Homeಮುಖಪುಟ25ವರ್ಷ ಶಿಕ್ಷೆಗೆ ಗುರಿಯಾದರೂ ವಿಧಾನಸಭೆಯಿಂದ ಅನರ್ಹಗೊಳ್ಳದ ಬಿಜೆಪಿ ಶಾಸಕ!

25ವರ್ಷ ಶಿಕ್ಷೆಗೆ ಗುರಿಯಾದರೂ ವಿಧಾನಸಭೆಯಿಂದ ಅನರ್ಹಗೊಳ್ಳದ ಬಿಜೆಪಿ ಶಾಸಕ!

- Advertisement -
- Advertisement -

2014ರಲ್ಲಿ ಉತ್ತರಪ್ರದೇಶದ ಸೋನ್‌ಭದ್ರಾದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ಗೆ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ವಿಧಿಸಿ 3 ದಿನಗಳು ಕಳೆದಿವೆ. ಅವರಿಗೆ ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಪೋಕ್ಸೊ ಪ್ರಕರಣದಲ್ಲಿ ನ್ಯಾಯಾಲಯ ಶಿಕ್ಷೆಯನ್ನು ವಿಧಿಸಿದೆ. ಆದರೆ ನ್ಯಾಯಾಲಯದ ತೀರ್ಪು ಹೊರಬಂದು 3 ದಿನಗಳೇ ಕಳೆದರೂ ರಾಜ್ಯ ಶಾಸಕಾಂಗ ಸಭೆಯು ಅಪರಾಧಿ ಶಾಸಕನನ್ನು ಇನ್ನು ಕೂಡ ಅನರ್ಹ ಮಾಡಿಲ್ಲ.

ಕಳೆದ ವರ್ಷ ಕ್ರಿಮಿನಲ್‌ ಪ್ರಕರಣದಲ್ಲಿ ಆಪಾದಿತ ಸಮಾಜವಾದಿ ಪಕ್ಷದ  ಶಾಸಕರೋರ್ವರನ್ನು ವಿಧಾನಸಭೆಯಿಂದ ತಕ್ಷಣಕ್ಕೆ ಅಮಾನತು ಮಾಡಲಾಗಿತ್ತು. ಇದೀಗ ಉತ್ತರಪ್ರದೇಶ ಬಿಜೆಪಿ ಸರಕಾರದ ಧ್ವಂದ್ವ ನೀತಿ ಪ್ರತಿಪಕ್ಷಗಳ ಆಕ್ರೋಶಕ್ಕೆ ಕಾರಣವಾಗಿದೆ.

ರಾಮದುಲರ್ ಗೊಂಡ್‌ ಉತ್ತರಪ್ರದೇಶದ ದುಡ್ಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಗೊಂಡ್ ಅವರು 2022ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ರಾಮದುಲರ್ ಗೊಂಡ್‌ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಕ್ಕಾಗಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಹ್ಸಾನ್ ಉಲ್ಲಾ ಖಾನ್ ಅವರ ಪೀಠ ಡಿ.12 ರಂದು ಗೊಂಡ್‌ನನ್ನು ತಪ್ಪಿತಸ್ಥರೆಂದು ಘೋಷಿಸಿತ್ತು. ಡಿ.15 ರಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಗೊಂಡನಿಗೆ 25 ವರ್ಷಗಳ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿತ್ತು.

ಪ್ರಜಾಪ್ರತಿನಿಧಿ ಕಾಯಿದೆ 1951ರ ಪ್ರಕಾರ, ಎರಡು ಅಥವಾ ಅದಕ್ಕಿಂತ ಹೆಚ್ಚು ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾದ ಶಾಸಕರು ಅಂತಹ ಅಪರಾಧ ನಿರ್ಣಯದ ದಿನಾಂಕದಿಂದ ಅನರ್ಹರಾಗುತ್ತಾರೆ ಮತ್ತು ಅವನ ಅಥವಾ ಅವಳ ಬಿಡುಗಡೆಯ ನಂತರ ಮುಂದಿನ 6 ತಿಂಗಳ ಅವಧಿವರೆಗೆ ಅನರ್ಹರಾಗಿರುತ್ತಾರೆ.

ಈ  ಕುರಿತು ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ಅಪರಾಧಿಯೆಂದು ರಾಮದುಲರ್ ಗೊಂಡ್‌ಗೆ ನ್ಯಾಯಾಲಯ ಶಿಕ್ಷೆಯನ್ನು ವಿಧಿಸಿದ್ದರೂ, ಅವರನ್ನು ವಿದಾನಸಭೆಯಿಂದ ಇನ್ನೂ ಏಕೆ ಅನರ್ಹಗೊಳಿಸಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. ಅವರು ಬಿಜೆಪಿ ಶಾಸಕರಾಗಿರುವ ಕಾರಣ ಅವರಿಗೆ ವಿಶೇಷ ಗೌರವ ಮತ್ತು ನಿರ್ಭಯವನ್ನು ನೀಡಲಾಗುತ್ತಿದೆಯೇ? ಬುಲ್ಡೋಜರ್ ಕಾರ್ಯಾಚರಣೆ ಇಂದು ಅಥವಾ ನಾಳೆ ನಡೆಯುತ್ತದೆಯೇ ಎಂದು ಸಾರ್ವಜನಿಕರು ಕೇಳುತ್ತಿದ್ದಾರೆ ಎಂದು ಯಾದವ್‌ ಹೇಳಿದ್ದಾರೆ.

15 ವರ್ಷಗಳ ಹಿಂದಿನ  ಹಲ್ಲೆ ಪ್ರಕರಣದಲ್ಲಿ ಮೊರಾದಾಬಾದ್‌ನ ನ್ಯಾಯಾಲಯವು ಈ ಮೊದಲು ಶಾಸಕ ಅಬ್ದುಲ್ಲಾ ಅಜಮ್ ಅವರನ್ನು ದೋಷಿ ಎಂದು ಘೋಷಿಸಿ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಇದರ ಬೆನ್ನಲ್ಲೇ ಫೆ.15ರಂದು ಹಿರಿಯ ಎಸ್‌ಪಿ ನಾಯಕ ಅಜಂ ಖಾನ್ ಅವರ ಪುತ್ರ ಅಬ್ದುಲ್ಲಾ ಅಜಮ್ ಅವರನ್ನು ರಾಂಪುರದ ಸುವಾರ್ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಯುಪಿ ಸೆಕ್ರೆಟರಿಯೇಟ್ ಅಧಿಸೂಚನೆಯನ್ನು ಹೊರಡಿಸಿತ್ತು. ಆದರೆ ಬಿಜೆಪಿ ಶಾಸಕನಿಗೆ 25 ವರ್ಷಗಳ ಶಿಕ್ಷೆ ವಿಧಿಸಿದ್ದರೂ ಅಮಾನತು ಮಾಡದಿರುವುದು ಟೀಕೆಗೆ ಕಾರಣವಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...