Homeಮುಖಪುಟರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

ರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾದ ಮರು ದಿನವೇ ಶಾಸಕ ಬಲ್ಮುಕುಂದ್ ಆಚಾರ್ಯ  ಕ್ಷೇತ್ರದಾದ್ಯಂತ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದು, ಈ ಕುರಿತು ವಿಡಿಯೋ ವೈರಲ್‌ ಆಗಿದೆ.

ಜೈಪುರದ ಹಥೋಜ್ ಧಾಮ್‌ನ ಧರ್ಮಗುರು, ಸ್ವಯಂಘೋಷಿತ ದೇವಮಾನವ ಬಲ್ಮುಕುಂದ್ ಆಚಾರ್ಯ ಹವಾ ಮಹಲ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಆಚಾರ್ಯ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲೇ ಸೋಮವಾರ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳ ಬಳಿ ತೆರಳಿ ಮುಚ್ಚುವಂತೆ ಆದೇಶಿಸಿದ್ದಾರೆ. ಅವರು ರೋಗಗಳನ್ನು ಹರಡುತ್ತಿದ್ದಾರೆ ಎಂದು ಆಚಾರ್ಯ ಆರೋಪಿಸಿದ್ದಾರೆ. ಈ ಪ್ರದೇಶದಲ್ಲಿ ಮಾಂಸ ಮಾಡುವವರು ಹೆಚ್ಚಾಗಿ ಮುಸ್ಲಿಮ್ ಸಮುದಾಯಕ್ಕೆ ಸೇರಿದವರು ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಮಂಗಳವಾರ ಆಚಾರ್ಯ ತನ್ನ ದುರ್ವರ್ತನೆಗೆ ಕ್ಷಮೆ ಯಾಚಿಸಿದ್ದಾರೆ. ಹೊಗೆ ಮತ್ತು ದುರ್ವಾಸನೆಯು ಬರುತ್ತಿತ್ತು. ನಾನು ಕೇವಲ ಅಧಿಕಾರಿಗಳಿಗೆ ವಿನಂತಿಸಿದೆ. ನಾನು ಜೋರಾಗಿ ಮಾತನಾಡಿದ್ದೇನೆ ಎಂದು ಅವರು ಹೇಳುತ್ತಾರೆ. ನನಗೆ ಗಂಟಲು ನೋವು ಇದೆ. ಅದಕ್ಕಾಗಿಯೇ ನಾನು ಆ ರೀತಿ ಮಾತನಾಡಿದೆ ಎಂದು ಆಚಾರ್ಯ ಸಮಜಾಯಿಸಿ ನೀಡಿದ್ದಾರೆ.

ಯಾರಿಗಾದರೂ ತಮ್ಮ ನಡೆಯು ಕೆಟ್ಟದಾಗಿ ತೋರಿದರೆ, ನಾನು ಕ್ಷಮೆಯಾಚಿಸುತ್ತೇನೆ. ಇದು ಯಾವುದೆ ನಿರ್ದಿಷ್ಟ ವರ್ಗದ ವಿರುದ್ಧ ಅಲ್ಲ. ನಾನು ಗೌರವಾನ್ವಿತ ಪ್ರಧಾನಿ ಮೋದಿಜಿಯವರ ದೂರದೃಷ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೇನೆ. ಎಲ್ಲರ ಬೆಂಬಲ, ವಿಶ್ವಾಸ ಮತ್ತು ಎಲ್ಲರ ಸಾಮೂಹಿಕ ಅಭಿವೃದ್ಧಿಯನ್ನು ನಾವು ಬಯಸುತ್ತೇವೆ ಎಂದು ಆಚಾರ್ಯ ಹೇಳಿದ್ದಾರೆ.

ಆಚಾರ್ಯ ಮತ್ತು ಅವರ ಬೆಂಬಲಿಗರು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ ನಂತರ ಕೋಳಿ ಮಾರಾಟಗಾರರು ಸೋಮವಾರ ತಮ್ಮ ಅಂಗಡಿಗಳನ್ನು ಮುಚ್ಚುತ್ತಿರುವುದು ವೈರಲ್‌ ವಿಡಿಯೋದಲ್ಲಿ ಕಂಡು ಬಂದಿದೆ. ಶಾಸಕ ಆಚಾರ್ಯ ಅಧಿಕಾರಿಯೋರ್ವರ ಜೊತೆ ಪ್ರಶ್ನಿಸುತ್ತಾ, ನಾನ್ ವೆಜ್‌ನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದು ಅಥವಾ ಇಲ್ಲ ಎಂದು ಉತ್ತರಿಸಿ. ನೀವು ಇದನ್ನು ಬೆಂಬಲಿಸುತ್ತೀರಾ? ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ಒಳಗಡೆ ವರದಿಯನ್ನು ನೀವು ನೀಡಬೇಕು. ಅಧಿಕಾರಿ ಯಾರಾದರೂ ನಾನು ಹೆದರುವುದಿಲ್ಲ ಎಂದು ಹೇಳುವುದು ಮತ್ತು  ಬೆಂಬಲಿಗರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಬೀದಿ ಮಾರಾಟಗಾರರ ಕಾಯಿದೆಯಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಪಟ್ಟಣ ಮಾರಾಟ ಸಮಿತಿ ರಚಿಸಿ ಬೀದಿ ಬದಿ ವ್ಯಾಪಾರಿಗಳಿಗೆ ಭದ್ರತೆ ಒದಗಿಸುವ ನಿಯಮವಿದೆ. ಇದುವರೆಗೂ ಪಟ್ಟಣ ಮಾರಾಟ ಸಮಿತಿಯು ಮಾರಾಟಗಾರರಿಗೆ ರಕ್ಷಣೆ ನೀಡಿಲ್ಲ. ಮಾರಾಟಗಾರರಿಗೆ ಪರವಾನಗಿ ನೀಡಲಾಗಿಲ್ಲ ಮತ್ತು ಮಾರಾಟ ವಲಯಗಳನ್ನು ಗುರುತಿಸಲಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಸದಾಗಿ ಚುನಾಯಿತ ಶಾಸಕರೊಬ್ಬರು ಕಾನೂನನ್ನು ಕೈಗೆತ್ತಿಕೊಂಡು ಮಾಂಸದ ಅಂಗಡಿಗಳನ್ನು ಮುಚ್ಚಿಸುತ್ತಿರುವುದು ಮತ್ತು ಮಾಂಸಾಹಾರಿ ಬೀದಿ ಬದಿ ವ್ಯಾಪಾರಿಗಳಿಗೆ ಬೆದರಿಕೆ ಹಾಕುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ.

ಇದನ್ನು ಓದಿ: ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...