Homeಮುಖಪುಟರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

ರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾದ ಮರು ದಿನವೇ ಶಾಸಕ ಬಲ್ಮುಕುಂದ್ ಆಚಾರ್ಯ  ಕ್ಷೇತ್ರದಾದ್ಯಂತ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದು, ಈ ಕುರಿತು ವಿಡಿಯೋ ವೈರಲ್‌ ಆಗಿದೆ.

ಜೈಪುರದ ಹಥೋಜ್ ಧಾಮ್‌ನ ಧರ್ಮಗುರು, ಸ್ವಯಂಘೋಷಿತ ದೇವಮಾನವ ಬಲ್ಮುಕುಂದ್ ಆಚಾರ್ಯ ಹವಾ ಮಹಲ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಆಚಾರ್ಯ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲೇ ಸೋಮವಾರ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳ ಬಳಿ ತೆರಳಿ ಮುಚ್ಚುವಂತೆ ಆದೇಶಿಸಿದ್ದಾರೆ. ಅವರು ರೋಗಗಳನ್ನು ಹರಡುತ್ತಿದ್ದಾರೆ ಎಂದು ಆಚಾರ್ಯ ಆರೋಪಿಸಿದ್ದಾರೆ. ಈ ಪ್ರದೇಶದಲ್ಲಿ ಮಾಂಸ ಮಾಡುವವರು ಹೆಚ್ಚಾಗಿ ಮುಸ್ಲಿಮ್ ಸಮುದಾಯಕ್ಕೆ ಸೇರಿದವರು ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಮಂಗಳವಾರ ಆಚಾರ್ಯ ತನ್ನ ದುರ್ವರ್ತನೆಗೆ ಕ್ಷಮೆ ಯಾಚಿಸಿದ್ದಾರೆ. ಹೊಗೆ ಮತ್ತು ದುರ್ವಾಸನೆಯು ಬರುತ್ತಿತ್ತು. ನಾನು ಕೇವಲ ಅಧಿಕಾರಿಗಳಿಗೆ ವಿನಂತಿಸಿದೆ. ನಾನು ಜೋರಾಗಿ ಮಾತನಾಡಿದ್ದೇನೆ ಎಂದು ಅವರು ಹೇಳುತ್ತಾರೆ. ನನಗೆ ಗಂಟಲು ನೋವು ಇದೆ. ಅದಕ್ಕಾಗಿಯೇ ನಾನು ಆ ರೀತಿ ಮಾತನಾಡಿದೆ ಎಂದು ಆಚಾರ್ಯ ಸಮಜಾಯಿಸಿ ನೀಡಿದ್ದಾರೆ.

ಯಾರಿಗಾದರೂ ತಮ್ಮ ನಡೆಯು ಕೆಟ್ಟದಾಗಿ ತೋರಿದರೆ, ನಾನು ಕ್ಷಮೆಯಾಚಿಸುತ್ತೇನೆ. ಇದು ಯಾವುದೆ ನಿರ್ದಿಷ್ಟ ವರ್ಗದ ವಿರುದ್ಧ ಅಲ್ಲ. ನಾನು ಗೌರವಾನ್ವಿತ ಪ್ರಧಾನಿ ಮೋದಿಜಿಯವರ ದೂರದೃಷ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೇನೆ. ಎಲ್ಲರ ಬೆಂಬಲ, ವಿಶ್ವಾಸ ಮತ್ತು ಎಲ್ಲರ ಸಾಮೂಹಿಕ ಅಭಿವೃದ್ಧಿಯನ್ನು ನಾವು ಬಯಸುತ್ತೇವೆ ಎಂದು ಆಚಾರ್ಯ ಹೇಳಿದ್ದಾರೆ.

ಆಚಾರ್ಯ ಮತ್ತು ಅವರ ಬೆಂಬಲಿಗರು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ ನಂತರ ಕೋಳಿ ಮಾರಾಟಗಾರರು ಸೋಮವಾರ ತಮ್ಮ ಅಂಗಡಿಗಳನ್ನು ಮುಚ್ಚುತ್ತಿರುವುದು ವೈರಲ್‌ ವಿಡಿಯೋದಲ್ಲಿ ಕಂಡು ಬಂದಿದೆ. ಶಾಸಕ ಆಚಾರ್ಯ ಅಧಿಕಾರಿಯೋರ್ವರ ಜೊತೆ ಪ್ರಶ್ನಿಸುತ್ತಾ, ನಾನ್ ವೆಜ್‌ನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದು ಅಥವಾ ಇಲ್ಲ ಎಂದು ಉತ್ತರಿಸಿ. ನೀವು ಇದನ್ನು ಬೆಂಬಲಿಸುತ್ತೀರಾ? ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ಒಳಗಡೆ ವರದಿಯನ್ನು ನೀವು ನೀಡಬೇಕು. ಅಧಿಕಾರಿ ಯಾರಾದರೂ ನಾನು ಹೆದರುವುದಿಲ್ಲ ಎಂದು ಹೇಳುವುದು ಮತ್ತು  ಬೆಂಬಲಿಗರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಬೀದಿ ಮಾರಾಟಗಾರರ ಕಾಯಿದೆಯಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಪಟ್ಟಣ ಮಾರಾಟ ಸಮಿತಿ ರಚಿಸಿ ಬೀದಿ ಬದಿ ವ್ಯಾಪಾರಿಗಳಿಗೆ ಭದ್ರತೆ ಒದಗಿಸುವ ನಿಯಮವಿದೆ. ಇದುವರೆಗೂ ಪಟ್ಟಣ ಮಾರಾಟ ಸಮಿತಿಯು ಮಾರಾಟಗಾರರಿಗೆ ರಕ್ಷಣೆ ನೀಡಿಲ್ಲ. ಮಾರಾಟಗಾರರಿಗೆ ಪರವಾನಗಿ ನೀಡಲಾಗಿಲ್ಲ ಮತ್ತು ಮಾರಾಟ ವಲಯಗಳನ್ನು ಗುರುತಿಸಲಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಸದಾಗಿ ಚುನಾಯಿತ ಶಾಸಕರೊಬ್ಬರು ಕಾನೂನನ್ನು ಕೈಗೆತ್ತಿಕೊಂಡು ಮಾಂಸದ ಅಂಗಡಿಗಳನ್ನು ಮುಚ್ಚಿಸುತ್ತಿರುವುದು ಮತ್ತು ಮಾಂಸಾಹಾರಿ ಬೀದಿ ಬದಿ ವ್ಯಾಪಾರಿಗಳಿಗೆ ಬೆದರಿಕೆ ಹಾಕುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ.

ಇದನ್ನು ಓದಿ: ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...