Homeಮುಖಪುಟಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

ಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

- Advertisement -
- Advertisement -

ಮಹತ್ಮಾ ಗಾಂಧಿ ಮತ್ತು ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ.

ಪುಣೆಯ ಲೋನಾವಾಲಾದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ತರಬೇತಿ ಶಿಬಿರದಲ್ಲಿ ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರು ಮಾತನಾಡುತ್ತಿದ್ದರು. ಶಿಬಿರದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಮತ್ತು ಮಾಜಿ ಸಚಿವ ಬಾಳಾಸಾಹೇಬ್ ಥೋರಟ್ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಭಾಗವಹಿಸಿದ್ದರು.

ನರೇಂದ್ರ ಮೋದಿ ಮತ್ತು ಬಿಜೆಪಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಕೆಲಸ ಮಾಡುತ್ತಿದೆ, ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ, ಅನೇಕ ಜನರು ಜೈಲಿಗೆ ಹೋಗಬೇಕಾಗುತ್ತದೆ, ಏಕೆಂದರೆ ಅವರಿಗೆ ಪ್ರಜಾಪ್ರಭುತ್ವ ಅಥವಾ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ಚುನಾವಣೆಯಲ್ಲಿ ನಾವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ರಮೇಶ್‌ ಚೆನ್ನಿತ್ತಲ ಹೇಳಿದ್ದಾರೆ.

ಮಹತ್ಮಾ ಗಾಂಧಿ-ನೆಹರು ಸಿದ್ಧಾಂತವನ್ನು ಕೊನೆಗೊಳಿಸಲು ಮೋದಿ ಅವರು ಪಂಡಿತ್ ಜವಾಹರಲಾಲ್ ನೆಹರು ಅವರನ್ನು ನಿರಂತರವಾಗಿ ಟೀಕಿಸುತ್ತಾರೆ. ಲೋಕಸಭೆ ಚುನಾವಣೆಗೆ ಬಹಳ ಕಡಿಮೆ ಸಮಯವಿದ್ದು, ಸೂಕ್ತ ಬೂತ್ ನಿರ್ವಹಣೆಯೊಂದಿಗೆ ವೈಜ್ಞಾನಿಕವಾಗಿ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ 48 ಸ್ಥಾನಗಳನ್ನು ಗೆಲ್ಲಲು ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಕಾಂಗ್ರೆಸ್‌ನಲ್ಲಿ ಶಿಸ್ತು ಇರಬೇಕು. ಯಾರಾದರೂ ನಿಯಮ ಮೀರಿ ಮಾತನಾಡಲು ಪ್ರಯತ್ನಿಸಿದರೆ ಅದರಿಂದ ಸಫಲರಾಗುವುದಿಲ್ಲ. NSUI, ಯೂತ್ ಕಾಂಗ್ರೆಸ್ ಕೂಡ ಪ್ರಾದೇಶಿಕ ಮಟ್ಟದ ಸಭೆಗಳನ್ನು ನಡೆಸಬೇಕು.  ಶಿಬಿರದಲ್ಲಿ ಸಮಗ್ರ ಚರ್ಚೆಗಳು ನಡೆಸಬೇಕು ಎಂದು ಹೇಳಿದ್ದಾರೆ.

ನಾವು ಕಾಂಗ್ರೆಸ್ ಕಾರ್ಯಕರ್ತರು ಎಂಬ ಅಭಿಮಾನದಿಂದ ಕೆಲಸ ಮಾಡಬೇಕು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಬೇಕು. ಎಲ್ಲಾ ಯುನಿಟ್‌ಗಳು, ಮುಂಚೂಣಿ ಸಂಘಟನೆಗಳು ಒಗ್ಗೂಡಬೇಕು. ನಮಗೆ ವ್ಯರ್ಥಮಾಡಲು ಸಮಯವಿಲ್ಲ. ಮಹಾರಾಷ್ಟ್ರದಲ್ಲಿ ವಾತಾವರಣವು ಕಾಂಗ್ರೆಸ್ ಮತ್ತು ಎಂವಿಎ ಪರವಾಗಿದೆ. ಬಿಜೆಪಿ ಸುಳ್ಳಿನ ಮೂಲಕ ಜನರನ್ನು ವಂಚಿಸುತ್ತಿದೆ. ನೆನಪಿಡಿ, ಮಹಾರಾಷ್ಟ್ರಕ್ಕೆ ಮೋದಿಯನ್ನು ಅಧಿಕಾರವನ್ನು ಉಳಿಸಿಕೊಳ್ಳುವುದನ್ನು ತಡೆಯುವ ಶಕ್ತಿ ಇದೆ ಎಂದು ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಥೋರಟ್ ಅವರು ಮಾತನಾಡಿದ್ದು, ತಮ್ಮ ಪಕ್ಷವು ಹಿಮ್ಮೆಟ್ಟಲಿಲ್ಲ ಆದರೆ ಜನರ ತತ್ವಗಳಿಗೆ ಹಿನ್ನಡೆಯಾಗುತ್ತಿವೆ. ಸದ್ಯದ ರಾಜಕೀಯಕ್ಕೆ ಯಾವುದೇ ಸಿದ್ಧಾಂತವಿಲ್ಲ, ಕಾಂಗ್ರೆಸ್‌ ತೊರೆದಿರುವವರು ಅಧಿಕಾರಕ್ಕೆ ಬಂದರೆ ಮತ್ತೆ ಬರುತ್ತಾರೆ. ವಾಣಿಜ್ಯ ರಾಜಕಾರಣ ಮುಂದುವರೆಯಲು ಬಿಡಬೇಡಿ ಇಂತಹವರಿಗೆ ಕಾಂಗ್ರೆಸ್ ಪಕ್ಷದೊಳಗೆ ಅವಕಾಶ ನೀಡಬಾರದು ಇಂತಹ ವಾಣಿಜ್ಯ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸಬೇಕು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನಸಾಮಾನ್ಯರಲ್ಲಿ ಸಕಾರಾತ್ಮಕ ಸ್ಪಂದನೆಯನ್ನು ಉತ್ಪಾದಿಸುತ್ತಿದೆ ಮತ್ತು ಮಹಾ ವಿಕಾಸ್ ಅಘಾಡಿ ಮಹಾರಾಷ್ಟ್ರದಲ್ಲಿ 38ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ ಪಕ್ಷಕ್ಕೆ ಸಂಪ್ರದಾಯ, ತತ್ವ ಮತ್ತು ತೋರಿಸಲು ಕೆಲಸವಿದೆ. ಕಾಂಗ್ರೆಸ್ ದೇಶಕ್ಕಾಗಿ ತ್ಯಾಗ ಮಾಡಿದೆ. ನಾವು ಕಾಂಗ್ರೆಸ್ ಸೇರಿದ್ದೇವೆ ಎಂದು ಹೆಮ್ಮೆ ಪಡಬೇಕು. ಮೈತ್ರಿಯಾಗಿ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರೇ ಆಗಿರಲಿ, ಬಿಜೆಪಿ ಮತ್ತು ನರೇಂದ್ರ ಮೋದಿ ಅಧಿಕಾರದಲ್ಲಿ ಉಳಿಯಬಾರದು ಎಂಬುದು ನಮ್ಮ ಗುರಿಯಾಗಿದೆ ಎಂದು ಥೋರಟ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಪೃಥ್ವಿರಾಜ್ ಚವಾಣ್, ಪ್ರಧಾನಿ ಮೋದಿ ಅವರು ತಮ್ಮ ನಾಯಕತ್ವದಲ್ಲಿ ಭಾರತ 5ನೇ ಅತಿದೊಡ್ಡ ಆರ್ಥಿಕತೆಯ ಬಗ್ಗೆ ನಿರಂತರವಾಗಿ ಮಾತನಾಡುತ್ತಾರೆ ಮತ್ತು 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದ್ದಾರೆ, ಆದರೆ ಡಾ. ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರಕ್ಕಿಂತ ಮೋದಿಯ ಆಳ್ವಿಕೆಯಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...