Homeಕರ್ನಾಟಕಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

- Advertisement -
- Advertisement -

ಮಳೆಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಭರ್ಜರಿ ತಯಾರಿ ಮಾಡಿಕೊಂಡಿದೆ. ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವೂ ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ವಾಗ್ದಾಳಿ ನಡೆಸಲು ಸಿದ್ಧವಾಗುತ್ತಿದೆ. ಇತ್ತ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿಯೂ ತಯಾರಾಗಿದೆ. ಹೀಗೆ ಸದನ ಸಮರಕ್ಕೆ ಸಿದ್ಧವಾಗುತ್ತಿರುವ ಬಿಜೆಪಿಗೆ ಸಣ್ಣ ಪ್ರಮಾಣದ ಕೋರಂ ಸಮಸ್ಯೆ ಎದುರಾಗಿದೆ.

ಆಡಳಿತ ಪಕ್ಷಕ್ಕೆ ಈ ಸಮಸ್ಯೆ ಎದುರಾಗಲು ಪ್ರಮುಖ ಕಾರಣ, ಇನ್ನೂ ಆಗದ ಸಂಪುಟ ವಿಸ್ತರಣೆ. ಇಂತದ್ದೊಂದು ವಿಚಾರವೀಗ ವಿಧಾನಸೌಧದ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಮಳೆಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಬಿಜೆಪಿಯ ಕೆಲ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನದ ಕಡೆ ಮುಖ ಮಾಡದೆ ಕುಳಿತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮರಳಿ ಸಚಿವರಾಗುವ ಆಸೆ ಹೊತ್ತಿದ್ದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಮಾಮನಿ, ರಾಜುಗೌಡ ನಾಯಕ್, ಎ.ರಾಮದಾಸ್ ಸೇರಿದಂತೆ ಅನೇಕರು ಸದನದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ 40% ಕಮಿಷನ್ ಆರೋಪ ಮತ್ತು ಆ ಹಿನ್ನೆಲೆಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕಾರಣ ವಿವಾದವುಂಟಾಗಿ ವಿಪಕ್ಷ ಮತ್ತು ಜನರ ಒತ್ತಡದ ಮೇಲೆ ರಾಜೀನಾಮೆ ನೀಡಿದ್ದರು. ಇದರ ಬಳಿಕ ತಮ್ಮ ಮೇಲಿನ ಆರೋಪ ತೊಳೆದುಕೊಂಡು ಮರಳಿ ಬಂದಿದ್ದು, ಅವರ ಆಗಮನದ ಹೊತ್ತಿನಲ್ಲೇ ಸಂಪುಟ ವಿಸ್ತರಣೆ ಮಾತು ಕೇಳಿ ಬಂದಿತ್ತು.

ಈ ಎಲ್ಲ ಲೆಕ್ಕಾಚಾರಗಳಿಂದ ಈಶ್ವರಪ್ಪ ಮರಳಿ ಸಂಪುಟ ಸೇರಬಹುದೆಂಬ ನಿರೀಕ್ಷೆ ಇತ್ತು. ಆದರೆ ಮಳೆಗಾಲ ಅಧಿವೇಶನ ಸೋಮವಾರ ಆರಂಭವಾದರೂ ಸಂಪುಟದ ವಿಚಾರ ಮುಂದಕ್ಕೆ ಹೋಗದೆ ಇರುವುದು ಈಶ್ವರಪ್ಪನವರಿಗೆ ಬೇಸರ ತರಿಸಿದ್ದು, ಈ ಕಾರಣದಿಂದ ಅವರು ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮತ್ತೋರ್ವ ಸಚಿವಾಕಾಂಕ್ಷಿ, ಆಪರೇಷನ್ ಕಮಲದ ರೂವಾರಿ ರಮೇಶ್ ಜಾರಕಿಹೊಳಿ, ಸದನದ ಕಡೆ ಮುಖಮಾಡಿದ್ದರ ಬಗ್ಗೆ ನೆನಪೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಭಾಗವಾಗಿದ್ದ ವೇಳೆ ‘ಸಿಡಿ’ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಳಿಕವಂತೂ ಅವರು ವಿಧಾನಸೌಧದವನ್ನೇ ಮರೆತಂತೆ ಕಾಣುತ್ತಿದೆ ಎನ್ನುವುದು ಕೆಲವರ ಮಾತು.

ಇದನ್ನೂ ಓದಿ:ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ! 

ಇವರೆಲ್ಲರ ನಡುವಲ್ಲಿ ಎಂ.ಪಿ. ರೇಣುಕಾಚಾರ್ಯ, ಲೆಕ್ಕಕ್ಕಿರಲಿ ಎನ್ನುವಂತೆ ಒಂದು ಬಾರಿ ಸದನಕ್ಕೆ ಬಂದು ಸಹಿಹಾಕಿ ಮತ್ತೆ ಕ್ಷೇತ್ರ ಸೇರಿಕೊಂಡಿದ್ದಾರೆ. ಇನ್ನುಳಿದಂತೆ ರಾಜೂಗೌಡ, ಆನಂದ್ ಮಾಮನಿ, ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ಎ. ರಾಮದಾಸ್ ಅವರು ಬೇರೆ ಬೇರೆ ಕಾರಣಗಳನ್ನು ನೀಡಿ ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿಗಳ ಹದಿಮೂರನೇ ದೆಹಲಿ ಪ್ರವಾಸದ ಬಳಿಕ, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ತಿಂಗಳ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗಬೇಕಿತ್ತು. ಆದರೆ ಆ ಕಾಲ ಕೂಡಿಬಾರದ ಹಿನ್ನೆಲೆಯಲ್ಲಿ ಪದೇ ಪದೇ ಈ ವಿಚಾರ ಮುಂದೂಡಿಕೆ ಆಗುತ್ತಲೇ ಬಂದಿದೆ. 2023ರ ಚುನಾವಣೆ ಗಮನದಲ್ಲಿಟ್ಟುಕೊಂಡ ಆಡಳಿತ ಪಕ್ಷ, ಕೆಲ ಹಿರಿಯರನ್ನು ಸಂಪುಟದಿಂದ ಕೈಬಿಟ್ಟು, ಸಂಘಟನೆ ಮತ್ತು ಪಕ್ಷ ಸಿದ್ದಾಂತ ಹಿನ್ನೆಲೆ ಹೊಂದಿದವರಿಗೆ ಅವಕಾಶ ಕೊಡಲು ನಿರ್ಧರಿಸಿತ್ತು.

ಸಂಪುಟ ವಿಸ್ತರಣೆ ಆಗಲೇಬೇಕೆನ್ನುವುದು ಬೊಮ್ಮಾಯಿಯವರ ಮಹದಾಸೆ. ತಮ್ಮ ಅವಧಿ ಪೂರ್ಣಗೊಳ್ಳುವುದರೊಳಗಾಗಿ ಪೂರ್ಣ ಸಂಪುಟದೊಂದಿಗೆ ಕರ್ತವ್ಯ ನಿರ್ವಹಿಸಬೆಕೆನ್ನುವುದು ಅವರ ಆಸೆ. ಆದರೆ ಇಲ್ಲಿಯವರೆಗೂ ದೆಹಲಿ ಪ್ರಮುಖರು ಇದಕ್ಕೆ ‘ಅಸ್ತು’ ಎನ್ನದಿರುವುದು ಸಚಿವಾಕಾಂಕ್ಷಿಗಳನ್ನು ಕಂಗೆಡುವಂತೆ ಮಾಡಿದೆ. ಇದಕ್ಕೆ ಮತ್ತೊಂದು ಮೂಲ ಕಾರಣವೂ ಇದೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನೂ ಒಳಗೊಂಡಂತೆ ಹಲವು ಸಚಿವರು ಹೆಚ್ಚುವರಿ ಖಾತೆಗಳನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಬಳಿಯೇ 8 ಖಾತೆ ಇದ್ದರೆ, ಡಾ ಸುಧಾಕರ್, ಅಶ್ವತ್ ನಾರಾಯಣ ಸೇರಿದಂತೆ ಇನ್ನು ಅನೇಕರಿಗೆ ಹೆಚ್ಚುವರಿ ಖಾತೆಗಳನ್ನು ನೀಡಲಾಗಿದೆ. ಇವೆಲ್ಲವೂ ಸಂಪುಟ ಸೇರಲು ಕಾದು ನಿಂತವರ ನಿದ್ದೆಗೆಡಿಸುವಂತೆ ಮಾಡಿದೆ.

ಇವೆಲ್ಲದರ ಜೊತೆಗೆ ಅಕಾಲಿಕವಾಗಿ ನಿಧನ ಹೊಂದಿದ ಸಚಿವ ಉಮೇಶ್ ಕತ್ತಿಯವರ ಖಾತೆಯನ್ನೂ ಒಳಗೊಂಡಂತೆ ಒಟ್ಟು 6 ಸ್ಥಾನಗಳು ಖಾಲಿ ಇವೆ. ಹೀಗಾಗಿ ಇಷ್ಟೆಲ್ಲ ಸ್ಥಾಗಳನ್ನು ಭರ್ತಿ ಮಾಡದೆ ಇಟ್ಟುಕೊಂಡು ಕಾಲಹರಣ ಮಾಡುತ್ತಿರುವುದೇಕೆ ಎನ್ನುವುದು ಮುನಿಸಿಕೊಂಡವರ ಅನಿಸಿಕೆಯಾಗಿರಬಹುದೆನ್ನುವ ಮಾತು ವಿಧಾನಸೌಧದಲ್ಲಿ ಕೇಳಿ ಬರುತ್ತಿದೆ. ಈ ಎಲ್ಲ ವಿಚಾರಗಳಿಂದ ಮನನೊಂದಿರುವ ಬಿಜೆಪಿಯ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನಕ್ಕೆ ಬರುವ ಮನಸ್ಸು ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...