Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...