Homeಮುಖಪುಟರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

ರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾದ ಮರು ದಿನವೇ ಶಾಸಕ ಬಲ್ಮುಕುಂದ್ ಆಚಾರ್ಯ  ಕ್ಷೇತ್ರದಾದ್ಯಂತ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದು, ಈ ಕುರಿತು ವಿಡಿಯೋ ವೈರಲ್‌ ಆಗಿದೆ.

ಜೈಪುರದ ಹಥೋಜ್ ಧಾಮ್‌ನ ಧರ್ಮಗುರು, ಸ್ವಯಂಘೋಷಿತ ದೇವಮಾನವ ಬಲ್ಮುಕುಂದ್ ಆಚಾರ್ಯ ಹವಾ ಮಹಲ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಆಚಾರ್ಯ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲೇ ಸೋಮವಾರ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳ ಬಳಿ ತೆರಳಿ ಮುಚ್ಚುವಂತೆ ಆದೇಶಿಸಿದ್ದಾರೆ. ಅವರು ರೋಗಗಳನ್ನು ಹರಡುತ್ತಿದ್ದಾರೆ ಎಂದು ಆಚಾರ್ಯ ಆರೋಪಿಸಿದ್ದಾರೆ. ಈ ಪ್ರದೇಶದಲ್ಲಿ ಮಾಂಸ ಮಾಡುವವರು ಹೆಚ್ಚಾಗಿ ಮುಸ್ಲಿಮ್ ಸಮುದಾಯಕ್ಕೆ ಸೇರಿದವರು ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಮಂಗಳವಾರ ಆಚಾರ್ಯ ತನ್ನ ದುರ್ವರ್ತನೆಗೆ ಕ್ಷಮೆ ಯಾಚಿಸಿದ್ದಾರೆ. ಹೊಗೆ ಮತ್ತು ದುರ್ವಾಸನೆಯು ಬರುತ್ತಿತ್ತು. ನಾನು ಕೇವಲ ಅಧಿಕಾರಿಗಳಿಗೆ ವಿನಂತಿಸಿದೆ. ನಾನು ಜೋರಾಗಿ ಮಾತನಾಡಿದ್ದೇನೆ ಎಂದು ಅವರು ಹೇಳುತ್ತಾರೆ. ನನಗೆ ಗಂಟಲು ನೋವು ಇದೆ. ಅದಕ್ಕಾಗಿಯೇ ನಾನು ಆ ರೀತಿ ಮಾತನಾಡಿದೆ ಎಂದು ಆಚಾರ್ಯ ಸಮಜಾಯಿಸಿ ನೀಡಿದ್ದಾರೆ.

ಯಾರಿಗಾದರೂ ತಮ್ಮ ನಡೆಯು ಕೆಟ್ಟದಾಗಿ ತೋರಿದರೆ, ನಾನು ಕ್ಷಮೆಯಾಚಿಸುತ್ತೇನೆ. ಇದು ಯಾವುದೆ ನಿರ್ದಿಷ್ಟ ವರ್ಗದ ವಿರುದ್ಧ ಅಲ್ಲ. ನಾನು ಗೌರವಾನ್ವಿತ ಪ್ರಧಾನಿ ಮೋದಿಜಿಯವರ ದೂರದೃಷ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೇನೆ. ಎಲ್ಲರ ಬೆಂಬಲ, ವಿಶ್ವಾಸ ಮತ್ತು ಎಲ್ಲರ ಸಾಮೂಹಿಕ ಅಭಿವೃದ್ಧಿಯನ್ನು ನಾವು ಬಯಸುತ್ತೇವೆ ಎಂದು ಆಚಾರ್ಯ ಹೇಳಿದ್ದಾರೆ.

ಆಚಾರ್ಯ ಮತ್ತು ಅವರ ಬೆಂಬಲಿಗರು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ ನಂತರ ಕೋಳಿ ಮಾರಾಟಗಾರರು ಸೋಮವಾರ ತಮ್ಮ ಅಂಗಡಿಗಳನ್ನು ಮುಚ್ಚುತ್ತಿರುವುದು ವೈರಲ್‌ ವಿಡಿಯೋದಲ್ಲಿ ಕಂಡು ಬಂದಿದೆ. ಶಾಸಕ ಆಚಾರ್ಯ ಅಧಿಕಾರಿಯೋರ್ವರ ಜೊತೆ ಪ್ರಶ್ನಿಸುತ್ತಾ, ನಾನ್ ವೆಜ್‌ನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದು ಅಥವಾ ಇಲ್ಲ ಎಂದು ಉತ್ತರಿಸಿ. ನೀವು ಇದನ್ನು ಬೆಂಬಲಿಸುತ್ತೀರಾ? ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ಒಳಗಡೆ ವರದಿಯನ್ನು ನೀವು ನೀಡಬೇಕು. ಅಧಿಕಾರಿ ಯಾರಾದರೂ ನಾನು ಹೆದರುವುದಿಲ್ಲ ಎಂದು ಹೇಳುವುದು ಮತ್ತು  ಬೆಂಬಲಿಗರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಬೀದಿ ಮಾರಾಟಗಾರರ ಕಾಯಿದೆಯಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಪಟ್ಟಣ ಮಾರಾಟ ಸಮಿತಿ ರಚಿಸಿ ಬೀದಿ ಬದಿ ವ್ಯಾಪಾರಿಗಳಿಗೆ ಭದ್ರತೆ ಒದಗಿಸುವ ನಿಯಮವಿದೆ. ಇದುವರೆಗೂ ಪಟ್ಟಣ ಮಾರಾಟ ಸಮಿತಿಯು ಮಾರಾಟಗಾರರಿಗೆ ರಕ್ಷಣೆ ನೀಡಿಲ್ಲ. ಮಾರಾಟಗಾರರಿಗೆ ಪರವಾನಗಿ ನೀಡಲಾಗಿಲ್ಲ ಮತ್ತು ಮಾರಾಟ ವಲಯಗಳನ್ನು ಗುರುತಿಸಲಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಸದಾಗಿ ಚುನಾಯಿತ ಶಾಸಕರೊಬ್ಬರು ಕಾನೂನನ್ನು ಕೈಗೆತ್ತಿಕೊಂಡು ಮಾಂಸದ ಅಂಗಡಿಗಳನ್ನು ಮುಚ್ಚಿಸುತ್ತಿರುವುದು ಮತ್ತು ಮಾಂಸಾಹಾರಿ ಬೀದಿ ಬದಿ ವ್ಯಾಪಾರಿಗಳಿಗೆ ಬೆದರಿಕೆ ಹಾಕುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ.

ಇದನ್ನು ಓದಿ: ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...