Homeಮುಖಪುಟಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಕೂಡಲೇ ತನ್ನ ಸಿದ್ದಾಂತ ಜಾರಿಗೆ ಮುಂದಾಗಿದ್ದು, ಅದರ ಭಾಗವಾಗಿ ಮೂರು ಪ್ರದೇಶಗಳ ಮುಸ್ಲಿಂ ಹೆಸರುಗಳ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ.

ಗುರುವಾರ (ಫೆ.27) ಮೂವರು ಬಿಜೆಪಿ ಶಾಸಕರು ನಜಾಫ್‌ಗಢ ಮತ್ತು ಮುಸ್ತಾಬಾದ್ ವಿಧಾನಸಭಾ ಕ್ಷೇತ್ರಗಳ ಹೆಸರುಗಳನ್ನು ಹಾಗೂ ರಾಜಧಾನಿಯ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿಧಾನಸಭೆಯಲ್ಲಿ ಮಾತನಾಡಿದ ನಜಾಫ್‌ಗಢ ಶಾಸಕಿ ನೀಲಂ ಪಹಲ್ವಾನ್, ತಮ್ಮ ಕ್ಷೇತ್ರದ ಹೆಸರನ್ನು ನಹರ್‌ಗಢ ಎಂದು ಬದಲಾಯಿಸಬೇಕೆಂದು ಪ್ರಸ್ತಾಪಿಸಿದ್ದಾರೆ.

“ಮೊಘಲ್ ಚಕ್ರವರ್ತಿ ಎರಡನೇ ಶಾ ಆಲಂ ನಜಾಫ್‌ಗಢದ ಮೇಲೆ ಹಿಡಿತ ಸಾಧಿಸಿದಾಗ ಜನರು ಅವರನ್ನು ವಿರೋಧಿಸಿದ್ದರು. ನಜಾಫ್ ಖಾನ್ ಅವರನ್ನು ಈ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅಂದಿನಿಂದ ಈ ಪ್ರದೇಶವನ್ನು ನಜಾಫ್‌ಗಢ ಎಂದು ಕರೆಯಲಾಗುತ್ತಿದೆ” ಎಂದು ಹೇಳಿದ್ದಾರೆ.

“1857ರಲ್ಲಿ ದೊರೆ ನಹರ್ ಸಿಂಗ್ ಈ ಪ್ರದೇಶವನ್ನು ದೆಹಲಿ ಪ್ರಾಂತ್ಯದ ನಿಯಂತ್ರಣಕ್ಕೆ ತಂದಿದ್ದರು. ಹಾಗಾಗಿ, ಈ ಪ್ರದೇಶಕ್ಕೆ ನಹರ್ ಸಿಂಗ್ ಅವರ ಹೆಸರಿಟ್ಟರೆ ಮಾತ್ರ ಅವರನ್ನು ನಿಜವಾಗಿಯೂ ಗೌರವಿಸಿದಂತಾಗುತ್ತದೆ” ಎಂದು ಪಹಲ್ವಾನ್ ತಿಳಿಸಿದ್ದಾರೆ.

“ನಜಾಫ್‌ಗಢದ ನಿವಾಸಿಗಳು ನಜಾಫ್‌ ಖಾನ್‌ನಿಂದ ದಬ್ಬಾಳಿಕೆಗೆ ಒಳಗಾಗಿದ್ದರಿಂದ ಕ್ಷೇತ್ರದ ಹೆಸರನ್ನು ಬದಲಾಯಿಸಲು ಬಯಸಿದ್ದಾರೆ” ಎಂದು” ಶಾಸಕಿ ನೀಲಂ ಹೇಳಿದ್ದಾರೆ.

ಶಾಸಕಿ ನೀಲಂ ಅವರ ಪ್ರಸ್ತಾವನೆಯ ನಂತರ, ಆರ್‌ಕೆ ಪುರಂನ ಬಿಜೆಪಿ ಶಾಸಕ ಅನಿಲ್ ಶರ್ಮಾ ಅವರು ತಮ್ಮ ಕ್ಷೇತ್ರದ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾಧವಪುರಂ ಎಂದು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಬಹಳ ಹಿಂದೆಯೇ ಎಂಸಿಡಿ (ದೆಹಲಿ ಪಾಲಿಕೆ) ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಅಂಗೀಕರಿಸಿದೆ. ಆದರೆ, ಅದನ್ನು ಈ ಹಿಂದಿನ ಆಮ್ ಆದ್ಮಿ ಪಕ್ಷದ ಸರ್ಕಾರ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೆಸರು ಬದಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಗುರುವಾರ ದೆಹಲಿ ವಿಧಾನಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಆರು ಬಾರಿಯ ಶಾಸಕ ಮೋಹನ್ ಸಿಂಗ್ ಬಿಶ್ತ್, ತಮ್ಮ ಕ್ಷೇತ್ರವಾದ ಮುಸ್ತಾಫಾಬಾದ್ ಅನ್ನು ಶಿವ ವಿಹಾರ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಯಾಗಿದೆ. ನಾವು ಭರವಸೆ ಈಡೇರಿಸಲು ಬದ್ಧರಾಗಿದ್ದೇವೆ” ಎಂದು ಮೋಹನ್ ಸಿಂಗ್ ಬಿಶ್ತ್ ಹೇಳಿದ್ದಾರೆ. “ಮುಸ್ತಾಫಾಬಾದ್ ಎಂಬ ವಿಧಾನಸಭಾ ಕ್ಷೇತ್ರದೊಳಗಿನ ಪ್ರದೇಶವು ಬದಲಾಗದೆ ಉಳಿಯಲಿದೆ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ 26 ವರ್ಷಗಳ ನಂತರ ಬಿಜೆಪಿ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವ ಪಕ್ಷ 48 ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳನ್ನು ಗೆದ್ದಿದೆ.

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...