Homeಮುಖಪುಟಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಕೂಡಲೇ ತನ್ನ ಸಿದ್ದಾಂತ ಜಾರಿಗೆ ಮುಂದಾಗಿದ್ದು, ಅದರ ಭಾಗವಾಗಿ ಮೂರು ಪ್ರದೇಶಗಳ ಮುಸ್ಲಿಂ ಹೆಸರುಗಳ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ.

ಗುರುವಾರ (ಫೆ.27) ಮೂವರು ಬಿಜೆಪಿ ಶಾಸಕರು ನಜಾಫ್‌ಗಢ ಮತ್ತು ಮುಸ್ತಾಬಾದ್ ವಿಧಾನಸಭಾ ಕ್ಷೇತ್ರಗಳ ಹೆಸರುಗಳನ್ನು ಹಾಗೂ ರಾಜಧಾನಿಯ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿಧಾನಸಭೆಯಲ್ಲಿ ಮಾತನಾಡಿದ ನಜಾಫ್‌ಗಢ ಶಾಸಕಿ ನೀಲಂ ಪಹಲ್ವಾನ್, ತಮ್ಮ ಕ್ಷೇತ್ರದ ಹೆಸರನ್ನು ನಹರ್‌ಗಢ ಎಂದು ಬದಲಾಯಿಸಬೇಕೆಂದು ಪ್ರಸ್ತಾಪಿಸಿದ್ದಾರೆ.

“ಮೊಘಲ್ ಚಕ್ರವರ್ತಿ ಎರಡನೇ ಶಾ ಆಲಂ ನಜಾಫ್‌ಗಢದ ಮೇಲೆ ಹಿಡಿತ ಸಾಧಿಸಿದಾಗ ಜನರು ಅವರನ್ನು ವಿರೋಧಿಸಿದ್ದರು. ನಜಾಫ್ ಖಾನ್ ಅವರನ್ನು ಈ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅಂದಿನಿಂದ ಈ ಪ್ರದೇಶವನ್ನು ನಜಾಫ್‌ಗಢ ಎಂದು ಕರೆಯಲಾಗುತ್ತಿದೆ” ಎಂದು ಹೇಳಿದ್ದಾರೆ.

“1857ರಲ್ಲಿ ದೊರೆ ನಹರ್ ಸಿಂಗ್ ಈ ಪ್ರದೇಶವನ್ನು ದೆಹಲಿ ಪ್ರಾಂತ್ಯದ ನಿಯಂತ್ರಣಕ್ಕೆ ತಂದಿದ್ದರು. ಹಾಗಾಗಿ, ಈ ಪ್ರದೇಶಕ್ಕೆ ನಹರ್ ಸಿಂಗ್ ಅವರ ಹೆಸರಿಟ್ಟರೆ ಮಾತ್ರ ಅವರನ್ನು ನಿಜವಾಗಿಯೂ ಗೌರವಿಸಿದಂತಾಗುತ್ತದೆ” ಎಂದು ಪಹಲ್ವಾನ್ ತಿಳಿಸಿದ್ದಾರೆ.

“ನಜಾಫ್‌ಗಢದ ನಿವಾಸಿಗಳು ನಜಾಫ್‌ ಖಾನ್‌ನಿಂದ ದಬ್ಬಾಳಿಕೆಗೆ ಒಳಗಾಗಿದ್ದರಿಂದ ಕ್ಷೇತ್ರದ ಹೆಸರನ್ನು ಬದಲಾಯಿಸಲು ಬಯಸಿದ್ದಾರೆ” ಎಂದು” ಶಾಸಕಿ ನೀಲಂ ಹೇಳಿದ್ದಾರೆ.

ಶಾಸಕಿ ನೀಲಂ ಅವರ ಪ್ರಸ್ತಾವನೆಯ ನಂತರ, ಆರ್‌ಕೆ ಪುರಂನ ಬಿಜೆಪಿ ಶಾಸಕ ಅನಿಲ್ ಶರ್ಮಾ ಅವರು ತಮ್ಮ ಕ್ಷೇತ್ರದ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾಧವಪುರಂ ಎಂದು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಬಹಳ ಹಿಂದೆಯೇ ಎಂಸಿಡಿ (ದೆಹಲಿ ಪಾಲಿಕೆ) ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಅಂಗೀಕರಿಸಿದೆ. ಆದರೆ, ಅದನ್ನು ಈ ಹಿಂದಿನ ಆಮ್ ಆದ್ಮಿ ಪಕ್ಷದ ಸರ್ಕಾರ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೆಸರು ಬದಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಗುರುವಾರ ದೆಹಲಿ ವಿಧಾನಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಆರು ಬಾರಿಯ ಶಾಸಕ ಮೋಹನ್ ಸಿಂಗ್ ಬಿಶ್ತ್, ತಮ್ಮ ಕ್ಷೇತ್ರವಾದ ಮುಸ್ತಾಫಾಬಾದ್ ಅನ್ನು ಶಿವ ವಿಹಾರ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಯಾಗಿದೆ. ನಾವು ಭರವಸೆ ಈಡೇರಿಸಲು ಬದ್ಧರಾಗಿದ್ದೇವೆ” ಎಂದು ಮೋಹನ್ ಸಿಂಗ್ ಬಿಶ್ತ್ ಹೇಳಿದ್ದಾರೆ. “ಮುಸ್ತಾಫಾಬಾದ್ ಎಂಬ ವಿಧಾನಸಭಾ ಕ್ಷೇತ್ರದೊಳಗಿನ ಪ್ರದೇಶವು ಬದಲಾಗದೆ ಉಳಿಯಲಿದೆ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ 26 ವರ್ಷಗಳ ನಂತರ ಬಿಜೆಪಿ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವ ಪಕ್ಷ 48 ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳನ್ನು ಗೆದ್ದಿದೆ.

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...