Homeಮುಖಪುಟರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

ರಾಜಸ್ಥಾನ: ಗೆದ್ದ ಮರುದಿನವೇ ಮಾಂಸದಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ ಬಿಜೆಪಿ ಶಾಸಕ

- Advertisement -
- Advertisement -

ರಾಜಸ್ಥಾನದಲ್ಲಿ ಬಿಜೆಪಿಯಿಂದ ವಿಧಾನಸಭೆಗೆ ಆಯ್ಕೆಯಾದ ಮರು ದಿನವೇ ಶಾಸಕ ಬಲ್ಮುಕುಂದ್ ಆಚಾರ್ಯ  ಕ್ಷೇತ್ರದಾದ್ಯಂತ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳನ್ನು ಬಲವಂತವಾಗಿ ಮುಚ್ಚಿಸಿದ್ದು, ಈ ಕುರಿತು ವಿಡಿಯೋ ವೈರಲ್‌ ಆಗಿದೆ.

ಜೈಪುರದ ಹಥೋಜ್ ಧಾಮ್‌ನ ಧರ್ಮಗುರು, ಸ್ವಯಂಘೋಷಿತ ದೇವಮಾನವ ಬಲ್ಮುಕುಂದ್ ಆಚಾರ್ಯ ಹವಾ ಮಹಲ್ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಆಚಾರ್ಯ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲೇ ಸೋಮವಾರ ಮಾಂಸಾಹಾರ ಮಾರಾಟ ಮಾಡುವ ಅಂಗಡಿಗಳ ಬಳಿ ತೆರಳಿ ಮುಚ್ಚುವಂತೆ ಆದೇಶಿಸಿದ್ದಾರೆ. ಅವರು ರೋಗಗಳನ್ನು ಹರಡುತ್ತಿದ್ದಾರೆ ಎಂದು ಆಚಾರ್ಯ ಆರೋಪಿಸಿದ್ದಾರೆ. ಈ ಪ್ರದೇಶದಲ್ಲಿ ಮಾಂಸ ಮಾಡುವವರು ಹೆಚ್ಚಾಗಿ ಮುಸ್ಲಿಮ್ ಸಮುದಾಯಕ್ಕೆ ಸೇರಿದವರು ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗಿದ್ದು, ಮಂಗಳವಾರ ಆಚಾರ್ಯ ತನ್ನ ದುರ್ವರ್ತನೆಗೆ ಕ್ಷಮೆ ಯಾಚಿಸಿದ್ದಾರೆ. ಹೊಗೆ ಮತ್ತು ದುರ್ವಾಸನೆಯು ಬರುತ್ತಿತ್ತು. ನಾನು ಕೇವಲ ಅಧಿಕಾರಿಗಳಿಗೆ ವಿನಂತಿಸಿದೆ. ನಾನು ಜೋರಾಗಿ ಮಾತನಾಡಿದ್ದೇನೆ ಎಂದು ಅವರು ಹೇಳುತ್ತಾರೆ. ನನಗೆ ಗಂಟಲು ನೋವು ಇದೆ. ಅದಕ್ಕಾಗಿಯೇ ನಾನು ಆ ರೀತಿ ಮಾತನಾಡಿದೆ ಎಂದು ಆಚಾರ್ಯ ಸಮಜಾಯಿಸಿ ನೀಡಿದ್ದಾರೆ.

ಯಾರಿಗಾದರೂ ತಮ್ಮ ನಡೆಯು ಕೆಟ್ಟದಾಗಿ ತೋರಿದರೆ, ನಾನು ಕ್ಷಮೆಯಾಚಿಸುತ್ತೇನೆ. ಇದು ಯಾವುದೆ ನಿರ್ದಿಷ್ಟ ವರ್ಗದ ವಿರುದ್ಧ ಅಲ್ಲ. ನಾನು ಗೌರವಾನ್ವಿತ ಪ್ರಧಾನಿ ಮೋದಿಜಿಯವರ ದೂರದೃಷ್ಟಿಯ ಪ್ರಕಾರ ಕೆಲಸ ಮಾಡುತ್ತಿದ್ದೇನೆ. ಎಲ್ಲರ ಬೆಂಬಲ, ವಿಶ್ವಾಸ ಮತ್ತು ಎಲ್ಲರ ಸಾಮೂಹಿಕ ಅಭಿವೃದ್ಧಿಯನ್ನು ನಾವು ಬಯಸುತ್ತೇವೆ ಎಂದು ಆಚಾರ್ಯ ಹೇಳಿದ್ದಾರೆ.

ಆಚಾರ್ಯ ಮತ್ತು ಅವರ ಬೆಂಬಲಿಗರು ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ ನಂತರ ಕೋಳಿ ಮಾರಾಟಗಾರರು ಸೋಮವಾರ ತಮ್ಮ ಅಂಗಡಿಗಳನ್ನು ಮುಚ್ಚುತ್ತಿರುವುದು ವೈರಲ್‌ ವಿಡಿಯೋದಲ್ಲಿ ಕಂಡು ಬಂದಿದೆ. ಶಾಸಕ ಆಚಾರ್ಯ ಅಧಿಕಾರಿಯೋರ್ವರ ಜೊತೆ ಪ್ರಶ್ನಿಸುತ್ತಾ, ನಾನ್ ವೆಜ್‌ನ್ನು ರಸ್ತೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡಬಹುದೇ? ಹೌದು ಅಥವಾ ಇಲ್ಲ ಎಂದು ಉತ್ತರಿಸಿ. ನೀವು ಇದನ್ನು ಬೆಂಬಲಿಸುತ್ತೀರಾ? ಕೂಡಲೇ ರಸ್ತೆ ಬದಿಯ ಎಲ್ಲ ಮಾಂಸಾಹಾರಿ ಅಂಗಡಿಗಳನ್ನು ಮುಚ್ಚಬೇಕು. ಸಂಜೆ ಒಳಗಡೆ ವರದಿಯನ್ನು ನೀವು ನೀಡಬೇಕು. ಅಧಿಕಾರಿ ಯಾರಾದರೂ ನಾನು ಹೆದರುವುದಿಲ್ಲ ಎಂದು ಹೇಳುವುದು ಮತ್ತು  ಬೆಂಬಲಿಗರು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಪೀಪಲ್ಸ್ ಯೂನಿಯನ್ ಆಫ್ ಸಿವಿಲ್ ಲಿಬರ್ಟೀಸ್ ಈ ಕುರಿತು ಹೇಳಿಕೆಯನ್ನು ನೀಡಿದ್ದು, ಬೀದಿ ಮಾರಾಟಗಾರರ ಕಾಯಿದೆಯಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಪಟ್ಟಣ ಮಾರಾಟ ಸಮಿತಿ ರಚಿಸಿ ಬೀದಿ ಬದಿ ವ್ಯಾಪಾರಿಗಳಿಗೆ ಭದ್ರತೆ ಒದಗಿಸುವ ನಿಯಮವಿದೆ. ಇದುವರೆಗೂ ಪಟ್ಟಣ ಮಾರಾಟ ಸಮಿತಿಯು ಮಾರಾಟಗಾರರಿಗೆ ರಕ್ಷಣೆ ನೀಡಿಲ್ಲ. ಮಾರಾಟಗಾರರಿಗೆ ಪರವಾನಗಿ ನೀಡಲಾಗಿಲ್ಲ ಮತ್ತು ಮಾರಾಟ ವಲಯಗಳನ್ನು ಗುರುತಿಸಲಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಹೊಸದಾಗಿ ಚುನಾಯಿತ ಶಾಸಕರೊಬ್ಬರು ಕಾನೂನನ್ನು ಕೈಗೆತ್ತಿಕೊಂಡು ಮಾಂಸದ ಅಂಗಡಿಗಳನ್ನು ಮುಚ್ಚಿಸುತ್ತಿರುವುದು ಮತ್ತು ಮಾಂಸಾಹಾರಿ ಬೀದಿ ಬದಿ ವ್ಯಾಪಾರಿಗಳಿಗೆ ಬೆದರಿಕೆ ಹಾಕುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಹೇಳಿದೆ.

ಇದನ್ನು ಓದಿ: ಹುತಾತ್ಮ ಕ್ಯಾ.ಪ್ರಾಂಜಲ್ ಕುರಿತ ಸಿಎಂ ಹೇಳಿಕೆ ತಿರುಚಿದ ತೇಜಸ್ವಿ ಸೂರ್ಯ: ಕ್ಷಮೆಯಾಚಿಸುವಂತೆ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...