Homeಮುಖಪುಟಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

- Advertisement -
- Advertisement -

ಮುಸ್ಲಿಮರ ಮತದಾನದ ಹಕ್ಕನ್ನು ಹಿಂಪಡೆಯುವಂತೆ ಬಿಹಾರದ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಅವರು ಗುರುವಾರ ಒತ್ತಾಯಿಸಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಹಕ್ಕುಗಳನ್ನು ನೀಡಬೇಕು ಎಂದು ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಮಾತನ್ನು ಹೇಳಿದ್ದಾರೆ. 1947ರಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಮುಸ್ಲಿಂ ಸಮುದಾಯಕ್ಕೆ ಪಾಕಿಸ್ತಾನದ ರೂಪದಲ್ಲಿ ತುಂಡು ಭೂಮಿ ನೀಡಲಾಗಿತ್ತು. ಅವರು ಅಲ್ಲಿಗೆ ಹೋಗಬೇಕಿತ್ತು. ಅವರು ಈ ದೇಶದಲ್ಲಿ ನಮಗೆ ಬೇಡ ಎಂದು ಠಾಕೂರ್ ಹೇಳಿದ್ದಾರೆ.

“ಮುಸ್ಲಿಮರು ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆ ಮತ್ತು ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡಲು ಬಯಸುತ್ತಾರೆ. ಮುಸ್ಲಿಂ ನಾಯಕರು ಪ್ರತಿ ದೇಶವನ್ನು ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡುವ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಹಾಗೆ ಆಗಲು ನಾವು ಬಿಡಲಾರೆವು. ಆದ್ದರಿಂದ ನಾವು ಅವರಿಂದ ಮತದಾನದ ಹಕ್ಕುಗಳನ್ನು ಹಿಂಪಡೆದು ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ದೇಶದಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ ಎಂದು ಠಾಕೂರ್ ಹೇಳಿದ್ದಾರೆ. “ಮುಸ್ಲಿಮ್ ಸಮುದಾಯಕ್ಕೆ ಅಲ್ಪಸಂಖ್ಯಾತ ಎಂಬ ಪದವು ಸಂವಿಧಾನದ ಅಪಹಾಸ್ಯ ಎಂದು ನಾನು ಹೇಳುತ್ತೇನೆ. ಅವರು ಅಲ್ಪಸಂಖ್ಯಾತರಲ್ಲ. ಅವರ ಜನಸಂಖ್ಯೆಯು ನಿರಂತರವಾಗಿ ಹೆಚ್ಚುತ್ತಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಅಖ್ತರುಲ್ ಇಮಾಮ್ ಅವರು ಮತ್ತು ಎಐಎಂಐಎಂನ ಇತರ ಸದಸ್ಯರು ವಂದೇ ಮಾತರಂ ಅನ್ನು ಯಾವುದೇ ಸಾರ್ವಜನಿಕ ವೇದಿಕೆಗಳಲ್ಲಿ ವಿಶೇಷವಾಗಿ ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಹಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಸಂಪ್ರದಾಯದ ಪ್ರಕಾರ, ಬಿಹಾರ ವಿಧಾನಸಭಾ ಅಧಿವೇಶನಗಳು ರಾಷ್ಟ್ರಗೀತೆ ಜನ ಗಣ ಮನ ಮತ್ತು ವಂದೇ ಮಾತರಂನೊಂದಿಗೆ ಪ್ರಾರಂಭವಾಗುತ್ತವೆ ಅಥವಾ ಕೊನೆಗೊಳ್ಳುತ್ತವೆ.

ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅಖ್ತರುಲ್‌ ಇಮಾಮ್ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

“ರಾಷ್ಟ್ರಗೀತೆಯನ್ನು ಹಾಡಲು ನನಗೆ ಯಾವುದೇ ಅಭ್ಯಂತರವಿಲ್ಲ, ಆದರೆ ವಂದೇ ಮಾತರಂ ಹೇಳಲು ಅಥವಾ ಹಾಡಲು ನನ್ನ ವಿರೋಧವಿದೆ. ವಂದೇ ಮಾತರಂ ಬದಲಿಗೆ, ನಾನು ಸಂತೋಷದಿಂದ ‘ಮದರ್‌-ಎ-ವತನ್’ ಎಂದು ಹೇಳುತ್ತೇನೆ” ಎಂದು ಇಮಾಮ್‌ ಹೇಳಿದ್ದಾರೆ.

“ವಂದೇ ಮಾತರಂ ಭೂಮಿ ಮತ್ತು ಇಸ್ಲಾಂ ಅನುಮತಿಸದ ವಸ್ತುಗಳನ್ನು ಪೂಜಿಸುವಂತೆ ಹೇಳುತ್ತದೆ. ಆದ್ದರಿಂದ, ಅದನ್ನು ನಾವು ಯಾವುದೇ ವೇದಿಕೆಯಲ್ಲಿ ಹಾಡಲು ನಿರಾಕರಿಸುತ್ತೇವೆ. ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಬಹುಮತ ಹೊಂದಿದೆ. ಅವರು ವಿಧಾನ ಸಭಾ ಕಲಾಪದಿಂದ ವಂದೇ ಮಾತರಂ ಗೀತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಭಾರತದ ಪ್ರಜಾಪ್ರಭುತ್ವವನ್ನು ಪ್ರದರ್ಶಿಸಲು ಅವರು ಪ್ರತಿಯೊಂದು ಜಾತಿ ಮತ್ತು ಧರ್ಮವನ್ನು ಗೌರವಿಸಬೇಕು” ಎಂದು ಇಮಾಮ್ ಹೇಳಿದ್ದಾರೆ.

“ವಿಧಾನಸಭಾ ಸ್ಪೀಕರ್ ವಿಜಯ್ ಸಿನ್ಹಾ ಅವರು ಉಭಯ ಸದನಗಳಲ್ಲಿ ಪ್ರತಿಯೊಬ್ಬ ಸದಸ್ಯರು ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿದ್ದಾರೆ. ಇದನ್ನು ಅನುಸರಿಸದವರ ಸದನದ ಸದಸ್ಯತ್ವವನ್ನು ಸ್ಪೀಕರ್ ರದ್ದುಗೊಳಿಸಬೇಕು. ಎಐಎಂಐಎಂ ನಾಯಕರ ವರ್ತನೆ ನಮ್ಮ ದೇಶಕ್ಕೆ ಮಾಡಿದ ಅವಮಾನ. ವಂದೇ ಮಾತರಂ ಹಾಡಲು ಅವರಿಗೇಕೆ ಆಕ್ಷೇಪ?” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...