HomeಮುಖಪುಟBBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

- Advertisement -
- Advertisement -

ಬೆಂಗಳೂರಿನಲ್ಲಿ BBMP ಶಾಲೆ ನಿರ್ಮಾಣಕ್ಕೆ 2010ರಲ್ಲಿ ಬಿಡಿಎ ವತಿಯಿಂದ ಮಂಜೂರಾದ ನಾಗರಿಕ ಸೌಕರ್ಯಗಳ ನಿವೇಶನವನ್ನು ಅಕ್ರಮವಾಗಿ ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ ಚಂದ್ರಪ್ಪನವರು ಕಬಳಿಸಿದ್ದಾರೆ ಎಂದು ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆಯ ಬಿ.ಎಂ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೆಂಗೇರಿಯ ಸರ್.ಎಂ ವಿಶ್ವೇಶ್ವರಯ್ಯ ಬಡವಣೆಯ 2ನೇ ಬ್ಲಾಕ್‌ನಲ್ಲಿರುವ 25,225 ಚ.ಅಡಿಯ ಸಿಎ ನಿವೇಶನವನ್ನು ಬಿಬಿಎಂಪಿ ಕನ್ನಡ ಶಾಲೆ ನಿರ್ಮಾಣಕ್ಕೆ ಬಿಡಿಎ 2010ರ ಫೆಬ್ರವರಿ ತಿಂಗಳಿನಲ್ಲಿ ಹಂಚಿಕೆ ಮಾಡಿತ್ತು. ಅದೇ ವರ್ಷ ಜುಲೈನಲ್ಲಿ ಹಂಚಿಕೆ ಪತ್ರ ಸಹ ನೀಡಿತ್ತು. ಆದರೆ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೂಲಕ ಹಾಲಿ ಶಾಸಕ ಎಂ ಚಂದ್ರಪ್ಪನವರು ಅದೇ ನಿವೇಶನವನ್ನು ತನ್ನ ಹೆಸರಿಗೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆಪಾದಿಸಿದ್ದಾರೆ.

ಚಂದ್ರಪ್ಪನವರು ಕುಮಾರಸ್ವಾಮಿ ಲೇಔಟ್‌ನಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ನಿವೇಶನಗಳನ್ನು ಬೇರೆಯವರಿಗೆ ಹಂಚಿಯಾಗಿತ್ತು. ಹಾಗಾಗಿ ಅವರು ಕೆಂಗೇರಿಯ ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನಾದರೂ ತಮ್ಮ ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ನಿಡುವಂತೆ ಚಂದ್ರಪ್ಪ ಯಡಿಯೂರಪ್ಪರವರ ಬಳಿ ಕೇಳಿದ್ದರು. ಆಗ ಯಡಿಯೂರಪ್ಪನವರು ಬಿಡಿಎ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು. ಆದರೆ ಬಿಡಿಎ ಅಧಿಕಾರಿಗಳು ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನು ಶಾಸಕರಿಗೆ ನೀಡಲು ಬರುವುದಿಲ್ಲ ಎಂದು ಸಭೆಯಲ್ಲಿ ತಿರಸ್ಕರಿಸಿದ್ದರು ಎಂದು ಶಿವಕುಮಾರ್ ತಿಳಿಸಿದರು.

ಆದರೆ ಯಡಿಯೂರಪ್ಪರವರ ಮೂಲಕ ಒತ್ತಡ ತಂದ ಶಾಸಕ ಚಂದ್ರಪ್ಪನವರು ಕೊನೆಗೂ 2011ರ ಫೆಬ್ರವರಿ ತಿಂಗಳಿನಲ್ಲಿ ಆ ನಿವೇಶನವನ್ನು ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ವರ್ಗಾಹಿಸಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಅಲ್ಲಿ ಕನ್ನಡ ಶಾಲೆ ಮತ್ತು ಸಮುದಾಯ ಭವನ ನಿರ್ಮಿಸಬೇಕೆಂಬ ಷರತ್ತಗಳನ್ನು ಉಲ್ಲಂಘಿಸಿ 11 ವರ್ಷ ಕಳೆದರೂ ಆ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2010 ರಲ್ಲಿ ಆ ನಿವೇಶನವನ್ನು 10 ಕೋಟಿ ರೂಗೆ ಶಾಸಕ ಚಂದ್ರಪ್ಪನವರಿಗೆ ಮಾರಲಾಗಿದೆ. ಅವರು 2022ರಲ್ಲಿ ಕೇವಲ 1 ಕೋಟಿ ರೂ ಮಾತ್ರ ಪಾವತಿಸಿದ್ದಾರೆ. ಆದರೆ ಆ ನಿವೇಶನದ ಮಾರುಕಟ್ಟೆ ಬೆಲೆ 38 ಕೋಟಿ ರೂ ಇದೆ. ಆದರೆ ಇಷ್ಟೆಲ್ಲಾ ಅಕ್ರಮ ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿ ಮತ್ತು ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್‌ರವರ ಚಕಾರ ಎತ್ತಿಲ್ಲ. ಕಾನೂನುಬಾಹಿರವಾಗಿ ಹಂಚಿಕೆಯಾಗಿರುವ ಈ ನಿವೇಶನವನ್ನು ರದ್ದುಪಡಿಸಬೇಕು ಎಂದು ಕಾನೂನ ಹೋರಾಟ ಮಾಡುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವರಿಗೆ ದೋಚುವುದು ಕಬಳಿಸುವುದು ಬಿಟ್ರೆ ಬೇರೇನೂ ಬರಲ್ಲ…..ಒಂದಾದ್ರು ಅಭಿವೃದ್ಧಿ ಕೆಲಸ ಕಾಣಿಸಿದ್ದಾರೆ ಇವರು ಶಾಸಕರಾಗಿ ಮಂತ್ರಿಗಳಾಗಿ ಏನ್ ಕಾಣ್ತಿದ್ದೀರಾ ಏನ್ ಅಭಿವೃದ್ಧಿಯಾಗಿದೆ ಜನರೆ ಹೇಳಬೇಕು …..ನ್ಯೂಸ್ ನೋಡಿ ಕಮೆಂಟ್ ಮಾಡುತ್ತೇವೆ ನಾವು ಅಷ್ಟೇ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....