Homeಮುಖಪುಟಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ - ಸೇಡು!

ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ – ಸೇಡು!

- Advertisement -
- Advertisement -

ಬಿಜೆಪಿ ಎಂಎಲ್‌ಸಿ ಧನಂಜಯ್ ಸರ್ಜಿ ಹೆಸರಿನಲ್ಲಿ ಮೂವರಿಗೆ ಹೊಸ ವರ್ಷದ ಉಡುಗೊರೆಯಾಗಿ ‘ಕಲುಷಿತ’ ಸಿಹಿತಿಂಡಿಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಶಿವಮೊಗ್ಗದ 26 ವರ್ಷದ ವಕೀಲರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ನಿವಾಸಿ ಸೌಹರ್ದ್ ಪಟೇಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ತನ್ನ ಓದಿನ ಸಮಯದಲ್ಲಿ ಸಹ ವಿದ್ಯಾರ್ಥಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿ, ಖಿನ್ನತೆಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು, ನ್ಯಾಷನಲ್ ಎಜುಕೇಶನ್ ಸೊಸೈಟಿ (ಎನ್‌ಇಎಸ್)ಯ ಕಾರ್ಯದರ್ಶಿ ಎಸ್‌.ಎನ್. ನಾಗರಾಜ್ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಸಿಹಿತಿಂಡಿಗಳನ್ನು ಆರೋಪಿ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿ ಎಂಎಲ್‌ಸಿ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ಸಿಹಿತಿಂಡಿಗಳನ್ನು ಜನವರಿ 1 ರಂದು ಡಿಟಿಡಿಸಿ ಕೊರಿಯರ್‌ನಲ್ಲಿ ಕಳುಹಿಸಲಾಗಿದೆ ಎಂದು ವೆರದಿಯಾಗಿದೆ. ನಾಗರಾಜ್ ಅವರು ಪಡೆದ ಸಿಹಿತಿಂಡಿಯಲ್ಲಿ ತೀವ್ರ ಕಹಿ ಕಂಡುಬಂದಿದ್ದು, ಕಲಬೆರಕೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ವೇಳೆ ಗಾಬರಿಗೊಂಡ ಅವರು ಸರ್ಜಿ ಅವರನ್ನು ಸಂಪರ್ಕಿಸಿದ್ದರು. ಆಗ ಸರ್ಜಿ ಅವರು ಸಿಹಿ ತಿಂಡಿ ಪ್ಯಾಕೇಜ್ ಕಳುಹಿಸಿದ್ದನ್ನು ನಿರಾಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೇ ರೀತಿಯ ಪೆಟ್ಟಿಗೆಗಳನ್ನು ಭದ್ರಾವತಿಯ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಕಂಡುಹಿಡಿದಿದ್ದರು. ಇಬ್ಬರು ವೈದ್ಯರಾದ ಅರವಿಂದ್ ಮತ್ತು ಕೆ.ಎಸ್. ಪವಿತ್ರಾ ಆರೋಪಿ ಪಟೇಲ್‌ನ ಖಿನ್ನತೆಗೆ ಚಿಕಿತ್ಸೆ ನೀಡಿದ್ದರು.

ಪೊಲೀಸರು ಡಿಟಿಡಿಸಿ ಪ್ಯಾಕೇಜ್‌ಗಳನ್ನು ಟ್ರ್ಯಾಕ್ ಮಾಡಿದ್ದು, ಅವುಗಳನ್ನು ಕಳುಹಿಸಿದ್ದು ಪಟೇಲ್ ಎಂದು ಪತ್ತೆ ಮಾಡಿದ್ದರು. ಇದರ ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಈ ವೇಳೆ ಆರೋಪಿ ತಾನು ಸಿಹಿತಿಂಡಿಗಳನ್ನು ಕಳುಹಿಸಿರುವುದಾಗಿ ಅವರು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಆರೋಪಿ ಪಟೇಲ್, ತಮ್ಮ ಗೆಳತಿಯೊಂದಿಗೆ ಸಂಬಂಧ ಮುರಿದುಬಿದ್ದ ನಂತರ ಡಾ.ಪವಿತ್ರರಿಂದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾಗಿ ಹೇಳಿದ್ದಾರೆ. ಅವರು ಉಲ್ಲೇಖಿಸಿರುವ ಪ್ರೇಮಕಥೆ ಎರಡು ವರ್ಷಗಳಷ್ಟು ಹಳೆಯದಾಗಿರುವ ಕಾರಣ ನಾವು ಅವರ ಪ್ರತಿಪಾದನೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಟೇಲ್ ಓದುತ್ತಿದ್ದಾಗ ವೈದ್ಯರೊಬ್ಬರ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಈ ವೇಳೆ ವಿಷಯ ತಿಳಿದ ನಾಗರಾಜ್ ದೂರ ಇರುವಂತೆ ತಾಕೀತು ಮಾಡಿದ್ದರು. ಇದರ ನಂತರ ಅವರ ನಡುವಿನ ಸಂಬಂಧ ಮುರಿದುಬಿದ್ದಿತ್ತು. ಈ ವೇಳೆ ಪಟೇಲ್ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಮತ್ತು ಡಾ.ಪವಿತ್ರ ಅವರಿಗೆ ಕೆಲವು ಮಾತ್ರೆಗಳನ್ನು ನೀಡಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಪಟೇಲ್‌ಗೆ ತನ್ನನ್ನು ರೋಗಿಯೆಂದು ಪರಿಗಣಿಸಲಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದ್ದಾರೆ”ಎಂದು ಅಧಿಕಾರಿ ಹೇಳಿದ್ದಾರೆ.

“ಕಾರ್ಯಕ್ರಮವೊಂದರಲ್ಲಿ ಸರ್ಜಿ ಮತ್ತು ನಾಗರಾಜ್ ಅವರನ್ನು ಒಟ್ಟಿಗೆ ನೋಡಿದ ನಂತರ ಅವರು ಒಂದು ಯೋಜನೆಯನ್ನು ರೂಪಿಸಿದ್ದರು. ಅವರು ಕೆಲವು ಔಷಧಿಗಳನ್ನು ಬಳಸಿಕೊಂಡು ಸಿಹಿತಿಂಡಿಗಳನ್ನು ಹಾಳುಮಾಡಿ, ಮೂವರಿಗೆ ಕೊರಿಯರ್ ಮೂಲಕ ಅವುಗಳನ್ನು ಕಳುಹಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಕೋಟೆ ಪೊಲೀಸರು ಪಟೇಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂಓದಿ:  ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...