Homeಮುಖಪುಟ25ವರ್ಷ ಶಿಕ್ಷೆಗೆ ಗುರಿಯಾದರೂ ವಿಧಾನಸಭೆಯಿಂದ ಅನರ್ಹಗೊಳ್ಳದ ಬಿಜೆಪಿ ಶಾಸಕ!

25ವರ್ಷ ಶಿಕ್ಷೆಗೆ ಗುರಿಯಾದರೂ ವಿಧಾನಸಭೆಯಿಂದ ಅನರ್ಹಗೊಳ್ಳದ ಬಿಜೆಪಿ ಶಾಸಕ!

- Advertisement -
- Advertisement -

2014ರಲ್ಲಿ ಉತ್ತರಪ್ರದೇಶದ ಸೋನ್‌ಭದ್ರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿ 3 ದಿನಗಳು ಕಳೆದಿವೆ. ಅವರಿಗೆ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆಯನ್ನು ವಿಧಿಸಿದೆ. ಆದರೆ ನ್ಯಾಯಾಲಯದ ತೀರ್ಪು ಹೊರಬಂದು 3 ದಿನಗಳೇ ಕಳೆದರೂ ರಾಜ್ಯ ಶಾಸಕಾಂಗ ಸಭೆಯು ಅಪರಾಧಿ ಶಾಸಕನನ್ನು ಇನ್ನು ಕೂಡ ಅನರ್ಹ ಮಾಡಿಲ್ಲ.

ಕಳೆದ ವರ್ಷ ಕ್ರಿಮಿನಲ್‌ ಪ್ರಕರಣದಲ್ಲಿ ಆಪಾದಿತ ಸಮಾಜವಾದಿ ಪಕ್ಷದ  ಶಾಸಕರೋರ್ವರನ್ನು ವಿಧಾನಸಭೆಯಿಂದ ತಕ್ಷಣಕ್ಕೆ ಅಮಾನತು ಮಾಡಲಾಗಿತ್ತು. ಇದೀಗ ಉತ್ತರಪ್ರದೇಶ ಬಿಜೆಪಿ ಸರಕಾರದ ಧ್ವಂದ್ವ ನೀತಿ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ರಾಮದುಲರ್ ಗೊಂಡ್‌ ಉತ್ತರಪ್ರದೇಶದ ದುಡ್ಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಗೊಂಡ್ ಅವರು 2022ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ರಾಮದುಲರ್ ಗೊಂಡ್‌ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಹ್ಸಾನ್ ಉಲ್ಲಾ ಖಾನ್ ಅವರ ಪೀಠ ಡಿ.12 ರಂದು ಗೊಂಡ್‌ನನ್ನು ತಪ್ಪಿತಸ್ಥರೆಂದು ಘೋಷಿಸಿತ್ತು. ಡಿ.15 ರಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಗೊಂಡನಿಗೆ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿತ್ತು.

ಪ್ರಜಾಪ್ರತಿನಿಧಿ ಕಾಯಿದೆ 1951ರ ಪ್ರಕಾರ, ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಅಂತಹ ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹರಾಗುತ್ತಾರೆ ಮತ್ತು ಅವನ ಅಥವಾ ಅವಳ ಬಿಡುಗಡೆಯ ನಂತರ ಮುಂದಿನ 6 ತಿಂಗಳ ಅವಧಿವರೆಗೆ ಅನರ್ಹರಾಗಿರುತ್ತಾರೆ.

ಈ  ಕುರಿತು ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಅಪರಾಧಿಯೆಂದು ರಾಮದುಲರ್ ಗೊಂಡ್‌ಗೆ ನ್ಯಾಯಾಲಯ ಶಿಕ್ಷೆಯನ್ನು ವಿಧಿಸಿದ್ದರೂ, ಅವರನ್ನು ವಿದಾನಸಭೆಯಿಂದ ಇನ್ನೂ ಏಕೆ ಅನರ್ಹಗೊಳಿಸಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿರುವ ಕಾರಣ ಅವರಿಗೆ ವಿಶೇಷ ಗೌರವ ಮತ್ತು ನಿರ್ಭಯವನ್ನು ನೀಡಲಾಗುತ್ತಿದೆಯೇ? ಬುಲ್ಡೋಜರ್ ಕಾರ್ಯಾಚರಣೆ ಇಂದು ಅಥವಾ ನಾಳೆ ನಡೆಯುತ್ತದೆಯೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ ಎಂದು ಯಾದವ್‌ ಹೇಳಿದ್ದಾರೆ.

15 ವರ್ಷಗಳ ಹಿಂದಿನ  ಹಲ್ಲೆ ಪ್ರಕರಣದಲ್ಲಿ ಮೊರಾದಾಬಾದ್‌ನ ನ್ಯಾಯಾಲಯವು ಈ ಮೊದಲು ಶಾಸಕ ಅಬ್ದುಲ್ಲಾ ಅಜಮ್ ಅವರನ್ನು ದೋಷಿ ಎಂದು ಘೋಷಿಸಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಫೆ.15ರಂದು ಹಿರಿಯ ಎಸ್‌ಪಿ ನಾಯಕ ಅಜಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಮ್ ಅವರನ್ನು ರಾಂಪುರದ ಸುವಾರ್ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಯುಪಿ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ ಬಿಜೆಪಿ ಶಾಸಕನಿಗೆ 25 ವರ್ಷಗಳ ಶಿಕ್ಷೆ ವಿಧಿಸಿದ್ದರೂ ಅಮಾನತು ಮಾಡದಿರುವುದು ಟೀಕೆಗೆ ಕಾರಣವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...