Homeಕರ್ನಾಟಕಕೊರೊನಾ ಇಲ್ಲದಿರುತ್ತಿದ್ದರೆ ಇಷ್ಟೊತ್ತಿಗಾಗಲೇ BJP ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು: ಕಾಂಗ್ರೆಸ್‌

ಕೊರೊನಾ ಇಲ್ಲದಿರುತ್ತಿದ್ದರೆ ಇಷ್ಟೊತ್ತಿಗಾಗಲೇ BJP ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು: ಕಾಂಗ್ರೆಸ್‌

- Advertisement -
- Advertisement -

ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ನಾಯಕತ್ವ ಬದಲಾವಣೆಯ ಚರ್ಚೆ ಭಾರಿ ಸದ್ದು ಮಾಡುತ್ತಿದ್ದು, ಆಡಳಿತರೂಢ ಪಕ್ಷದ ಶಾಸಕರು ಬಹಿಂಗವಾಗಿ ಕಚ್ಚಾಡುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಪಕ್ಷವು, ಕೊರೊನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು ಎಂದು ಶನಿವಾರ ವಾಗ್ದಾಳಿ ನಡೆಸಿದೆ.

ಇಂದು ತಮ್ಮ ಅಧೀಕೃತ ಟ್ವಿಟರ್‌ ಖಾತೆಯ ಮೂಲಕ ಟ್ವೀಟ್ ಮಾಡಿರುವ ಕಾಂಗ್ರೆಸ್‌, “ಕೊರೊನಾ ಇಲ್ಲದೆ ಇದ್ದರೆ ಇಷ್ಟು ಹೊತ್ತಿಗಾಗಲೇ ಬಿಜೆಪಿ ಶಾಸಕರು ರೆಸಾರ್ಟ್ ಸೇರಿರುತ್ತಿದ್ದರು! ಇಷ್ಟು ದಿನ ಕೊರೊನಾ ನಿರ್ವಹಣೆಗೆ ಹೊರಬರದೆ ಅಡಗಿದ್ದ ಬಿಜೆಪಿ ಸಚಿವ ಶಾಸಕರೆಲ್ಲ ಈಗ ಕುರ್ಚಿ ಕದನಕ್ಕಾಗಿ ದಿಡೀರ್ ಪ್ರತ್ಯಕ್ಷರಾಗಿದ್ದಾರೆ. ತನಗೆ ಸಿಕ್ಕ ಅಧಿಕಾರವಧಿಯಲ್ಲೆಲ್ಲ ಕುರ್ಚಿ ಕಾಳಗದಲ್ಲಿ ಮುಳುಗುವ ಬಿಜೆಪಿಯಿಂದ ಜನರ ರಕ್ಷಣೆ ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸಿಎಂ ಮತ್ತು ಅವರ ಪುತ್ರನ ಕಾಲು ಹಿಡಿದು ಸಿ.ಪಿ. ಯೋಗೇಶ್ವರ್‌‌ ಸಚಿವರಾಗಿದ್ದು: ರೇಣುಕಾಚಾರ್ಯ

ಅಲ್ಲದೆ ಪಕ್ಷವು ಕೊರೊನಾ ವ್ಯಾಕ್ಸೀನ್‌ ಬಗ್ಗೆ ಕೂಡಾ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳಿದೆ. ಕಂಪೆನಿಗಳಲ್ಲಿ ಲಸಿಕೆಗಳಿಗೆ ಆರ್ಡರ್ ಮಾಡಲಾಗಿದೆ ಎಂದು ಬಹಳ ಹಿಂದೆಯೇ ಹೇಳಿದ್ದ ಸಚಿವ ಸುಧಾಕರ್‌ ಹೇಳಿದ್ದರು. ಆರ್ಡರ್ ಮಾಡಿದ ಲಸಿಕೆಗಳು ಬಂದವೇ? ಗ್ಲೋಬಲ್ ಟೆಂಡರ್ ಕತೆ ಏನಾಯ್ತು? ಎಂದು ಪ್ರಶ್ನಿಸಿದೆ.

 

ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಗಳು ಸಿಗುತ್ತಿಲ್ಲ. ಆದರೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಹೊರಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಚಿತ್ರದೊಂದಿಗೆ ದುಬಾರಿ ಕೊರೊನಾ ಲಸಿಕೆಗಳ ಬಗ್ಗೆ ಜಾಹಿರಾತುಗಳನ್ನು ಪ್ರದರ್ಶಿಸಲಾಗುತ್ತಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, “ಬಿಜೆಪಿಗರು ಖಾಸಗಿ ಆಸ್ಪತ್ರೆಗಳ ಜೊತೆ ನಿಂತು ಪ್ರಚಾರ ನಡೆಸುತ್ತಿರುವುದನ್ನ ನೋಡಿದರೆ ಸರ್ಕಾರದ ಬದಲಿಗೆ ಖಾಸಗಿ ಅಸ್ಪತ್ರೆಗಳ ಪರವಾಗಿ ಆರ್ಡರ್ ಮಾಡಿದೆ ಎನಿಸುತ್ತದೆ” ಎಂದು ಹೇಳಿದೆ.

ರಾಜ್ಯದ ನಾಯಕತ್ವ ಬದಲಾವಣೆಗೆ ಹಿಂದಿನಿಂದಲೆ ಬಿಜೆಪಿಯ ಕೆಲವು ನಾಯಕರು ಪ್ರಯತ್ನಿಸುತ್ತಲೆ ಇದ್ದಾರೆ. ಇದೀಗ ಕೊರೊನಾ ವೈಫಲ್ಯದ ನೆಪವನ್ನು ಹೇಳಿ ಮುಖ್ಯಮಂತ್ರಿಯ ಬದಲಾವಣೆ ಮಾಡಬೇಕು ಎಂದು ಹೈಕಮಾಂಡ್‌ಗೆ ಒತ್ತಡ ಹೇರಲಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿಯ ಆಂತರಿಕ ಅಸಮಾಧಾನ ಸ್ಪೋಟಗೊಂಡಿದ್ದು, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಮತ್ತು ಸಚಿವ ಸಿಪಿ ಯೋಗೀಶ್ವರ್‌ ಬಹಿರಂಗವಾಗಿಯೆ ಕಚ್ಚಾಡಿದ್ದರು.

ಇದನ್ನೂ ಓದಿ: ಹೊಸ ಯೋಜನೆಯಡಿ ಉಚಿತ ‘ಸ್ಯಾನಿಟರಿ ಪ್ಯಾಡ್‌‌’ ಒದಗಿಸಲಿರುವ ಪಂಜಾಬ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...