Homeಕರ್ನಾಟಕರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ: ಪ್ರೋಟೊಕಾಲ್ ಪ್ರಶ್ನಿಸಿದ ನಗರಸಭಾ ಸದಸ್ಯನ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರಿಂದ ಹಲ್ಲೆ

ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿ ಶಂಕು ಸ್ಥಾಪನೆ ನೆರವೇರಿಸಿದ್ದನ್ನು ಪ್ರಶ್ನಿಸಿದ್ದ ನಗರಸಭಾ ಸದಸ್ಯ ಯೋಗೀಶ್.

- Advertisement -
- Advertisement -

ಪ್ರೋಟೊಕಾಲ್ ಉಲ್ಲಂಘಿಸಿ ರಸ್ತೆ ಕಾಮಗಾರಿ ಶಂಕುಸ್ಥಾಪನೆ ಮಾಡಿದ ಶಾಸಕರ ಕ್ರಮವನ್ನು ಪ್ರಶ್ನಿಸಿದ ನಗರಸಭಾ ಸದಸ್ಯರೊಬ್ಬರ ಮೇಲೆ ಬಿಜೆಪಿ ಶಾಸಕರ ಬೆಂಬಲಿಗರು ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.

ತಿಪಟೂರು ಶಾಸಕ ಬಿ.ಸಿ.ನಾಗೇಶ್ ಜುಲೈ 3 ರಂದು ಬೆಳಗ್ಗೆ 14 ನೇ ವಾರ್ಡ್ ವಿದ್ಯಾನಗರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದರು. ಆಗ ಸ್ಥಳಕ್ಕೆ ಬಂದ ಅದೇ ವಾರ್ಡಿನ  ನಗರಸಭಾ ಸದಸ್ಯ ಯೋಗೀಶ್ ಅವರು ಶಾಸಕರ ಕ್ರಮವನ್ನು ಪ್ರಶ್ನಿಸತೊಡಗಿದರು. ಮಾತಿಗೆ ಮಾತು ಬೆಳೆದು ಎರಡೂ ಕಡೆ ಕೈಕೈ ಮಿಲಾಯಿಸುವ ಹಂತಕ್ಕೆ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಮಟ್ಟದಿಂದ ಹಿಡಿದು ಎಲ್ಲಿಯೇ ಸರ್ಕಾರಿ ಕಾರ್ಯಕ್ರಮ, ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರೂ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ತಾಲೂಕು ಪಂಚಾಯಿ ಸದಸ್ಯರು, ನಗರಸಭಾ ಸದಸ್ಯರನ್ನು ಪ್ರೋಟೋಕಾಲ್ ಪ್ರಕಾರ ಸಮಾರಂಭಕ್ಕೆ ಆಹ್ವಾನಿಸುವುದು ಸತ್ ಸಂಪ್ರದಾಯ. ಹಿಂದಿನಿಂದಲೂ ಇದು ನಡೆದುಕೊಂಡು ಬಂದಿರುವ ಪದ್ದತಿ.

ಆದರೆ ಶಾಸಕ ಬಿ.ಸಿ.ನಾಗೇಶ್ ಅವರು ಪ್ರೋಟೋಕಾಲ್ ಉಲ್ಲಂಘಿಸಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದರು. ಇದನ್ನು ನಗರಸಭಾ ಸದಸ್ಯ ಯೋಗೀಶ್ ಪ್ರಶ್ನಿಸಿದರು. ಏನಣ್ಣಾ ನಾನು ಈ ವಾರ್ಡಿನ ಸದಸ್ಯ. ನನ್ನನ್ನು ಬಿಟ್ಟು ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನಡೆಸುತ್ತಿದ್ದೀರ. ಇದು ಸರಿಯಲ್ಲ ಎಂದು ಪ್ರಶ್ನಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ತಿಪಟೂರು ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ

ತಿಪಟೂರು ಬಿಜೆಪಿ ಶಾಸಕ ಬಿ.ಸಿ ನಾಗೇಶ್ ಬೆಂಬಲಿಗರಿಂದ ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೇಶ್ ಮೇಲೆ ಹಲ್ಲೆ. ತಿಪಟೂರಿನ ವಿದ್ಯಾನಗರದ ಕಾಂಕ್ರಿಟ್ ರಸ್ತೆ ಕಾಮಗಾರಿ ರಸ್ತೆ ಉದ್ಘಾಟನೆ ವೇಳೆ ಪ್ರೊಟೋಕಾಲ್ ಪ್ರಕಾರ ನಗರಸಭಾ ಸದಸ್ಯರನ್ನು ಏಕೆ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ವಾಗ್ದಾದ. ಮಾತಿಗೆ ಮಾತು ಬೆಳೆದು ಶಾಸಕರ ಬೆಂಬಲಿಗರಿಂದ ನಗರಸಭಾ ಸದಸ್ಯರ ಮೇಲೆ ಹಲ್ಲೆ

Posted by Naanu Gauri on Thursday, July 2, 2020

ವಿದ್ಯಾನಗರದ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆಗೆ ನಗರಸಭೆಯ ಅಧಿಕಾರಿಗಳನ್ನು ಶಾಸಕರು ಕರೆದಿಲ್ಲ. ಸ್ಥಳೀಯ ಸದಸ್ಯರನ್ನು ಆಹ್ವಾನಿಸಿಲ್ಲ. ಕೇವಲ ಬಿಜೆಪಿ ಸದಸ್ಯರೊಂದಿಗೆ ಆಗಮಿಸಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿರುವುದು ಕಾಂಗ್ರೆಸ್ ನಗರಸಭಾ ಸದಸ್ಯ ಯೋಗೀಶ್ ಅವರ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಯೋಗೀಶ್ ಶಾಸಕರನ್ನು ಪ್ರಶ್ನಿಸುತ್ತಿರುವ 1.35 ನಿಮಿಷದ ವಿಡಿಯೋವೊಂದನ್ನು ಬಿಡುಗಡೆ ಮಾಡಲಾಗಿದ್ದು ಅದರಲ್ಲಿ ಶಾಸಕರು ಮತ್ತು ಯೋಗೀಶ್ ನಡುವೆ ವಾಗ್ವಾದ ನಡೆಯುತ್ತದೆ. ಶಾಶಕರು ತಾನು ವಿಶೇಷ ಯೋಜನೆಯಡಿ ಅನುದಾನ ತಂದಿದ್ದೇನೆ. ನಿಮ್ಮನ್ನು ಆಹ್ವಾನಿಸುವ ಅಗತ್ಯವಿಲ್ಲ ಎಂದು ಹೇಳುತ್ತಾರೆ. ಆಗ ಯೋಗೀಶ್ ಕೂಡ ಇದು ಸರ್ಕಾರದ ಹಣ. ಪ್ರೋಟೋಕಾಲ್ ಉಲ್ಲಂಘಿಸಿದ್ದೀರಿ. ಎಂದು ಶಾಸಕರನ್ನು ಪ್ರಶ್ನಿಸುತ್ತಾರೆ. ಆಗ ಶಾಶಕರ ಇಬ್ಬರು ಬೆಂಬಲಿಗರು ನಗರಸಭಾ ಸದಸ್ಯ ಯೋಗೀಶ್ ಮೇಲೆ ಜೋರು ಮಾತುಗಳಲ್ಲಿ ಎರುಗುತ್ತಾರೆ. ಆನಂತರ ಗಲಾಟೆ ನಡೆಯುವುದು ಕೇಳುತ್ತದೆ.

ಶಾಸಕರೊಂದಿಗೆ ಬೆಂಬಲಿಗರಾದ ಗಂಗರಾಜು, ಪ್ರಶಾಂತ, ರಾಮಮೋಹನ್ ಮಾತ್ರ ಇರುವುದು ಯೋಗೀಶ ಅವರ ಬೇಸರಕ್ಕೆ ಕಾರಣವಾಗಿದೆ. ಈ ಸಂಬಂಧ ನಾನುಗೌರಿ.ಕಾಂ ಜೊತೆ ಮಾತನಾಡಿದ ನಗರಸಭಾ ಸದಸ್ಯ ಯೋಗೀಶ್ ಶಾಸಕರ ಕ್ರಮವನ್ನು ಪ್ರಶ್ನಿಸಿದರು. ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ಶಂಕುಸ್ಥಾಪನೆ ಕಾಮಗಾರಿ ಸರ್ಕಾರಿ ಕಾರ್ಯಕ್ರಮ. ಅಧಿಕಾರಿಗಳನ್ನು ಆಹ್ವಾನಿಸಿಲ್ಲ. ಸ್ಥಳೀಯ ವಾರ್ಡ್ ನ ಸದಸ್ಯನಾದ ನನ್ನನ್ನು ಆಹ್ವಾನಿಸಿಲ್ಲ. ಇದನ್ನು ಕೇಳಲು ಹೋದರೆ ಶಾಸಕರ ಬೆಂಬಲಿಗರು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ದೃಶ್ಯಗಳನ್ನು ಸೆರೆ ಹಿಡಿಯುತ್ತಿದ್ದ ಮೊಬೈಲ್ ಅನ್ನು ಒಡೆದು ಹಾಕಿದ್ದಾರೆ ಎಂದು ದೂರಿದರು.

ಶಾಸಕ ಬಿ.ಸಿ.ನಾಗೇಶ್ ಸರಳ, ಸಜ್ಜನ ಎಂದು ಹೇಳುತ್ತಾರೆ. ಉತ್ತಮ ಕೆಲಸ ಮಾಡಿದ್ದಾರೆ ಎಂಬ ಮಾತು ಇದೆ. ಆದರೆ ಶಾಸಕರಿಗಿಂತ ಚೆನ್ನಾಗಿ ಕೆಲಸ ಮಾಡುವವರನ್ನು ಕಂಡರೆ ಸಹಿಸುವುದಿಲ್ಲ. ಉತ್ತಮ ಕೆಲಸ ಮಾಡುವವರನ್ನು ಉದ್ದೇಶಪೂರ್ವಕವಾಗಿಯೇ ಶಾಸಕರು ದೂರ ಇಡುತ್ತಾ ಹೋಗುತ್ತಾರೆ. ಮೇಲ್ನೋಟಕ್ಕೆ ಒಳ್ಳೆಯವರಂತೆ ಕಂಡು ಬಂದರೂ ಕೊಬ್ಬರಿ ಬೆಲೆ ನಿಗದಿ ನಡೆಯುವುದೆಲ್ಲ ಅವರ ಮೂಗಿನ ಅಡಿಯೇ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಓದಿ: ಪಿಎಂ ಕೇರ್ಸ್‌ಗೆ 60,000 ಕೋಟಿ ಹರಿದುಬಂದಿದೆ, ಆದರೂ ಮೋದಿ ಲೆಕ್ಕ ಕೊಡುತ್ತಿಲ್ಲ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....