Homeಮುಖಪುಟಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

ಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

- Advertisement -
- Advertisement -

ಮಹತ್ಮಾ ಗಾಂಧಿ ಮತ್ತು ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ.

ಪುಣೆಯ ಲೋನಾವಾಲಾದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ತರಬೇತಿ ಶಿಬಿರದಲ್ಲಿ ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರು ಮಾತನಾಡುತ್ತಿದ್ದರು. ಶಿಬಿರದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಮತ್ತು ಮಾಜಿ ಸಚಿವ ಬಾಳಾಸಾಹೇಬ್ ಥೋರಟ್ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಭಾಗವಹಿಸಿದ್ದರು.

ನರೇಂದ್ರ ಮೋದಿ ಮತ್ತು ಬಿಜೆಪಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಕೆಲಸ ಮಾಡುತ್ತಿದೆ, ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ, ಅನೇಕ ಜನರು ಜೈಲಿಗೆ ಹೋಗಬೇಕಾಗುತ್ತದೆ, ಏಕೆಂದರೆ ಅವರಿಗೆ ಪ್ರಜಾಪ್ರಭುತ್ವ ಅಥವಾ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ಚುನಾವಣೆಯಲ್ಲಿ ನಾವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ರಮೇಶ್‌ ಚೆನ್ನಿತ್ತಲ ಹೇಳಿದ್ದಾರೆ.

ಮಹತ್ಮಾ ಗಾಂಧಿ-ನೆಹರು ಸಿದ್ಧಾಂತವನ್ನು ಕೊನೆಗೊಳಿಸಲು ಮೋದಿ ಅವರು ಪಂಡಿತ್ ಜವಾಹರಲಾಲ್ ನೆಹರು ಅವರನ್ನು ನಿರಂತರವಾಗಿ ಟೀಕಿಸುತ್ತಾರೆ. ಲೋಕಸಭೆ ಚುನಾವಣೆಗೆ ಬಹಳ ಕಡಿಮೆ ಸಮಯವಿದ್ದು, ಸೂಕ್ತ ಬೂತ್ ನಿರ್ವಹಣೆಯೊಂದಿಗೆ ವೈಜ್ಞಾನಿಕವಾಗಿ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ 48 ಸ್ಥಾನಗಳನ್ನು ಗೆಲ್ಲಲು ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಕಾಂಗ್ರೆಸ್‌ನಲ್ಲಿ ಶಿಸ್ತು ಇರಬೇಕು. ಯಾರಾದರೂ ನಿಯಮ ಮೀರಿ ಮಾತನಾಡಲು ಪ್ರಯತ್ನಿಸಿದರೆ ಅದರಿಂದ ಸಫಲರಾಗುವುದಿಲ್ಲ. NSUI, ಯೂತ್ ಕಾಂಗ್ರೆಸ್ ಕೂಡ ಪ್ರಾದೇಶಿಕ ಮಟ್ಟದ ಸಭೆಗಳನ್ನು ನಡೆಸಬೇಕು.  ಶಿಬಿರದಲ್ಲಿ ಸಮಗ್ರ ಚರ್ಚೆಗಳು ನಡೆಸಬೇಕು ಎಂದು ಹೇಳಿದ್ದಾರೆ.

ನಾವು ಕಾಂಗ್ರೆಸ್ ಕಾರ್ಯಕರ್ತರು ಎಂಬ ಅಭಿಮಾನದಿಂದ ಕೆಲಸ ಮಾಡಬೇಕು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಬೇಕು. ಎಲ್ಲಾ ಯುನಿಟ್‌ಗಳು, ಮುಂಚೂಣಿ ಸಂಘಟನೆಗಳು ಒಗ್ಗೂಡಬೇಕು. ನಮಗೆ ವ್ಯರ್ಥಮಾಡಲು ಸಮಯವಿಲ್ಲ. ಮಹಾರಾಷ್ಟ್ರದಲ್ಲಿ ವಾತಾವರಣವು ಕಾಂಗ್ರೆಸ್ ಮತ್ತು ಎಂವಿಎ ಪರವಾಗಿದೆ. ಬಿಜೆಪಿ ಸುಳ್ಳಿನ ಮೂಲಕ ಜನರನ್ನು ವಂಚಿಸುತ್ತಿದೆ. ನೆನಪಿಡಿ, ಮಹಾರಾಷ್ಟ್ರಕ್ಕೆ ಮೋದಿಯನ್ನು ಅಧಿಕಾರವನ್ನು ಉಳಿಸಿಕೊಳ್ಳುವುದನ್ನು ತಡೆಯುವ ಶಕ್ತಿ ಇದೆ ಎಂದು ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಥೋರಟ್ ಅವರು ಮಾತನಾಡಿದ್ದು, ತಮ್ಮ ಪಕ್ಷವು ಹಿಮ್ಮೆಟ್ಟಲಿಲ್ಲ ಆದರೆ ಜನರ ತತ್ವಗಳಿಗೆ ಹಿನ್ನಡೆಯಾಗುತ್ತಿವೆ. ಸದ್ಯದ ರಾಜಕೀಯಕ್ಕೆ ಯಾವುದೇ ಸಿದ್ಧಾಂತವಿಲ್ಲ, ಕಾಂಗ್ರೆಸ್‌ ತೊರೆದಿರುವವರು ಅಧಿಕಾರಕ್ಕೆ ಬಂದರೆ ಮತ್ತೆ ಬರುತ್ತಾರೆ. ವಾಣಿಜ್ಯ ರಾಜಕಾರಣ ಮುಂದುವರೆಯಲು ಬಿಡಬೇಡಿ ಇಂತಹವರಿಗೆ ಕಾಂಗ್ರೆಸ್ ಪಕ್ಷದೊಳಗೆ ಅವಕಾಶ ನೀಡಬಾರದು ಇಂತಹ ವಾಣಿಜ್ಯ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸಬೇಕು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನಸಾಮಾನ್ಯರಲ್ಲಿ ಸಕಾರಾತ್ಮಕ ಸ್ಪಂದನೆಯನ್ನು ಉತ್ಪಾದಿಸುತ್ತಿದೆ ಮತ್ತು ಮಹಾ ವಿಕಾಸ್ ಅಘಾಡಿ ಮಹಾರಾಷ್ಟ್ರದಲ್ಲಿ 38ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ ಪಕ್ಷಕ್ಕೆ ಸಂಪ್ರದಾಯ, ತತ್ವ ಮತ್ತು ತೋರಿಸಲು ಕೆಲಸವಿದೆ. ಕಾಂಗ್ರೆಸ್ ದೇಶಕ್ಕಾಗಿ ತ್ಯಾಗ ಮಾಡಿದೆ. ನಾವು ಕಾಂಗ್ರೆಸ್ ಸೇರಿದ್ದೇವೆ ಎಂದು ಹೆಮ್ಮೆ ಪಡಬೇಕು. ಮೈತ್ರಿಯಾಗಿ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರೇ ಆಗಿರಲಿ, ಬಿಜೆಪಿ ಮತ್ತು ನರೇಂದ್ರ ಮೋದಿ ಅಧಿಕಾರದಲ್ಲಿ ಉಳಿಯಬಾರದು ಎಂಬುದು ನಮ್ಮ ಗುರಿಯಾಗಿದೆ ಎಂದು ಥೋರಟ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಪೃಥ್ವಿರಾಜ್ ಚವಾಣ್, ಪ್ರಧಾನಿ ಮೋದಿ ಅವರು ತಮ್ಮ ನಾಯಕತ್ವದಲ್ಲಿ ಭಾರತ 5ನೇ ಅತಿದೊಡ್ಡ ಆರ್ಥಿಕತೆಯ ಬಗ್ಗೆ ನಿರಂತರವಾಗಿ ಮಾತನಾಡುತ್ತಾರೆ ಮತ್ತು 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದ್ದಾರೆ, ಆದರೆ ಡಾ. ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರಕ್ಕಿಂತ ಮೋದಿಯ ಆಳ್ವಿಕೆಯಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...