Homeಮುಖಪುಟಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

ಮುಸ್ಲಿಮರ ಮತದಾನದ ಹಕ್ಕು ಹಿಂಪಡೆದು, 2ನೇ ದರ್ಜೆ ನಾಗರಿಕರನ್ನಾಗಿ ಮಾಡುವಂತೆ ಬಿಜೆಪಿ ಶಾಸಕನ ಒತ್ತಾಯ

- Advertisement -
- Advertisement -

ಮುಸ್ಲಿಮರ ಮತದಾನದ ಹಕ್ಕನ್ನು ಹಿಂಪಡೆಯುವಂತೆ ಬಿಹಾರದ ಬಿಜೆಪಿ ಶಾಸಕ ಹರಿಭೂಷಣ್ ಠಾಕೂರ್ ಅವರು ಗುರುವಾರ ಒತ್ತಾಯಿಸಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರ ಹಕ್ಕುಗಳನ್ನು ನೀಡಬೇಕು ಎಂದು ಎಐಎಂಐಎಂ ನಾಯಕ ಅಖ್ತರುಲ್ ಇಮಾಮ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಈ ಮಾತನ್ನು ಹೇಳಿದ್ದಾರೆ. 1947ರಲ್ಲಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗ ಮುಸ್ಲಿಂ ಸಮುದಾಯಕ್ಕೆ ಪಾಕಿಸ್ತಾನದ ರೂಪದಲ್ಲಿ ತುಂಡು ಭೂಮಿ ನೀಡಲಾಗಿತ್ತು. ಅವರು ಅಲ್ಲಿಗೆ ಹೋಗಬೇಕಿತ್ತು. ಅವರು ಈ ದೇಶದಲ್ಲಿ ನಮಗೆ ಬೇಡ ಎಂದು ಠಾಕೂರ್ ಹೇಳಿದ್ದಾರೆ.

“ಮುಸ್ಲಿಮರು ಜನಸಂಖ್ಯೆಯನ್ನು ಹೆಚ್ಚಿಸುತ್ತಿದ್ದಾರೆ ಮತ್ತು ಭಾರತವನ್ನು ಮುಸ್ಲಿಂ ದೇಶವನ್ನಾಗಿ ಮಾಡಲು ಬಯಸುತ್ತಾರೆ. ಮುಸ್ಲಿಂ ನಾಯಕರು ಪ್ರತಿ ದೇಶವನ್ನು ಇಸ್ಲಾಮಿಕ್ ರಾಜ್ಯವನ್ನಾಗಿ ಮಾಡುವ ಕಾರ್ಯಸೂಚಿಯನ್ನು ಹೊಂದಿದ್ದಾರೆ. ಹಾಗೆ ಆಗಲು ನಾವು ಬಿಡಲಾರೆವು. ಆದ್ದರಿಂದ ನಾವು ಅವರಿಂದ ಮತದಾನದ ಹಕ್ಕುಗಳನ್ನು ಹಿಂಪಡೆದು ಅವರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಮಾಡಬೇಕೆಂದು ನಾವು ಸರ್ಕಾರವನ್ನು ಒತ್ತಾಯಿಸಿದ್ದೇವೆ” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ದೇಶದಲ್ಲಿ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುತ್ತದೆ ಎಂದು ಠಾಕೂರ್ ಹೇಳಿದ್ದಾರೆ. “ಮುಸ್ಲಿಮ್ ಸಮುದಾಯಕ್ಕೆ ಅಲ್ಪಸಂಖ್ಯಾತ ಎಂಬ ಪದವು ಸಂವಿಧಾನದ ಅಪಹಾಸ್ಯ ಎಂದು ನಾನು ಹೇಳುತ್ತೇನೆ. ಅವರು ಅಲ್ಪಸಂಖ್ಯಾತರಲ್ಲ. ಅವರ ಜನಸಂಖ್ಯೆಯು ನಿರಂತರವಾಗಿ ಹೆಚ್ಚುತ್ತಿದೆ” ಎಂದು ಅವರು ಹೇಳಿದ್ದಾರೆ.

ಈ ಹಿಂದೆ, ಅಖ್ತರುಲ್ ಇಮಾಮ್ ಅವರು ಮತ್ತು ಎಐಎಂಐಎಂನ ಇತರ ಸದಸ್ಯರು ವಂದೇ ಮಾತರಂ ಅನ್ನು ಯಾವುದೇ ಸಾರ್ವಜನಿಕ ವೇದಿಕೆಗಳಲ್ಲಿ ವಿಶೇಷವಾಗಿ ಬಿಹಾರ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಹಾಡುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಸಂಪ್ರದಾಯದ ಪ್ರಕಾರ, ಬಿಹಾರ ವಿಧಾನಸಭಾ ಅಧಿವೇಶನಗಳು ರಾಷ್ಟ್ರಗೀತೆ ಜನ ಗಣ ಮನ ಮತ್ತು ವಂದೇ ಮಾತರಂನೊಂದಿಗೆ ಪ್ರಾರಂಭವಾಗುತ್ತವೆ ಅಥವಾ ಕೊನೆಗೊಳ್ಳುತ್ತವೆ.

ವಂದೇ ಮಾತರಂ ಹಾಡುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ಅಖ್ತರುಲ್‌ ಇಮಾಮ್ ಹೇಳಿದ್ದರು.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣದ ಸಾಂವಿಧಾನಿಕ ಹಕ್ಕು ಮತ್ತು ಕರ್ನಾಟಕ ಸರ್ಕಾರದ ವೈಫಲ್ಯ

“ರಾಷ್ಟ್ರಗೀತೆಯನ್ನು ಹಾಡಲು ನನಗೆ ಯಾವುದೇ ಅಭ್ಯಂತರವಿಲ್ಲ, ಆದರೆ ವಂದೇ ಮಾತರಂ ಹೇಳಲು ಅಥವಾ ಹಾಡಲು ನನ್ನ ವಿರೋಧವಿದೆ. ವಂದೇ ಮಾತರಂ ಬದಲಿಗೆ, ನಾನು ಸಂತೋಷದಿಂದ ‘ಮದರ್‌-ಎ-ವತನ್’ ಎಂದು ಹೇಳುತ್ತೇನೆ” ಎಂದು ಇಮಾಮ್‌ ಹೇಳಿದ್ದಾರೆ.

“ವಂದೇ ಮಾತರಂ ಭೂಮಿ ಮತ್ತು ಇಸ್ಲಾಂ ಅನುಮತಿಸದ ವಸ್ತುಗಳನ್ನು ಪೂಜಿಸುವಂತೆ ಹೇಳುತ್ತದೆ. ಆದ್ದರಿಂದ, ಅದನ್ನು ನಾವು ಯಾವುದೇ ವೇದಿಕೆಯಲ್ಲಿ ಹಾಡಲು ನಿರಾಕರಿಸುತ್ತೇವೆ. ಬಿಹಾರದಲ್ಲಿ ಎನ್‌ಡಿಎ ಸರ್ಕಾರ ಬಹುಮತ ಹೊಂದಿದೆ. ಅವರು ವಿಧಾನ ಸಭಾ ಕಲಾಪದಿಂದ ವಂದೇ ಮಾತರಂ ಗೀತೆಯನ್ನು ಹಿಂತೆಗೆದುಕೊಳ್ಳುವ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಭಾರತದ ಪ್ರಜಾಪ್ರಭುತ್ವವನ್ನು ಪ್ರದರ್ಶಿಸಲು ಅವರು ಪ್ರತಿಯೊಂದು ಜಾತಿ ಮತ್ತು ಧರ್ಮವನ್ನು ಗೌರವಿಸಬೇಕು” ಎಂದು ಇಮಾಮ್ ಹೇಳಿದ್ದಾರೆ.

“ವಿಧಾನಸಭಾ ಸ್ಪೀಕರ್ ವಿಜಯ್ ಸಿನ್ಹಾ ಅವರು ಉಭಯ ಸದನಗಳಲ್ಲಿ ಪ್ರತಿಯೊಬ್ಬ ಸದಸ್ಯರು ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿದ್ದಾರೆ. ಇದನ್ನು ಅನುಸರಿಸದವರ ಸದನದ ಸದಸ್ಯತ್ವವನ್ನು ಸ್ಪೀಕರ್ ರದ್ದುಗೊಳಿಸಬೇಕು. ಎಐಎಂಐಎಂ ನಾಯಕರ ವರ್ತನೆ ನಮ್ಮ ದೇಶಕ್ಕೆ ಮಾಡಿದ ಅವಮಾನ. ವಂದೇ ಮಾತರಂ ಹಾಡಲು ಅವರಿಗೇಕೆ ಆಕ್ಷೇಪ?” ಎಂದು ಠಾಕೂರ್ ಹೇಳಿದ್ದಾರೆ.

ಇದನ್ನೂ ಓದಿ: ಸದ್ದಿಲ್ಲದೆ ಮುಸ್ಲಿಂ ವಿದ್ಯಾರ್ಥಿಗಳ ಡಾಟಾ ಸಂಗ್ರಹಿಸುತ್ತಿರುವ ರಾಜ್ಯ ಸರ್ಕಾರ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....