Homeಮುಖಪುಟಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಕೂಡಲೇ ತನ್ನ ಸಿದ್ದಾಂತ ಜಾರಿಗೆ ಮುಂದಾಗಿದ್ದು, ಅದರ ಭಾಗವಾಗಿ ಮೂರು ಪ್ರದೇಶಗಳ ಮುಸ್ಲಿಂ ಹೆಸರುಗಳ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ.

ಗುರುವಾರ (ಫೆ.27) ಮೂವರು ಬಿಜೆಪಿ ಶಾಸಕರು ನಜಾಫ್‌ಗಢ ಮತ್ತು ಮುಸ್ತಾಬಾದ್ ವಿಧಾನಸಭಾ ಕ್ಷೇತ್ರಗಳ ಹೆಸರುಗಳನ್ನು ಹಾಗೂ ರಾಜಧಾನಿಯ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿಧಾನಸಭೆಯಲ್ಲಿ ಮಾತನಾಡಿದ ನಜಾಫ್‌ಗಢ ಶಾಸಕಿ ನೀಲಂ ಪಹಲ್ವಾನ್, ತಮ್ಮ ಕ್ಷೇತ್ರದ ಹೆಸರನ್ನು ನಹರ್‌ಗಢ ಎಂದು ಬದಲಾಯಿಸಬೇಕೆಂದು ಪ್ರಸ್ತಾಪಿಸಿದ್ದಾರೆ.

“ಮೊಘಲ್ ಚಕ್ರವರ್ತಿ ಎರಡನೇ ಶಾ ಆಲಂ ನಜಾಫ್‌ಗಢದ ಮೇಲೆ ಹಿಡಿತ ಸಾಧಿಸಿದಾಗ ಜನರು ಅವರನ್ನು ವಿರೋಧಿಸಿದ್ದರು. ನಜಾಫ್ ಖಾನ್ ಅವರನ್ನು ಈ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅಂದಿನಿಂದ ಈ ಪ್ರದೇಶವನ್ನು ನಜಾಫ್‌ಗಢ ಎಂದು ಕರೆಯಲಾಗುತ್ತಿದೆ” ಎಂದು ಹೇಳಿದ್ದಾರೆ.

“1857ರಲ್ಲಿ ದೊರೆ ನಹರ್ ಸಿಂಗ್ ಈ ಪ್ರದೇಶವನ್ನು ದೆಹಲಿ ಪ್ರಾಂತ್ಯದ ನಿಯಂತ್ರಣಕ್ಕೆ ತಂದಿದ್ದರು. ಹಾಗಾಗಿ, ಈ ಪ್ರದೇಶಕ್ಕೆ ನಹರ್ ಸಿಂಗ್ ಅವರ ಹೆಸರಿಟ್ಟರೆ ಮಾತ್ರ ಅವರನ್ನು ನಿಜವಾಗಿಯೂ ಗೌರವಿಸಿದಂತಾಗುತ್ತದೆ” ಎಂದು ಪಹಲ್ವಾನ್ ತಿಳಿಸಿದ್ದಾರೆ.

“ನಜಾಫ್‌ಗಢದ ನಿವಾಸಿಗಳು ನಜಾಫ್‌ ಖಾನ್‌ನಿಂದ ದಬ್ಬಾಳಿಕೆಗೆ ಒಳಗಾಗಿದ್ದರಿಂದ ಕ್ಷೇತ್ರದ ಹೆಸರನ್ನು ಬದಲಾಯಿಸಲು ಬಯಸಿದ್ದಾರೆ” ಎಂದು” ಶಾಸಕಿ ನೀಲಂ ಹೇಳಿದ್ದಾರೆ.

ಶಾಸಕಿ ನೀಲಂ ಅವರ ಪ್ರಸ್ತಾವನೆಯ ನಂತರ, ಆರ್‌ಕೆ ಪುರಂನ ಬಿಜೆಪಿ ಶಾಸಕ ಅನಿಲ್ ಶರ್ಮಾ ಅವರು ತಮ್ಮ ಕ್ಷೇತ್ರದ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾಧವಪುರಂ ಎಂದು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಬಹಳ ಹಿಂದೆಯೇ ಎಂಸಿಡಿ (ದೆಹಲಿ ಪಾಲಿಕೆ) ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಅಂಗೀಕರಿಸಿದೆ. ಆದರೆ, ಅದನ್ನು ಈ ಹಿಂದಿನ ಆಮ್ ಆದ್ಮಿ ಪಕ್ಷದ ಸರ್ಕಾರ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೆಸರು ಬದಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಗುರುವಾರ ದೆಹಲಿ ವಿಧಾನಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಆರು ಬಾರಿಯ ಶಾಸಕ ಮೋಹನ್ ಸಿಂಗ್ ಬಿಶ್ತ್, ತಮ್ಮ ಕ್ಷೇತ್ರವಾದ ಮುಸ್ತಾಫಾಬಾದ್ ಅನ್ನು ಶಿವ ವಿಹಾರ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಯಾಗಿದೆ. ನಾವು ಭರವಸೆ ಈಡೇರಿಸಲು ಬದ್ಧರಾಗಿದ್ದೇವೆ” ಎಂದು ಮೋಹನ್ ಸಿಂಗ್ ಬಿಶ್ತ್ ಹೇಳಿದ್ದಾರೆ. “ಮುಸ್ತಾಫಾಬಾದ್ ಎಂಬ ವಿಧಾನಸಭಾ ಕ್ಷೇತ್ರದೊಳಗಿನ ಪ್ರದೇಶವು ಬದಲಾಗದೆ ಉಳಿಯಲಿದೆ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ 26 ವರ್ಷಗಳ ನಂತರ ಬಿಜೆಪಿ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವ ಪಕ್ಷ 48 ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳನ್ನು ಗೆದ್ದಿದೆ.

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...