Homeಕರ್ನಾಟಕಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

- Advertisement -
- Advertisement -

ಮಳೆಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಭರ್ಜರಿ ತಯಾರಿ ಮಾಡಿಕೊಂಡಿದೆ. ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವೂ ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ವಾಗ್ದಾಳಿ ನಡೆಸಲು ಸಿದ್ಧವಾಗುತ್ತಿದೆ. ಇತ್ತ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿಯೂ ತಯಾರಾಗಿದೆ. ಹೀಗೆ ಸದನ ಸಮರಕ್ಕೆ ಸಿದ್ಧವಾಗುತ್ತಿರುವ ಬಿಜೆಪಿಗೆ ಸಣ್ಣ ಪ್ರಮಾಣದ ಕೋರಂ ಸಮಸ್ಯೆ ಎದುರಾಗಿದೆ.

ಆಡಳಿತ ಪಕ್ಷಕ್ಕೆ ಈ ಸಮಸ್ಯೆ ಎದುರಾಗಲು ಪ್ರಮುಖ ಕಾರಣ, ಇನ್ನೂ ಆಗದ ಸಂಪುಟ ವಿಸ್ತರಣೆ. ಇಂತದ್ದೊಂದು ವಿಚಾರವೀಗ ವಿಧಾನಸೌಧದ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಮಳೆಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಬಿಜೆಪಿಯ ಕೆಲ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನದ ಕಡೆ ಮುಖ ಮಾಡದೆ ಕುಳಿತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮರಳಿ ಸಚಿವರಾಗುವ ಆಸೆ ಹೊತ್ತಿದ್ದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಮಾಮನಿ, ರಾಜುಗೌಡ ನಾಯಕ್, ಎ.ರಾಮದಾಸ್ ಸೇರಿದಂತೆ ಅನೇಕರು ಸದನದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ 40% ಕಮಿಷನ್ ಆರೋಪ ಮತ್ತು ಆ ಹಿನ್ನೆಲೆಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕಾರಣ ವಿವಾದವುಂಟಾಗಿ ವಿಪಕ್ಷ ಮತ್ತು ಜನರ ಒತ್ತಡದ ಮೇಲೆ ರಾಜೀನಾಮೆ ನೀಡಿದ್ದರು. ಇದರ ಬಳಿಕ ತಮ್ಮ ಮೇಲಿನ ಆರೋಪ ತೊಳೆದುಕೊಂಡು ಮರಳಿ ಬಂದಿದ್ದು, ಅವರ ಆಗಮನದ ಹೊತ್ತಿನಲ್ಲೇ ಸಂಪುಟ ವಿಸ್ತರಣೆ ಮಾತು ಕೇಳಿ ಬಂದಿತ್ತು.

ಈ ಎಲ್ಲ ಲೆಕ್ಕಾಚಾರಗಳಿಂದ ಈಶ್ವರಪ್ಪ ಮರಳಿ ಸಂಪುಟ ಸೇರಬಹುದೆಂಬ ನಿರೀಕ್ಷೆ ಇತ್ತು. ಆದರೆ ಮಳೆಗಾಲ ಅಧಿವೇಶನ ಸೋಮವಾರ ಆರಂಭವಾದರೂ ಸಂಪುಟದ ವಿಚಾರ ಮುಂದಕ್ಕೆ ಹೋಗದೆ ಇರುವುದು ಈಶ್ವರಪ್ಪನವರಿಗೆ ಬೇಸರ ತರಿಸಿದ್ದು, ಈ ಕಾರಣದಿಂದ ಅವರು ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮತ್ತೋರ್ವ ಸಚಿವಾಕಾಂಕ್ಷಿ, ಆಪರೇಷನ್ ಕಮಲದ ರೂವಾರಿ ರಮೇಶ್ ಜಾರಕಿಹೊಳಿ, ಸದನದ ಕಡೆ ಮುಖಮಾಡಿದ್ದರ ಬಗ್ಗೆ ನೆನಪೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಭಾಗವಾಗಿದ್ದ ವೇಳೆ ‘ಸಿಡಿ’ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಳಿಕವಂತೂ ಅವರು ವಿಧಾನಸೌಧದವನ್ನೇ ಮರೆತಂತೆ ಕಾಣುತ್ತಿದೆ ಎನ್ನುವುದು ಕೆಲವರ ಮಾತು.

ಇದನ್ನೂ ಓದಿ:ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ! 

ಇವರೆಲ್ಲರ ನಡುವಲ್ಲಿ ಎಂ.ಪಿ. ರೇಣುಕಾಚಾರ್ಯ, ಲೆಕ್ಕಕ್ಕಿರಲಿ ಎನ್ನುವಂತೆ ಒಂದು ಬಾರಿ ಸದನಕ್ಕೆ ಬಂದು ಸಹಿಹಾಕಿ ಮತ್ತೆ ಕ್ಷೇತ್ರ ಸೇರಿಕೊಂಡಿದ್ದಾರೆ. ಇನ್ನುಳಿದಂತೆ ರಾಜೂಗೌಡ, ಆನಂದ್ ಮಾಮನಿ, ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ಎ. ರಾಮದಾಸ್ ಅವರು ಬೇರೆ ಬೇರೆ ಕಾರಣಗಳನ್ನು ನೀಡಿ ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿಗಳ ಹದಿಮೂರನೇ ದೆಹಲಿ ಪ್ರವಾಸದ ಬಳಿಕ, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ತಿಂಗಳ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗಬೇಕಿತ್ತು. ಆದರೆ ಆ ಕಾಲ ಕೂಡಿಬಾರದ ಹಿನ್ನೆಲೆಯಲ್ಲಿ ಪದೇ ಪದೇ ಈ ವಿಚಾರ ಮುಂದೂಡಿಕೆ ಆಗುತ್ತಲೇ ಬಂದಿದೆ. 2023ರ ಚುನಾವಣೆ ಗಮನದಲ್ಲಿಟ್ಟುಕೊಂಡ ಆಡಳಿತ ಪಕ್ಷ, ಕೆಲ ಹಿರಿಯರನ್ನು ಸಂಪುಟದಿಂದ ಕೈಬಿಟ್ಟು, ಸಂಘಟನೆ ಮತ್ತು ಪಕ್ಷ ಸಿದ್ದಾಂತ ಹಿನ್ನೆಲೆ ಹೊಂದಿದವರಿಗೆ ಅವಕಾಶ ಕೊಡಲು ನಿರ್ಧರಿಸಿತ್ತು.

ಸಂಪುಟ ವಿಸ್ತರಣೆ ಆಗಲೇಬೇಕೆನ್ನುವುದು ಬೊಮ್ಮಾಯಿಯವರ ಮಹದಾಸೆ. ತಮ್ಮ ಅವಧಿ ಪೂರ್ಣಗೊಳ್ಳುವುದರೊಳಗಾಗಿ ಪೂರ್ಣ ಸಂಪುಟದೊಂದಿಗೆ ಕರ್ತವ್ಯ ನಿರ್ವಹಿಸಬೆಕೆನ್ನುವುದು ಅವರ ಆಸೆ. ಆದರೆ ಇಲ್ಲಿಯವರೆಗೂ ದೆಹಲಿ ಪ್ರಮುಖರು ಇದಕ್ಕೆ ‘ಅಸ್ತು’ ಎನ್ನದಿರುವುದು ಸಚಿವಾಕಾಂಕ್ಷಿಗಳನ್ನು ಕಂಗೆಡುವಂತೆ ಮಾಡಿದೆ. ಇದಕ್ಕೆ ಮತ್ತೊಂದು ಮೂಲ ಕಾರಣವೂ ಇದೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನೂ ಒಳಗೊಂಡಂತೆ ಹಲವು ಸಚಿವರು ಹೆಚ್ಚುವರಿ ಖಾತೆಗಳನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಬಳಿಯೇ 8 ಖಾತೆ ಇದ್ದರೆ, ಡಾ ಸುಧಾಕರ್, ಅಶ್ವತ್ ನಾರಾಯಣ ಸೇರಿದಂತೆ ಇನ್ನು ಅನೇಕರಿಗೆ ಹೆಚ್ಚುವರಿ ಖಾತೆಗಳನ್ನು ನೀಡಲಾಗಿದೆ. ಇವೆಲ್ಲವೂ ಸಂಪುಟ ಸೇರಲು ಕಾದು ನಿಂತವರ ನಿದ್ದೆಗೆಡಿಸುವಂತೆ ಮಾಡಿದೆ.

ಇವೆಲ್ಲದರ ಜೊತೆಗೆ ಅಕಾಲಿಕವಾಗಿ ನಿಧನ ಹೊಂದಿದ ಸಚಿವ ಉಮೇಶ್ ಕತ್ತಿಯವರ ಖಾತೆಯನ್ನೂ ಒಳಗೊಂಡಂತೆ ಒಟ್ಟು 6 ಸ್ಥಾನಗಳು ಖಾಲಿ ಇವೆ. ಹೀಗಾಗಿ ಇಷ್ಟೆಲ್ಲ ಸ್ಥಾಗಳನ್ನು ಭರ್ತಿ ಮಾಡದೆ ಇಟ್ಟುಕೊಂಡು ಕಾಲಹರಣ ಮಾಡುತ್ತಿರುವುದೇಕೆ ಎನ್ನುವುದು ಮುನಿಸಿಕೊಂಡವರ ಅನಿಸಿಕೆಯಾಗಿರಬಹುದೆನ್ನುವ ಮಾತು ವಿಧಾನಸೌಧದಲ್ಲಿ ಕೇಳಿ ಬರುತ್ತಿದೆ. ಈ ಎಲ್ಲ ವಿಚಾರಗಳಿಂದ ಮನನೊಂದಿರುವ ಬಿಜೆಪಿಯ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನಕ್ಕೆ ಬರುವ ಮನಸ್ಸು ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...