಿದೆ. ಅವರು ವಿಧಾನ ಸಭಾ ಕಲಾಪದಿಂದ ವಂದೇ ಮಾತರಂ ಗೀತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಭಾರತದ ಪ್ರಜಾಪ್ರಭುತ್ವವನ್ನು ಪ್ರದರ್ಶಿಸಲು ಅವರು ಪ್ರತಿಯೊಂದು ಜಾತಿ ಮತ್ತು ಧರ್ಮವನ್ನು ಗೌರವಿಸಬೇಕು” ಎಂದು ಇಮಾಮ್ ಹೇಳಿದ್ದಾರೆ.

“ವಿಧಾನಸಭಾ ಸ್ಪೀಕರ್ ವಿಜಯ್ ಸಿನ್ಹಾ ಅವರು ಉಭಯ ಸದನಗಳಲ್ಲಿ ಪ್ರತಿಯೊಬ್ಬ ಸದಸ್ಯರು ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿದ್ದಾರೆ. ಇದನ್ನು ಅನುಸರಿಸದವರ ಸದನದ ಸದಸ್ಯತ್ವವನ್ನು ಸ್ಪೀಕರ್ ರದ್ದುಗೊಳಿಸಬೇಕು. ಎಐಎಂಐಎಂ ನಾಯಕರ ವರ್ತನೆ ನಮ್ಮ ದೇಶಕ್ಕೆ ಮಾಡಿದ ಅವಮಾನ. ವಂದೇ ಮಾತರಂ ಹಾಡಲು ಅವರಿಗೇಕೆ ಆಕ್ಷೇಪ?” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...