Homeಮುಖಪುಟಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

ಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

- Advertisement -
- Advertisement -

ಮಹತ್ಮಾ ಗಾಂಧಿ ಮತ್ತು ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ.

ಪುಣೆಯ ಲೋನಾವಾಲಾದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ತರಬೇತಿ ಶಿಬಿರದಲ್ಲಿ ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರು ಮಾತನಾಡುತ್ತಿದ್ದರು. ಶಿಬಿರದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಮತ್ತು ಮಾಜಿ ಸಚಿವ ಬಾಳಾಸಾಹೇಬ್ ಥೋರಟ್ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಭಾಗವಹಿಸಿದ್ದರು.

ನರೇಂದ್ರ ಮೋದಿ ಮತ್ತು ಬಿಜೆಪಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಕೆಲಸ ಮಾಡುತ್ತಿದೆ, ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ, ಅನೇಕ ಜನರು ಜೈಲಿಗೆ ಹೋಗಬೇಕಾಗುತ್ತದೆ, ಏಕೆಂದರೆ ಅವರಿಗೆ ಪ್ರಜಾಪ್ರಭುತ್ವ ಅಥವಾ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ಚುನಾವಣೆಯಲ್ಲಿ ನಾವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ರಮೇಶ್‌ ಚೆನ್ನಿತ್ತಲ ಹೇಳಿದ್ದಾರೆ.

ಮಹತ್ಮಾ ಗಾಂಧಿ-ನೆಹರು ಸಿದ್ಧಾಂತವನ್ನು ಕೊನೆಗೊಳಿಸಲು ಮೋದಿ ಅವರು ಪಂಡಿತ್ ಜವಾಹರಲಾಲ್ ನೆಹರು ಅವರನ್ನು ನಿರಂತರವಾಗಿ ಟೀಕಿಸುತ್ತಾರೆ. ಲೋಕಸಭೆ ಚುನಾವಣೆಗೆ ಬಹಳ ಕಡಿಮೆ ಸಮಯವಿದ್ದು, ಸೂಕ್ತ ಬೂತ್ ನಿರ್ವಹಣೆಯೊಂದಿಗೆ ವೈಜ್ಞಾನಿಕವಾಗಿ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ 48 ಸ್ಥಾನಗಳನ್ನು ಗೆಲ್ಲಲು ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಕಾಂಗ್ರೆಸ್‌ನಲ್ಲಿ ಶಿಸ್ತು ಇರಬೇಕು. ಯಾರಾದರೂ ನಿಯಮ ಮೀರಿ ಮಾತನಾಡಲು ಪ್ರಯತ್ನಿಸಿದರೆ ಅದರಿಂದ ಸಫಲರಾಗುವುದಿಲ್ಲ. NSUI, ಯೂತ್ ಕಾಂಗ್ರೆಸ್ ಕೂಡ ಪ್ರಾದೇಶಿಕ ಮಟ್ಟದ ಸಭೆಗಳನ್ನು ನಡೆಸಬೇಕು.  ಶಿಬಿರದಲ್ಲಿ ಸಮಗ್ರ ಚರ್ಚೆಗಳು ನಡೆಸಬೇಕು ಎಂದು ಹೇಳಿದ್ದಾರೆ.

ನಾವು ಕಾಂಗ್ರೆಸ್ ಕಾರ್ಯಕರ್ತರು ಎಂಬ ಅಭಿಮಾನದಿಂದ ಕೆಲಸ ಮಾಡಬೇಕು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಬೇಕು. ಎಲ್ಲಾ ಯುನಿಟ್‌ಗಳು, ಮುಂಚೂಣಿ ಸಂಘಟನೆಗಳು ಒಗ್ಗೂಡಬೇಕು. ನಮಗೆ ವ್ಯರ್ಥಮಾಡಲು ಸಮಯವಿಲ್ಲ. ಮಹಾರಾಷ್ಟ್ರದಲ್ಲಿ ವಾತಾವರಣವು ಕಾಂಗ್ರೆಸ್ ಮತ್ತು ಎಂವಿಎ ಪರವಾಗಿದೆ. ಬಿಜೆಪಿ ಸುಳ್ಳಿನ ಮೂಲಕ ಜನರನ್ನು ವಂಚಿಸುತ್ತಿದೆ. ನೆನಪಿಡಿ, ಮಹಾರಾಷ್ಟ್ರಕ್ಕೆ ಮೋದಿಯನ್ನು ಅಧಿಕಾರವನ್ನು ಉಳಿಸಿಕೊಳ್ಳುವುದನ್ನು ತಡೆಯುವ ಶಕ್ತಿ ಇದೆ ಎಂದು ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಥೋರಟ್ ಅವರು ಮಾತನಾಡಿದ್ದು, ತಮ್ಮ ಪಕ್ಷವು ಹಿಮ್ಮೆಟ್ಟಲಿಲ್ಲ ಆದರೆ ಜನರ ತತ್ವಗಳಿಗೆ ಹಿನ್ನಡೆಯಾಗುತ್ತಿವೆ. ಸದ್ಯದ ರಾಜಕೀಯಕ್ಕೆ ಯಾವುದೇ ಸಿದ್ಧಾಂತವಿಲ್ಲ, ಕಾಂಗ್ರೆಸ್‌ ತೊರೆದಿರುವವರು ಅಧಿಕಾರಕ್ಕೆ ಬಂದರೆ ಮತ್ತೆ ಬರುತ್ತಾರೆ. ವಾಣಿಜ್ಯ ರಾಜಕಾರಣ ಮುಂದುವರೆಯಲು ಬಿಡಬೇಡಿ ಇಂತಹವರಿಗೆ ಕಾಂಗ್ರೆಸ್ ಪಕ್ಷದೊಳಗೆ ಅವಕಾಶ ನೀಡಬಾರದು ಇಂತಹ ವಾಣಿಜ್ಯ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸಬೇಕು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನಸಾಮಾನ್ಯರಲ್ಲಿ ಸಕಾರಾತ್ಮಕ ಸ್ಪಂದನೆಯನ್ನು ಉತ್ಪಾದಿಸುತ್ತಿದೆ ಮತ್ತು ಮಹಾ ವಿಕಾಸ್ ಅಘಾಡಿ ಮಹಾರಾಷ್ಟ್ರದಲ್ಲಿ 38ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ ಪಕ್ಷಕ್ಕೆ ಸಂಪ್ರದಾಯ, ತತ್ವ ಮತ್ತು ತೋರಿಸಲು ಕೆಲಸವಿದೆ. ಕಾಂಗ್ರೆಸ್ ದೇಶಕ್ಕಾಗಿ ತ್ಯಾಗ ಮಾಡಿದೆ. ನಾವು ಕಾಂಗ್ರೆಸ್ ಸೇರಿದ್ದೇವೆ ಎಂದು ಹೆಮ್ಮೆ ಪಡಬೇಕು. ಮೈತ್ರಿಯಾಗಿ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರೇ ಆಗಿರಲಿ, ಬಿಜೆಪಿ ಮತ್ತು ನರೇಂದ್ರ ಮೋದಿ ಅಧಿಕಾರದಲ್ಲಿ ಉಳಿಯಬಾರದು ಎಂಬುದು ನಮ್ಮ ಗುರಿಯಾಗಿದೆ ಎಂದು ಥೋರಟ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಪೃಥ್ವಿರಾಜ್ ಚವಾಣ್, ಪ್ರಧಾನಿ ಮೋದಿ ಅವರು ತಮ್ಮ ನಾಯಕತ್ವದಲ್ಲಿ ಭಾರತ 5ನೇ ಅತಿದೊಡ್ಡ ಆರ್ಥಿಕತೆಯ ಬಗ್ಗೆ ನಿರಂತರವಾಗಿ ಮಾತನಾಡುತ್ತಾರೆ ಮತ್ತು 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದ್ದಾರೆ, ಆದರೆ ಡಾ. ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರಕ್ಕಿಂತ ಮೋದಿಯ ಆಳ್ವಿಕೆಯಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...