Homeಮುಖಪುಟಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

ಮೂರು ಮುಸ್ಲಿಂ ಹೆಸರುಗಳ ಬದಲಾವಣೆಗೆ ಬಿಜೆಪಿ ಶಾಸಕರಿಂದ ಒತ್ತಾಯ : ಸರ್ಕಾರಕ್ಕೆ ಪ್ರಸ್ತಾವನೆ

- Advertisement -
- Advertisement -

ದೆಹಲಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೇರಿದ ಕೂಡಲೇ ತನ್ನ ಸಿದ್ದಾಂತ ಜಾರಿಗೆ ಮುಂದಾಗಿದ್ದು, ಅದರ ಭಾಗವಾಗಿ ಮೂರು ಪ್ರದೇಶಗಳ ಮುಸ್ಲಿಂ ಹೆಸರುಗಳ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ.

ಗುರುವಾರ (ಫೆ.27) ಮೂವರು ಬಿಜೆಪಿ ಶಾಸಕರು ನಜಾಫ್‌ಗಢ ಮತ್ತು ಮುಸ್ತಾಬಾದ್ ವಿಧಾನಸಭಾ ಕ್ಷೇತ್ರಗಳ ಹೆಸರುಗಳನ್ನು ಹಾಗೂ ರಾಜಧಾನಿಯ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿಧಾನಸಭೆಯಲ್ಲಿ ಮಾತನಾಡಿದ ನಜಾಫ್‌ಗಢ ಶಾಸಕಿ ನೀಲಂ ಪಹಲ್ವಾನ್, ತಮ್ಮ ಕ್ಷೇತ್ರದ ಹೆಸರನ್ನು ನಹರ್‌ಗಢ ಎಂದು ಬದಲಾಯಿಸಬೇಕೆಂದು ಪ್ರಸ್ತಾಪಿಸಿದ್ದಾರೆ.

“ಮೊಘಲ್ ಚಕ್ರವರ್ತಿ ಎರಡನೇ ಶಾ ಆಲಂ ನಜಾಫ್‌ಗಢದ ಮೇಲೆ ಹಿಡಿತ ಸಾಧಿಸಿದಾಗ ಜನರು ಅವರನ್ನು ವಿರೋಧಿಸಿದ್ದರು. ನಜಾಫ್ ಖಾನ್ ಅವರನ್ನು ಈ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಅಂದಿನಿಂದ ಈ ಪ್ರದೇಶವನ್ನು ನಜಾಫ್‌ಗಢ ಎಂದು ಕರೆಯಲಾಗುತ್ತಿದೆ” ಎಂದು ಹೇಳಿದ್ದಾರೆ.

“1857ರಲ್ಲಿ ದೊರೆ ನಹರ್ ಸಿಂಗ್ ಈ ಪ್ರದೇಶವನ್ನು ದೆಹಲಿ ಪ್ರಾಂತ್ಯದ ನಿಯಂತ್ರಣಕ್ಕೆ ತಂದಿದ್ದರು. ಹಾಗಾಗಿ, ಈ ಪ್ರದೇಶಕ್ಕೆ ನಹರ್ ಸಿಂಗ್ ಅವರ ಹೆಸರಿಟ್ಟರೆ ಮಾತ್ರ ಅವರನ್ನು ನಿಜವಾಗಿಯೂ ಗೌರವಿಸಿದಂತಾಗುತ್ತದೆ” ಎಂದು ಪಹಲ್ವಾನ್ ತಿಳಿಸಿದ್ದಾರೆ.

“ನಜಾಫ್‌ಗಢದ ನಿವಾಸಿಗಳು ನಜಾಫ್‌ ಖಾನ್‌ನಿಂದ ದಬ್ಬಾಳಿಕೆಗೆ ಒಳಗಾಗಿದ್ದರಿಂದ ಕ್ಷೇತ್ರದ ಹೆಸರನ್ನು ಬದಲಾಯಿಸಲು ಬಯಸಿದ್ದಾರೆ” ಎಂದು” ಶಾಸಕಿ ನೀಲಂ ಹೇಳಿದ್ದಾರೆ.

ಶಾಸಕಿ ನೀಲಂ ಅವರ ಪ್ರಸ್ತಾವನೆಯ ನಂತರ, ಆರ್‌ಕೆ ಪುರಂನ ಬಿಜೆಪಿ ಶಾಸಕ ಅನಿಲ್ ಶರ್ಮಾ ಅವರು ತಮ್ಮ ಕ್ಷೇತ್ರದ ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಮಾಧವಪುರಂ ಎಂದು ಬದಲಾಯಿಸಲು ಪ್ರಸ್ತಾಪಿಸಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

“ಬಹಳ ಹಿಂದೆಯೇ ಎಂಸಿಡಿ (ದೆಹಲಿ ಪಾಲಿಕೆ) ಮೊಹಮ್ಮದ್‌ಪುರ ಗ್ರಾಮದ ಹೆಸರನ್ನು ಬದಲಾಯಿಸುವ ಪ್ರಸ್ತಾಪವನ್ನು ಅಂಗೀಕರಿಸಿದೆ. ಆದರೆ, ಅದನ್ನು ಈ ಹಿಂದಿನ ಆಮ್ ಆದ್ಮಿ ಪಕ್ಷದ ಸರ್ಕಾರ ಪರಿಗಣಿಸಿರಲಿಲ್ಲ. ಈಗ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೆಸರು ಬದಲಾಯಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದಿದ್ದಾರೆ.

ಗುರುವಾರ ದೆಹಲಿ ವಿಧಾನಸಭೆಯ ಉಪಸಭಾಪತಿಯಾಗಿ ಆಯ್ಕೆಯಾದ ಆರು ಬಾರಿಯ ಶಾಸಕ ಮೋಹನ್ ಸಿಂಗ್ ಬಿಶ್ತ್, ತಮ್ಮ ಕ್ಷೇತ್ರವಾದ ಮುಸ್ತಾಫಾಬಾದ್ ಅನ್ನು ಶಿವ ವಿಹಾರ್ ಎಂದು ಮರುನಾಮಕರಣ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

“ಇದು ಚುನಾವಣೆಯ ಸಮಯದಲ್ಲಿ ನೀಡಿದ ಭರವಸೆಯಾಗಿದೆ. ನಾವು ಭರವಸೆ ಈಡೇರಿಸಲು ಬದ್ಧರಾಗಿದ್ದೇವೆ” ಎಂದು ಮೋಹನ್ ಸಿಂಗ್ ಬಿಶ್ತ್ ಹೇಳಿದ್ದಾರೆ. “ಮುಸ್ತಾಫಾಬಾದ್ ಎಂಬ ವಿಧಾನಸಭಾ ಕ್ಷೇತ್ರದೊಳಗಿನ ಪ್ರದೇಶವು ಬದಲಾಗದೆ ಉಳಿಯಲಿದೆ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ 26 ವರ್ಷಗಳ ನಂತರ ಬಿಜೆಪಿ ರಾಜಧಾನಿಯಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ಹಿಂದುತ್ವ ಪಕ್ಷ 48 ಸ್ಥಾನಗಳನ್ನು ಗೆದ್ದರೆ, ಆಮ್ ಆದ್ಮಿ ಪಕ್ಷ 22 ಸ್ಥಾನಗಳನ್ನು ಗೆದ್ದಿದೆ.

ಬಿಹಾರ | ಶಿವರಾತ್ರಿ ಮೆರವಣಿಗೆ ವೇಳೆ ಉದ್ರೇಕಕಾರಿ ಟ್ಯಾಬ್ಲೋ ಪ್ರದರ್ಶಿಸಿದ ಬಜರಂಗದಳದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...