Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...