Homeಮುಖಪುಟಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ - ಸೇಡು!

ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ – ಸೇಡು!

- Advertisement -
- Advertisement -

ಬಿಜೆಪಿ ಎಂಎಲ್‌ಸಿ ಧನಂಜಯ್ ಸರ್ಜಿ ಹೆಸರಿನಲ್ಲಿ ಮೂವರಿಗೆ ಹೊಸ ವರ್ಷದ ಉಡುಗೊರೆಯಾಗಿ ‘ಕಲುಷಿತ’ ಸಿಹಿತಿಂಡಿಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಶಿವಮೊಗ್ಗದ 26 ವರ್ಷದ ವಕೀಲರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ನಿವಾಸಿ ಸೌಹರ್ದ್ ಪಟೇಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ತನ್ನ ಓದಿನ ಸಮಯದಲ್ಲಿ ಸಹ ವಿದ್ಯಾರ್ಥಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿ, ಖಿನ್ನತೆಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು, ನ್ಯಾಷನಲ್ ಎಜುಕೇಶನ್ ಸೊಸೈಟಿ (ಎನ್‌ಇಎಸ್)ಯ ಕಾರ್ಯದರ್ಶಿ ಎಸ್‌.ಎನ್. ನಾಗರಾಜ್ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಸಿಹಿತಿಂಡಿಗಳನ್ನು ಆರೋಪಿ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿ ಎಂಎಲ್‌ಸಿ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ಸಿಹಿತಿಂಡಿಗಳನ್ನು ಜನವರಿ 1 ರಂದು ಡಿಟಿಡಿಸಿ ಕೊರಿಯರ್‌ನಲ್ಲಿ ಕಳುಹಿಸಲಾಗಿದೆ ಎಂದು ವೆರದಿಯಾಗಿದೆ. ನಾಗರಾಜ್ ಅವರು ಪಡೆದ ಸಿಹಿತಿಂಡಿಯಲ್ಲಿ ತೀವ್ರ ಕಹಿ ಕಂಡುಬಂದಿದ್ದು, ಕಲಬೆರಕೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ವೇಳೆ ಗಾಬರಿಗೊಂಡ ಅವರು ಸರ್ಜಿ ಅವರನ್ನು ಸಂಪರ್ಕಿಸಿದ್ದರು. ಆಗ ಸರ್ಜಿ ಅವರು ಸಿಹಿ ತಿಂಡಿ ಪ್ಯಾಕೇಜ್ ಕಳುಹಿಸಿದ್ದನ್ನು ನಿರಾಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೇ ರೀತಿಯ ಪೆಟ್ಟಿಗೆಗಳನ್ನು ಭದ್ರಾವತಿಯ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಕಂಡುಹಿಡಿದಿದ್ದರು. ಇಬ್ಬರು ವೈದ್ಯರಾದ ಅರವಿಂದ್ ಮತ್ತು ಕೆ.ಎಸ್. ಪವಿತ್ರಾ ಆರೋಪಿ ಪಟೇಲ್‌ನ ಖಿನ್ನತೆಗೆ ಚಿಕಿತ್ಸೆ ನೀಡಿದ್ದರು.

ಪೊಲೀಸರು ಡಿಟಿಡಿಸಿ ಪ್ಯಾಕೇಜ್‌ಗಳನ್ನು ಟ್ರ್ಯಾಕ್ ಮಾಡಿದ್ದು, ಅವುಗಳನ್ನು ಕಳುಹಿಸಿದ್ದು ಪಟೇಲ್ ಎಂದು ಪತ್ತೆ ಮಾಡಿದ್ದರು. ಇದರ ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಈ ವೇಳೆ ಆರೋಪಿ ತಾನು ಸಿಹಿತಿಂಡಿಗಳನ್ನು ಕಳುಹಿಸಿರುವುದಾಗಿ ಅವರು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಆರೋಪಿ ಪಟೇಲ್, ತಮ್ಮ ಗೆಳತಿಯೊಂದಿಗೆ ಸಂಬಂಧ ಮುರಿದುಬಿದ್ದ ನಂತರ ಡಾ.ಪವಿತ್ರರಿಂದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾಗಿ ಹೇಳಿದ್ದಾರೆ. ಅವರು ಉಲ್ಲೇಖಿಸಿರುವ ಪ್ರೇಮಕಥೆ ಎರಡು ವರ್ಷಗಳಷ್ಟು ಹಳೆಯದಾಗಿರುವ ಕಾರಣ ನಾವು ಅವರ ಪ್ರತಿಪಾದನೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಟೇಲ್ ಓದುತ್ತಿದ್ದಾಗ ವೈದ್ಯರೊಬ್ಬರ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಈ ವೇಳೆ ವಿಷಯ ತಿಳಿದ ನಾಗರಾಜ್ ದೂರ ಇರುವಂತೆ ತಾಕೀತು ಮಾಡಿದ್ದರು. ಇದರ ನಂತರ ಅವರ ನಡುವಿನ ಸಂಬಂಧ ಮುರಿದುಬಿದ್ದಿತ್ತು. ಈ ವೇಳೆ ಪಟೇಲ್ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಮತ್ತು ಡಾ.ಪವಿತ್ರ ಅವರಿಗೆ ಕೆಲವು ಮಾತ್ರೆಗಳನ್ನು ನೀಡಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಪಟೇಲ್‌ಗೆ ತನ್ನನ್ನು ರೋಗಿಯೆಂದು ಪರಿಗಣಿಸಲಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದ್ದಾರೆ”ಎಂದು ಅಧಿಕಾರಿ ಹೇಳಿದ್ದಾರೆ.

“ಕಾರ್ಯಕ್ರಮವೊಂದರಲ್ಲಿ ಸರ್ಜಿ ಮತ್ತು ನಾಗರಾಜ್ ಅವರನ್ನು ಒಟ್ಟಿಗೆ ನೋಡಿದ ನಂತರ ಅವರು ಒಂದು ಯೋಜನೆಯನ್ನು ರೂಪಿಸಿದ್ದರು. ಅವರು ಕೆಲವು ಔಷಧಿಗಳನ್ನು ಬಳಸಿಕೊಂಡು ಸಿಹಿತಿಂಡಿಗಳನ್ನು ಹಾಳುಮಾಡಿ, ಮೂವರಿಗೆ ಕೊರಿಯರ್ ಮೂಲಕ ಅವುಗಳನ್ನು ಕಳುಹಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಕೋಟೆ ಪೊಲೀಸರು ಪಟೇಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂಓದಿ:  ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...