HomeಮುಖಪುಟBBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

BBMP ಶಾಲೆ ನಿರ್ಮಾಣಕ್ಕೆ ಮಂಜೂರಾದ ಜಾಗ BJP ಶಾಸಕನ ಪಾಲು: ದಾಖಲೆ ಬಿಡುಗಡೆ

- Advertisement -
- Advertisement -

ಬೆಂಗಳೂರಿನಲ್ಲಿ BBMP ಶಾಲೆ ನಿರ್ಮಾಣಕ್ಕೆ 2010ರಲ್ಲಿ ಬಿಡಿಎ ವತಿಯಿಂದ ಮಂಜೂರಾದ ನಾಗರಿಕ ಸೌಕರ್ಯಗಳ ನಿವೇಶನವನ್ನು ಅಕ್ರಮವಾಗಿ ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ ಚಂದ್ರಪ್ಪನವರು ಕಬಳಿಸಿದ್ದಾರೆ ಎಂದು ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕೆಯ ಬಿ.ಎಂ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರಿನ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಕೆಂಗೇರಿಯ ಸರ್.ಎಂ ವಿಶ್ವೇಶ್ವರಯ್ಯ ಬಡವಣೆಯ 2ನೇ ಬ್ಲಾಕ್‌ನಲ್ಲಿರುವ 25,225 ಚ.ಅಡಿಯ ಸಿಎ ನಿವೇಶನವನ್ನು ಬಿಬಿಎಂಪಿ ಕನ್ನಡ ಶಾಲೆ ನಿರ್ಮಾಣಕ್ಕೆ ಬಿಡಿಎ 2010ರ ಫೆಬ್ರವರಿ ತಿಂಗಳಿನಲ್ಲಿ ಹಂಚಿಕೆ ಮಾಡಿತ್ತು. ಅದೇ ವರ್ಷ ಜುಲೈನಲ್ಲಿ ಹಂಚಿಕೆ ಪತ್ರ ಸಹ ನೀಡಿತ್ತು. ಆದರೆ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪನವರ ಮೂಲಕ ಹಾಲಿ ಶಾಸಕ ಎಂ ಚಂದ್ರಪ್ಪನವರು ಅದೇ ನಿವೇಶನವನ್ನು ತನ್ನ ಹೆಸರಿಗೆ ಮಂಜೂರು ಮಾಡಿಸಿಕೊಂಡಿದ್ದಾರೆ ಎಂದು ಆಪಾದಿಸಿದ್ದಾರೆ.

ಚಂದ್ರಪ್ಪನವರು ಕುಮಾರಸ್ವಾಮಿ ಲೇಔಟ್‌ನಲ್ಲಿ ನಿವೇಶನಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಅಲ್ಲಿ ನಿವೇಶನಗಳನ್ನು ಬೇರೆಯವರಿಗೆ ಹಂಚಿಯಾಗಿತ್ತು. ಹಾಗಾಗಿ ಅವರು ಕೆಂಗೇರಿಯ ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನಾದರೂ ತಮ್ಮ ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ನಿಡುವಂತೆ ಚಂದ್ರಪ್ಪ ಯಡಿಯೂರಪ್ಪರವರ ಬಳಿ ಕೇಳಿದ್ದರು. ಆಗ ಯಡಿಯೂರಪ್ಪನವರು ಬಿಡಿಎ ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದರು. ಆದರೆ ಬಿಡಿಎ ಅಧಿಕಾರಿಗಳು ಕನ್ನಡ ಶಾಲೆಗೆ ಮಂಜೂರಾದ ನಿವೇಶನವನ್ನು ಶಾಸಕರಿಗೆ ನೀಡಲು ಬರುವುದಿಲ್ಲ ಎಂದು ಸಭೆಯಲ್ಲಿ ತಿರಸ್ಕರಿಸಿದ್ದರು ಎಂದು ಶಿವಕುಮಾರ್ ತಿಳಿಸಿದರು.

ಆದರೆ ಯಡಿಯೂರಪ್ಪರವರ ಮೂಲಕ ಒತ್ತಡ ತಂದ ಶಾಸಕ ಚಂದ್ರಪ್ಪನವರು ಕೊನೆಗೂ 2011ರ ಫೆಬ್ರವರಿ ತಿಂಗಳಿನಲ್ಲಿ ಆ ನಿವೇಶನವನ್ನು ದೇವರಾಜು ಅರಸು ಶಿಕ್ಷಣ ಸಂಸ್ಥೆಗೆ ವರ್ಗಾಹಿಸಿಕೊಂಡಿದ್ದಾರೆ. ಎರಡು ವರ್ಷಗಳಲ್ಲಿ ಅಲ್ಲಿ ಕನ್ನಡ ಶಾಲೆ ಮತ್ತು ಸಮುದಾಯ ಭವನ ನಿರ್ಮಿಸಬೇಕೆಂಬ ಷರತ್ತಗಳನ್ನು ಉಲ್ಲಂಘಿಸಿ 11 ವರ್ಷ ಕಳೆದರೂ ಆ ನಿವೇಶನವನ್ನು ವಾಣಿಜ್ಯ ಉದ್ದೇಶಕ್ಕೆ ಬಳಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2010 ರಲ್ಲಿ ಆ ನಿವೇಶನವನ್ನು 10 ಕೋಟಿ ರೂಗೆ ಶಾಸಕ ಚಂದ್ರಪ್ಪನವರಿಗೆ ಮಾರಲಾಗಿದೆ. ಅವರು 2022ರಲ್ಲಿ ಕೇವಲ 1 ಕೋಟಿ ರೂ ಮಾತ್ರ ಪಾವತಿಸಿದ್ದಾರೆ. ಆದರೆ ಆ ನಿವೇಶನದ ಮಾರುಕಟ್ಟೆ ಬೆಲೆ 38 ಕೋಟಿ ರೂ ಇದೆ. ಆದರೆ ಇಷ್ಟೆಲ್ಲಾ ಅಕ್ರಮ ನಡೆಯುತ್ತಿದ್ದರೂ ಸಿಎಂ ಬೊಮ್ಮಾಯಿ ಮತ್ತು ಬಿಡಿಎ ಅಧ್ಯಕ್ಷ ಹಾಗೂ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್‌ರವರ ಚಕಾರ ಎತ್ತಿಲ್ಲ. ಕಾನೂನುಬಾಹಿರವಾಗಿ ಹಂಚಿಕೆಯಾಗಿರುವ ಈ ನಿವೇಶನವನ್ನು ರದ್ದುಪಡಿಸಬೇಕು ಎಂದು ಕಾನೂನ ಹೋರಾಟ ಮಾಡುವುದಾಗಿ ಶಿವಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ನಿಂದ ಮರಳಿದ ವೈದ್ಯ ವಿದ್ಯಾರ್ಥಿಗಳಿಗೆ ಭಾರತದಲ್ಲಿ ಸೀಟು ಕೊಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವರಿಗೆ ದೋಚುವುದು ಕಬಳಿಸುವುದು ಬಿಟ್ರೆ ಬೇರೇನೂ ಬರಲ್ಲ…..ಒಂದಾದ್ರು ಅಭಿವೃದ್ಧಿ ಕೆಲಸ ಕಾಣಿಸಿದ್ದಾರೆ ಇವರು ಶಾಸಕರಾಗಿ ಮಂತ್ರಿಗಳಾಗಿ ಏನ್ ಕಾಣ್ತಿದ್ದೀರಾ ಏನ್ ಅಭಿವೃದ್ಧಿಯಾಗಿದೆ ಜನರೆ ಹೇಳಬೇಕು …..ನ್ಯೂಸ್ ನೋಡಿ ಕಮೆಂಟ್ ಮಾಡುತ್ತೇವೆ ನಾವು ಅಷ್ಟೇ.

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...