Homeಮುಖಪುಟಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ - ಸೇಡು!

ಬಿಜೆಪಿ ಎಂಎಲ್‌ಸಿ ಹೆಸರಿನಲ್ಲಿ ಕಲಬೆರಕೆ ಸಿಹಿತಿಂಡಿ ಪಾರ್ಸೆಲ್ ಮಾಡಿದ ವಕೀಲ – ಸೇಡು!

- Advertisement -
- Advertisement -

ಬಿಜೆಪಿ ಎಂಎಲ್‌ಸಿ ಧನಂಜಯ್ ಸರ್ಜಿ ಹೆಸರಿನಲ್ಲಿ ಮೂವರಿಗೆ ಹೊಸ ವರ್ಷದ ಉಡುಗೊರೆಯಾಗಿ ‘ಕಲುಷಿತ’ ಸಿಹಿತಿಂಡಿಗಳನ್ನು ಕಳುಹಿಸಿದ್ದ ಆರೋಪದ ಮೇಲೆ ಶಿವಮೊಗ್ಗದ 26 ವರ್ಷದ ವಕೀಲರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಆರೋಪಿಯನ್ನು ಶಿವಮೊಗ್ಗ ನಿವಾಸಿ ಸೌಹರ್ದ್ ಪಟೇಲ್ ಎಂದು ಪೊಲೀಸರು ಗುರುತಿಸಿದ್ದಾರೆ.

ತನ್ನ ಓದಿನ ಸಮಯದಲ್ಲಿ ಸಹ ವಿದ್ಯಾರ್ಥಿಯೊಂದಿಗಿನ ಸಂಬಂಧವನ್ನು ಕೊನೆಗೊಳಿಸಿ, ಖಿನ್ನತೆಗೆ ಚಿಕಿತ್ಸೆ ನೀಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು, ನ್ಯಾಷನಲ್ ಎಜುಕೇಶನ್ ಸೊಸೈಟಿ (ಎನ್‌ಇಎಸ್)ಯ ಕಾರ್ಯದರ್ಶಿ ಎಸ್‌.ಎನ್. ನಾಗರಾಜ್ ಮತ್ತು ಇಬ್ಬರು ವೈದ್ಯರಿಗೆ ಕಲಬೆರಕೆ ಸಿಹಿತಿಂಡಿಗಳನ್ನು ಆರೋಪಿ ಕಳುಹಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಿಜೆಪಿ ಎಂಎಲ್‌ಸಿ ಸರ್ಜಿ ಅವರ ಹೆಸರಿನಲ್ಲಿ ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ಸಿಹಿತಿಂಡಿಗಳನ್ನು ಜನವರಿ 1 ರಂದು ಡಿಟಿಡಿಸಿ ಕೊರಿಯರ್‌ನಲ್ಲಿ ಕಳುಹಿಸಲಾಗಿದೆ ಎಂದು ವೆರದಿಯಾಗಿದೆ. ನಾಗರಾಜ್ ಅವರು ಪಡೆದ ಸಿಹಿತಿಂಡಿಯಲ್ಲಿ ತೀವ್ರ ಕಹಿ ಕಂಡುಬಂದಿದ್ದು, ಕಲಬೆರಕೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ವೇಳೆ ಗಾಬರಿಗೊಂಡ ಅವರು ಸರ್ಜಿ ಅವರನ್ನು ಸಂಪರ್ಕಿಸಿದ್ದರು. ಆಗ ಸರ್ಜಿ ಅವರು ಸಿಹಿ ತಿಂಡಿ ಪ್ಯಾಕೇಜ್ ಕಳುಹಿಸಿದ್ದನ್ನು ನಿರಾಕರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇದರ ನಂತರ ಸರ್ಜಿ ಅವರ ಆಪ್ತ ಕಾರ್ಯದರ್ಶಿ ಸಚಿನ್ ರಾಜ್ ಅವರು ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೇ ರೀತಿಯ ಪೆಟ್ಟಿಗೆಗಳನ್ನು ಭದ್ರಾವತಿಯ ಇಬ್ಬರು ವೈದ್ಯರಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಕಂಡುಹಿಡಿದಿದ್ದರು. ಇಬ್ಬರು ವೈದ್ಯರಾದ ಅರವಿಂದ್ ಮತ್ತು ಕೆ.ಎಸ್. ಪವಿತ್ರಾ ಆರೋಪಿ ಪಟೇಲ್‌ನ ಖಿನ್ನತೆಗೆ ಚಿಕಿತ್ಸೆ ನೀಡಿದ್ದರು.

ಪೊಲೀಸರು ಡಿಟಿಡಿಸಿ ಪ್ಯಾಕೇಜ್‌ಗಳನ್ನು ಟ್ರ್ಯಾಕ್ ಮಾಡಿದ್ದು, ಅವುಗಳನ್ನು ಕಳುಹಿಸಿದ್ದು ಪಟೇಲ್ ಎಂದು ಪತ್ತೆ ಮಾಡಿದ್ದರು. ಇದರ ನಂತರ ಪೊಲೀಸರು ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದು, ಈ ವೇಳೆ ಆರೋಪಿ ತಾನು ಸಿಹಿತಿಂಡಿಗಳನ್ನು ಕಳುಹಿಸಿರುವುದಾಗಿ ಅವರು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

“ವಿಚಾರಣೆ ವೇಳೆ ಆರೋಪಿ ಪಟೇಲ್, ತಮ್ಮ ಗೆಳತಿಯೊಂದಿಗೆ ಸಂಬಂಧ ಮುರಿದುಬಿದ್ದ ನಂತರ ಡಾ.ಪವಿತ್ರರಿಂದ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದಾಗಿ ಹೇಳಿದ್ದಾರೆ. ಅವರು ಉಲ್ಲೇಖಿಸಿರುವ ಪ್ರೇಮಕಥೆ ಎರಡು ವರ್ಷಗಳಷ್ಟು ಹಳೆಯದಾಗಿರುವ ಕಾರಣ ನಾವು ಅವರ ಪ್ರತಿಪಾದನೆಗಳನ್ನು ಪರಿಶೀಲಿಸುತ್ತಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಪಟೇಲ್ ಓದುತ್ತಿದ್ದಾಗ ವೈದ್ಯರೊಬ್ಬರ ಮಗಳೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು. ಈ ವೇಳೆ ವಿಷಯ ತಿಳಿದ ನಾಗರಾಜ್ ದೂರ ಇರುವಂತೆ ತಾಕೀತು ಮಾಡಿದ್ದರು. ಇದರ ನಂತರ ಅವರ ನಡುವಿನ ಸಂಬಂಧ ಮುರಿದುಬಿದ್ದಿತ್ತು. ಈ ವೇಳೆ ಪಟೇಲ್ ಅವರು ತೀವ್ರ ಖಿನ್ನತೆಗೆ ಒಳಗಾಗಿದ್ದರು ಮತ್ತು ಡಾ.ಪವಿತ್ರ ಅವರಿಗೆ ಕೆಲವು ಮಾತ್ರೆಗಳನ್ನು ನೀಡಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಪಟೇಲ್‌ಗೆ ತನ್ನನ್ನು ರೋಗಿಯೆಂದು ಪರಿಗಣಿಸಲಾಗಿದೆ ಎಂದು ಅತೃಪ್ತಿ ವ್ಯಕ್ತಪಡಿಸಿದ್ದಾರೆ”ಎಂದು ಅಧಿಕಾರಿ ಹೇಳಿದ್ದಾರೆ.

“ಕಾರ್ಯಕ್ರಮವೊಂದರಲ್ಲಿ ಸರ್ಜಿ ಮತ್ತು ನಾಗರಾಜ್ ಅವರನ್ನು ಒಟ್ಟಿಗೆ ನೋಡಿದ ನಂತರ ಅವರು ಒಂದು ಯೋಜನೆಯನ್ನು ರೂಪಿಸಿದ್ದರು. ಅವರು ಕೆಲವು ಔಷಧಿಗಳನ್ನು ಬಳಸಿಕೊಂಡು ಸಿಹಿತಿಂಡಿಗಳನ್ನು ಹಾಳುಮಾಡಿ, ಮೂವರಿಗೆ ಕೊರಿಯರ್ ಮೂಲಕ ಅವುಗಳನ್ನು ಕಳುಹಿಸಿದ್ದಾರೆ” ಎಂದು ಅಧಿಕಾರಿ ಹೇಳಿದ್ದಾರೆ. ಕೋಟೆ ಪೊಲೀಸರು ಪಟೇಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರಸ್ ವರದಿ ಮಾಡಿದೆ.

ಇದನ್ನೂಓದಿ:  ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ನಾಯಕ ರಮೇಶ್‌ ಬಿಧುರಿ ಮನೆ ಮುಂದೆ ‘ಮಹಿಳಾ ವಿರೋಧಿ’ ಎಂದು ಬರೆದ ಕಾಂಗ್ರೆಸ್‌ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...

‘ಆಳವಾದ ಅಪನಂಬಿಕೆ ರಾತ್ರೋರಾತ್ರಿ ಬಗೆಹರಿಯುವುದಿಲ್ಲ..’; ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ ಭರವಸೆ ವ್ಯಕ್ತಪಡಿಸಿದ ಜೆಡಿ ವ್ಯಾನ್ಸ್

ಅಮೆರಿಕ ಮತ್ತು ಇರಾನ್ ನಡುವೆ ಸಾಕಷ್ಟು ಅಪನಂಬಿಕೆ ಇದೆ, ಅದನ್ನು ರಾತ್ರೋರಾತ್ರಿ ಪರಿಹರಿಸಲು ಸಾಧ್ಯವಿಲ್ಲ ಎಂದು ಟೆಹ್ರಾನ್ ಜೊತೆಗಿನ ಕದನ ವಿರಾಮ ಮಾತುಕತೆಗಳ ಕುರಿತು ನಿಯೋಗದ ನೇತೃತ್ವ ವಹಿಸಿದ್ದ ಉಪಾಧ್ಯಕ್ಷ ಜೆಡಿ ವ್ಯಾನ್ಸ್...

ನ್ಯಾ. ಶರ್ಮಾ ಪೀಠದ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ ವಿಡಿಯೋಗಳನ್ನು ತೆಗೆದುಹಾಕುವಂತೆ ಪೊಲೀಸರಿಗೆ ಸೂಚಿಸಿದ ದೆಹಲಿ ಹೈಕೋರ್ಟ್-ವರದಿ

ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಮುಂದೆ ಅರವಿಂದ್ ಕೇಜ್ರಿವಾಲ್ ವಾದಿಸಿದ್ದಕ್ಕೆ ಸಂಬಂಧಿಸಿದ ಅನಧಿಕೃತ ವಿಡಿಯೋಗಳನ್ನು ತೆಗೆದುಹಾಕುವಂತೆ ದೆಹಲಿ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ ಎಂದು ಕಾನೂನು ಸುದ್ದಿ...