Homeಮುಖಪುಟಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಕೂಡಲೇ ತನ್ನ ಸಿದ್ದಾಂತ ಜಾರಿಗೆ ಮುಂದಾಗಿದ್ದು, ಅದರ ಭಾಗವಾಗಿ ಮೂರು ಪ್ರದೇಶಗಳ ಮುಸ್ಲಿಂ ಹೆಸರುಗಳ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ.

ಗುರುವಾರ (ಫೆ.27) ಮೂವರು ಬಿಜೆಪಿ ಶಾಸಕರು ನಜಾಫ್‌ಗಢ ಮತ್ತು ಮುಸ್ತಾಬಾದ್ ವಿಧಾನಸಭಾ ಕ್ಷೇತ್ರಗಳ ಹೆಸರುಗಳನ್ನು ಹಾಗೂ ರಾಜಧಾನಿಯ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿಧಾನಸಭೆಯಲ್ಲಿ ಮಾತನಾಡಿದ ನಜಾಫ್‌ಗಢ ಶಾಸಕಿ ನೀಲಂ ಪಹಲ್ವಾನ್, ತಮ್ಮ ಕ್ಷೇತ್ರದ ಹೆಸರನ್ನು ನಹರ್‌ಗಢ ಎಂದು ಬದಲಾಯಿಸಬೇಕೆಂದು ಪ್ರಸ್ತಾಪಿಸಿದ್ದಾರೆ.

“ಮೊಘಲ್ ಚಕ್ರವರ್ತಿ ಎರಡನೇ ಶಾ ಆಲಂ ನಜಾಫ್‌ಗಢದ ಮೇಲೆ ಹಿಡಿತ ಸಾಧಿಸಿದಾಗ ಜನರು ಅವರನ್ನು ವಿರೋಧಿಸಿದ್ದರು. ನಜಾಫ್ ಖಾನ್ ಅವರನ್ನು ಈ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅಂದಿನಿಂದ ಈ ಪ್ರದೇಶವನ್ನು ನಜಾಫ್‌ಗಢ ಎಂದು ಕರೆಯಲಾಗುತ್ತಿದೆ” ಎಂದು ಹೇಳಿದ್ದಾರೆ.

“1857ರಲ್ಲಿ ದೊರೆ ನಹರ್ ಸಿಂಗ್ ಈ ಪ್ರದೇಶವನ್ನು ದೆಹಲಿ ಪ್ರಾಂತ್ಯದ ನಿಯಂತ್ರಣಕ್ಕೆ ತಂದಿದ್ದರು. ಹಾಗಾಗಿ, ಈ ಪ್ರದೇಶಕ್ಕೆ ನಹರ್ ಸಿಂಗ್ ಅವರ ಹೆಸರಿಟ್ಟರೆ ಮಾತ್ರ ಅವರನ್ನು ನಿಜವಾಗಿಯೂ ಗೌರವಿಸಿದಂತಾಗುತ್ತದೆ” ಎಂದು ಪಹಲ್ವಾನ್ ತಿಳಿಸಿದ್ದಾರೆ.

“ನಜಾಫ್‌ಗಢದ ನಿವಾಸಿಗಳು ನಜಾಫ್‌ ಖಾನ್‌ನಿಂದ ದಬ್ಬಾಳಿಕೆಗೆ ಒಳಗಾಗಿದ್ದರಿಂದ ಕ್ಷೇತ್ರದ ಹೆಸರನ್ನು ಬದಲಾಯಿಸಲು ಬಯಸಿದ್ದಾರೆ” ಎಂದು” ಶಾಸಕಿ ನೀಲಂ ಹೇಳಿದ್ದಾರೆ.

ಶಾಸಕಿ ನೀಲಂ ಅವರ ಪ್ರಸ್ತಾವನೆಯ ನಂತರ, ಆರ್‌ಕೆ ಪುರಂನ ಬಿಜೆಪಿ ಶಾಸಕ ಅನಿಲ್ ಶರ್ಮಾ ಅವರು ತಮ್ಮ ಕ್ಷೇತ್ರದ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾಧವಪುರಂ ಎಂದು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಬಹಳ ಹಿಂದೆಯೇ ಎಂಸಿಡಿ (ದೆಹಲಿ ಪಾಲಿಕೆ) ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಅಂಗೀಕರಿಸಿದೆ. ಆದರೆ, ಅದನ್ನು ಈ ಹಿಂದಿನ ಆಮ್ ಆದ್ಮಿ ಪಕ್ಷದ ಸರ್ಕಾರ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೆಸರು ಬದಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಗುರುವಾರ ದೆಹಲಿ ವಿಧಾನಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಆರು ಬಾರಿಯ ಶಾಸಕ ಮೋಹನ್ ಸಿಂಗ್ ಬಿಶ್ತ್, ತಮ್ಮ ಕ್ಷೇತ್ರವಾದ ಮುಸ್ತಾಫಾಬಾದ್ ಅನ್ನು ಶಿವ ವಿಹಾರ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಯಾಗಿದೆ. ನಾವು ಭರವಸೆ ಈಡೇರಿಸಲು ಬದ್ಧರಾಗಿದ್ದೇವೆ” ಎಂದು ಮೋಹನ್ ಸಿಂಗ್ ಬಿಶ್ತ್ ಹೇಳಿದ್ದಾರೆ. “ಮುಸ್ತಾಫಾಬಾದ್ ಎಂಬ ವಿಧಾನಸಭಾ ಕ್ಷೇತ್ರದೊಳಗಿನ ಪ್ರದೇಶವು ಬದಲಾಗದೆ ಉಳಿಯಲಿದೆ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ 26 ವರ್ಷಗಳ ನಂತರ ಬಿಜೆಪಿ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವ ಪಕ್ಷ 48 ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳನ್ನು ಗೆದ್ದಿದೆ.

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...

‘ಮತಗಳ್ಳತನ ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ’: ‘ಬಿಜೆಪಿ-ಇಸಿ ಒಪ್ಪಂದ’ವನ್ನು ನೇರವಾಗಿ ಟೀಕಿಸಿದ ರಾಹುಲ್ ಗಾಂಧಿ

ನವದೆಹಲಿ: "ಮತಗಳ್ಳತನ"(ವೋಟ್ ಚೋರಿ) ಒಂದು "ಅತ್ಯಂತ ಗಂಭೀರ ರಾಷ್ಟ್ರವಿರೋಧಿ ಕೃತ್ಯ”,  ಬಿಜೆಪಿ ಮತ್ತು ಚುನಾವಣಾ ಆಯೋಗವು ಭಾರತದ ಪ್ರಜಾಪ್ರಭುತ್ವವನ್ನು ನಾಶಮಾಡಲು ಮತ್ತು "ಜನರ ಧ್ವನಿಯನ್ನು ಕಸಿದುಕೊಳ್ಳಲು" ಪಿತೂರಿ ನಡೆಸುತ್ತಿವೆ ಎಂದು ಕಾಂಗ್ರೆಸ್ ನಾಯಕ...

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...