Homeಕರ್ನಾಟಕಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

ಸಚಿವ ಸ್ಥಾನ ಸಿಗದ ಕಾರಣ ಅಧಿವೇಶನಕ್ಕೆ ಬಾರದ ಬಿಜೆಪಿ ಶಾಸಕರು?

- Advertisement -
- Advertisement -

ಮಳೆಗಾಲದ ಅಧಿವೇಶನದಲ್ಲಿ ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷ ಭರ್ಜರಿ ತಯಾರಿ ಮಾಡಿಕೊಂಡಿದೆ. ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ವಿಚಾರವೂ ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ವಾಗ್ದಾಳಿ ನಡೆಸಲು ಸಿದ್ಧವಾಗುತ್ತಿದೆ. ಇತ್ತ ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಬಿಜೆಪಿಯೂ ತಯಾರಾಗಿದೆ. ಹೀಗೆ ಸದನ ಸಮರಕ್ಕೆ ಸಿದ್ಧವಾಗುತ್ತಿರುವ ಬಿಜೆಪಿಗೆ ಸಣ್ಣ ಪ್ರಮಾಣದ ಕೋರಂ ಸಮಸ್ಯೆ ಎದುರಾಗಿದೆ.

ಆಡಳಿತ ಪಕ್ಷಕ್ಕೆ ಈ ಸಮಸ್ಯೆ ಎದುರಾಗಲು ಪ್ರಮುಖ ಕಾರಣ, ಇನ್ನೂ ಆಗದ ಸಂಪುಟ ವಿಸ್ತರಣೆ. ಇಂತದ್ದೊಂದು ವಿಚಾರವೀಗ ವಿಧಾನಸೌಧದ ಪಡಸಾಲೆಯಲ್ಲಿ ಹರಿದಾಡುತ್ತಿದೆ. ಇದಕ್ಕೆ ಪೂರಕವೆನ್ನುವಂತೆ ಮಳೆಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಬಿಜೆಪಿಯ ಕೆಲ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನದ ಕಡೆ ಮುಖ ಮಾಡದೆ ಕುಳಿತಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮರಳಿ ಸಚಿವರಾಗುವ ಆಸೆ ಹೊತ್ತಿದ್ದ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ, ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ್ ಮಾಮನಿ, ರಾಜುಗೌಡ ನಾಯಕ್, ಎ.ರಾಮದಾಸ್ ಸೇರಿದಂತೆ ಅನೇಕರು ಸದನದಿಂದ ದೂರ ಉಳಿದಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಪ್ರಕರಣ| ತನಿಖೆ ನಡೆಸಿ ವರದಿ ಸಲ್ಲಿಸಲು ಲೋಕಾಯುಕ್ತಕ್ಕೆ ಕೋರ್ಟ್ ಸೂಚನೆ

ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ 40% ಕಮಿಷನ್ ಆರೋಪ ಮತ್ತು ಆ ಹಿನ್ನೆಲೆಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ಕಾರಣ ವಿವಾದವುಂಟಾಗಿ ವಿಪಕ್ಷ ಮತ್ತು ಜನರ ಒತ್ತಡದ ಮೇಲೆ ರಾಜೀನಾಮೆ ನೀಡಿದ್ದರು. ಇದರ ಬಳಿಕ ತಮ್ಮ ಮೇಲಿನ ಆರೋಪ ತೊಳೆದುಕೊಂಡು ಮರಳಿ ಬಂದಿದ್ದು, ಅವರ ಆಗಮನದ ಹೊತ್ತಿನಲ್ಲೇ ಸಂಪುಟ ವಿಸ್ತರಣೆ ಮಾತು ಕೇಳಿ ಬಂದಿತ್ತು.

ಈ ಎಲ್ಲ ಲೆಕ್ಕಾಚಾರಗಳಿಂದ ಈಶ್ವರಪ್ಪ ಮರಳಿ ಸಂಪುಟ ಸೇರಬಹುದೆಂಬ ನಿರೀಕ್ಷೆ ಇತ್ತು. ಆದರೆ ಮಳೆಗಾಲ ಅಧಿವೇಶನ ಸೋಮವಾರ ಆರಂಭವಾದರೂ ಸಂಪುಟದ ವಿಚಾರ ಮುಂದಕ್ಕೆ ಹೋಗದೆ ಇರುವುದು ಈಶ್ವರಪ್ಪನವರಿಗೆ ಬೇಸರ ತರಿಸಿದ್ದು, ಈ ಕಾರಣದಿಂದ ಅವರು ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮತ್ತೋರ್ವ ಸಚಿವಾಕಾಂಕ್ಷಿ, ಆಪರೇಷನ್ ಕಮಲದ ರೂವಾರಿ ರಮೇಶ್ ಜಾರಕಿಹೊಳಿ, ಸದನದ ಕಡೆ ಮುಖಮಾಡಿದ್ದರ ಬಗ್ಗೆ ನೆನಪೇ ಇಲ್ಲದಂತೆ ನಡೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಭಾಗವಾಗಿದ್ದ ವೇಳೆ ‘ಸಿಡಿ’ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿದ ಬಳಿಕವಂತೂ ಅವರು ವಿಧಾನಸೌಧದವನ್ನೇ ಮರೆತಂತೆ ಕಾಣುತ್ತಿದೆ ಎನ್ನುವುದು ಕೆಲವರ ಮಾತು.

ಇದನ್ನೂ ಓದಿ:ಉಡುಪಿ: ಹೆದ್ದಾರಿಯ ಅವ್ಯವಸ್ಥೆಯತ್ತ ಗಮನ ಸೆಳೆಯಲು ರಸ್ತೆ ಗುಂಡಿಯಲ್ಲೇ ಉರುಳುಸೇವೆ! 

ಇವರೆಲ್ಲರ ನಡುವಲ್ಲಿ ಎಂ.ಪಿ. ರೇಣುಕಾಚಾರ್ಯ, ಲೆಕ್ಕಕ್ಕಿರಲಿ ಎನ್ನುವಂತೆ ಒಂದು ಬಾರಿ ಸದನಕ್ಕೆ ಬಂದು ಸಹಿಹಾಕಿ ಮತ್ತೆ ಕ್ಷೇತ್ರ ಸೇರಿಕೊಂಡಿದ್ದಾರೆ. ಇನ್ನುಳಿದಂತೆ ರಾಜೂಗೌಡ, ಆನಂದ್ ಮಾಮನಿ, ತಿಪ್ಪಾರೆಡ್ಡಿ, ಕರುಣಾಕರ ರೆಡ್ಡಿ, ಎ. ರಾಮದಾಸ್ ಅವರು ಬೇರೆ ಬೇರೆ ಕಾರಣಗಳನ್ನು ನೀಡಿ ಸದನದಿಂದ ದೂರ ಉಳಿದಿದ್ದಾರೆ ಎನ್ನಲಾಗುತ್ತಿದೆ.

ಮುಖ್ಯಮಂತ್ರಿಗಳ ಹದಿಮೂರನೇ ದೆಹಲಿ ಪ್ರವಾಸದ ಬಳಿಕ, ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ತಿಂಗಳ ಆರಂಭದಲ್ಲಿ ಸಂಪುಟ ವಿಸ್ತರಣೆಯಾಗಬೇಕಿತ್ತು. ಆದರೆ ಆ ಕಾಲ ಕೂಡಿಬಾರದ ಹಿನ್ನೆಲೆಯಲ್ಲಿ ಪದೇ ಪದೇ ಈ ವಿಚಾರ ಮುಂದೂಡಿಕೆ ಆಗುತ್ತಲೇ ಬಂದಿದೆ. 2023ರ ಚುನಾವಣೆ ಗಮನದಲ್ಲಿಟ್ಟುಕೊಂಡ ಆಡಳಿತ ಪಕ್ಷ, ಕೆಲ ಹಿರಿಯರನ್ನು ಸಂಪುಟದಿಂದ ಕೈಬಿಟ್ಟು, ಸಂಘಟನೆ ಮತ್ತು ಪಕ್ಷ ಸಿದ್ದಾಂತ ಹಿನ್ನೆಲೆ ಹೊಂದಿದವರಿಗೆ ಅವಕಾಶ ಕೊಡಲು ನಿರ್ಧರಿಸಿತ್ತು.

ಸಂಪುಟ ವಿಸ್ತರಣೆ ಆಗಲೇಬೇಕೆನ್ನುವುದು ಬೊಮ್ಮಾಯಿಯವರ ಮಹದಾಸೆ. ತಮ್ಮ ಅವಧಿ ಪೂರ್ಣಗೊಳ್ಳುವುದರೊಳಗಾಗಿ ಪೂರ್ಣ ಸಂಪುಟದೊಂದಿಗೆ ಕರ್ತವ್ಯ ನಿರ್ವಹಿಸಬೆಕೆನ್ನುವುದು ಅವರ ಆಸೆ. ಆದರೆ ಇಲ್ಲಿಯವರೆಗೂ ದೆಹಲಿ ಪ್ರಮುಖರು ಇದಕ್ಕೆ ‘ಅಸ್ತು’ ಎನ್ನದಿರುವುದು ಸಚಿವಾಕಾಂಕ್ಷಿಗಳನ್ನು ಕಂಗೆಡುವಂತೆ ಮಾಡಿದೆ. ಇದಕ್ಕೆ ಮತ್ತೊಂದು ಮೂಲ ಕಾರಣವೂ ಇದೆ.

ಇದನ್ನೂ ಓದಿ: ಬೆಂಗಳೂರು: ಅಕ್ರಮ ಕಟ್ಟಡದ ಪಟ್ಟಿಯಲ್ಲಿ ವಿಪ್ರೊ, ಕೊಲಂಬಿಯಾ ಆಸ್ಪತ್ರೆ, ಪ್ರೆಸ್ಟೀಜ್‌ ಕಂಪೆನಿಗಳು; ಈ ವರೆಗೆ ಮುಟ್ಟದ ಬಿಬಿಎಂಪಿ

ಸದ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನೂ ಒಳಗೊಂಡಂತೆ ಹಲವು ಸಚಿವರು ಹೆಚ್ಚುವರಿ ಖಾತೆಗಳನ್ನು ಹೊಂದಿದ್ದಾರೆ. ಮುಖ್ಯಮಂತ್ರಿಗಳ ಬಳಿಯೇ 8 ಖಾತೆ ಇದ್ದರೆ, ಡಾ ಸುಧಾಕರ್, ಅಶ್ವತ್ ನಾರಾಯಣ ಸೇರಿದಂತೆ ಇನ್ನು ಅನೇಕರಿಗೆ ಹೆಚ್ಚುವರಿ ಖಾತೆಗಳನ್ನು ನೀಡಲಾಗಿದೆ. ಇವೆಲ್ಲವೂ ಸಂಪುಟ ಸೇರಲು ಕಾದು ನಿಂತವರ ನಿದ್ದೆಗೆಡಿಸುವಂತೆ ಮಾಡಿದೆ.

ಇವೆಲ್ಲದರ ಜೊತೆಗೆ ಅಕಾಲಿಕವಾಗಿ ನಿಧನ ಹೊಂದಿದ ಸಚಿವ ಉಮೇಶ್ ಕತ್ತಿಯವರ ಖಾತೆಯನ್ನೂ ಒಳಗೊಂಡಂತೆ ಒಟ್ಟು 6 ಸ್ಥಾನಗಳು ಖಾಲಿ ಇವೆ. ಹೀಗಾಗಿ ಇಷ್ಟೆಲ್ಲ ಸ್ಥಾಗಳನ್ನು ಭರ್ತಿ ಮಾಡದೆ ಇಟ್ಟುಕೊಂಡು ಕಾಲಹರಣ ಮಾಡುತ್ತಿರುವುದೇಕೆ ಎನ್ನುವುದು ಮುನಿಸಿಕೊಂಡವರ ಅನಿಸಿಕೆಯಾಗಿರಬಹುದೆನ್ನುವ ಮಾತು ವಿಧಾನಸೌಧದಲ್ಲಿ ಕೇಳಿ ಬರುತ್ತಿದೆ. ಈ ಎಲ್ಲ ವಿಚಾರಗಳಿಂದ ಮನನೊಂದಿರುವ ಬಿಜೆಪಿಯ ಹಿರಿಯ ಹಾಗೂ ಸಚಿವಾಕಾಂಕ್ಷಿ ಶಾಸಕರು ಸದನಕ್ಕೆ ಬರುವ ಮನಸ್ಸು ಮಾಡುತ್ತಿಲ್ಲ ಎನ್ನಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...