Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...