Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...