Homeಮುಖಪುಟಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

ಗಾಂಧಿ, ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ: ರಮೇಶ್ ಚೆನ್ನಿತ್ತಲ

- Advertisement -
- Advertisement -

ಮಹತ್ಮಾ ಗಾಂಧಿ ಮತ್ತು ನೆಹರೂ ಸಿದ್ಧಾಂತವನ್ನು ಕೊನೆಗೊಳಿಸಲು ಭಾರತೀಯ ಜನತಾ ಪಕ್ಷ ಮತ್ತು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಹೇಳಿದ್ದಾರೆ.

ಪುಣೆಯ ಲೋನಾವಾಲಾದಲ್ಲಿ ಎರಡು ದಿನಗಳ ರಾಜ್ಯ ಮಟ್ಟದ ತರಬೇತಿ ಶಿಬಿರದಲ್ಲಿ ಕಾಂಗ್ರೆಸ್‌ನ ಮಹಾರಾಷ್ಟ್ರ ಉಸ್ತುವಾರಿ ರಮೇಶ್ ಚೆನ್ನಿತ್ತಲ ಅವರು ಮಾತನಾಡುತ್ತಿದ್ದರು. ಶಿಬಿರದಲ್ಲಿ ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ, ಮಾಜಿ ಮುಖ್ಯಮಂತ್ರಿ ಪೃಥ್ವಿರಾಜ್ ಚವ್ಹಾಣ್ ಮತ್ತು ಮಾಜಿ ಸಚಿವ ಬಾಳಾಸಾಹೇಬ್ ಥೋರಟ್ ಸೇರಿದಂತೆ ಕಾಂಗ್ರೆಸ್‌ನ ಉನ್ನತ ನಾಯಕರು ಭಾಗವಹಿಸಿದ್ದರು.

ನರೇಂದ್ರ ಮೋದಿ ಮತ್ತು ಬಿಜೆಪಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಕೆಲಸ ಮಾಡುತ್ತಿದೆ, ಮೋದಿ ಮತ್ತೆ ಅಧಿಕಾರಕ್ಕೆ ಬಂದರೆ, ಅನೇಕ ಜನರು ಜೈಲಿಗೆ ಹೋಗಬೇಕಾಗುತ್ತದೆ, ಏಕೆಂದರೆ ಅವರಿಗೆ ಪ್ರಜಾಪ್ರಭುತ್ವ ಅಥವಾ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಈ ಚುನಾವಣೆಯಲ್ಲಿ ನಾವು ಮಾಡು ಇಲ್ಲವೇ ಮಡಿ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ ಎಂದು ರಮೇಶ್‌ ಚೆನ್ನಿತ್ತಲ ಹೇಳಿದ್ದಾರೆ.

ಮಹತ್ಮಾ ಗಾಂಧಿ-ನೆಹರು ಸಿದ್ಧಾಂತವನ್ನು ಕೊನೆಗೊಳಿಸಲು ಮೋದಿ ಅವರು ಪಂಡಿತ್ ಜವಾಹರಲಾಲ್ ನೆಹರು ಅವರನ್ನು ನಿರಂತರವಾಗಿ ಟೀಕಿಸುತ್ತಾರೆ. ಲೋಕಸಭೆ ಚುನಾವಣೆಗೆ ಬಹಳ ಕಡಿಮೆ ಸಮಯವಿದ್ದು, ಸೂಕ್ತ ಬೂತ್ ನಿರ್ವಹಣೆಯೊಂದಿಗೆ ವೈಜ್ಞಾನಿಕವಾಗಿ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ 48 ಸ್ಥಾನಗಳನ್ನು ಗೆಲ್ಲಲು ಇಂಡಿಯಾ ಮೈತ್ರಿಕೂಟ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಕಾಂಗ್ರೆಸ್‌ನಲ್ಲಿ ಶಿಸ್ತು ಇರಬೇಕು. ಯಾರಾದರೂ ನಿಯಮ ಮೀರಿ ಮಾತನಾಡಲು ಪ್ರಯತ್ನಿಸಿದರೆ ಅದರಿಂದ ಸಫಲರಾಗುವುದಿಲ್ಲ. NSUI, ಯೂತ್ ಕಾಂಗ್ರೆಸ್ ಕೂಡ ಪ್ರಾದೇಶಿಕ ಮಟ್ಟದ ಸಭೆಗಳನ್ನು ನಡೆಸಬೇಕು.  ಶಿಬಿರದಲ್ಲಿ ಸಮಗ್ರ ಚರ್ಚೆಗಳು ನಡೆಸಬೇಕು ಎಂದು ಹೇಳಿದ್ದಾರೆ.

ನಾವು ಕಾಂಗ್ರೆಸ್ ಕಾರ್ಯಕರ್ತರು ಎಂಬ ಅಭಿಮಾನದಿಂದ ಕೆಲಸ ಮಾಡಬೇಕು. ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಒಗ್ಗಟ್ಟಾಗಬೇಕು. ಎಲ್ಲಾ ಯುನಿಟ್‌ಗಳು, ಮುಂಚೂಣಿ ಸಂಘಟನೆಗಳು ಒಗ್ಗೂಡಬೇಕು. ನಮಗೆ ವ್ಯರ್ಥಮಾಡಲು ಸಮಯವಿಲ್ಲ. ಮಹಾರಾಷ್ಟ್ರದಲ್ಲಿ ವಾತಾವರಣವು ಕಾಂಗ್ರೆಸ್ ಮತ್ತು ಎಂವಿಎ ಪರವಾಗಿದೆ. ಬಿಜೆಪಿ ಸುಳ್ಳಿನ ಮೂಲಕ ಜನರನ್ನು ವಂಚಿಸುತ್ತಿದೆ. ನೆನಪಿಡಿ, ಮಹಾರಾಷ್ಟ್ರಕ್ಕೆ ಮೋದಿಯನ್ನು ಅಧಿಕಾರವನ್ನು ಉಳಿಸಿಕೊಳ್ಳುವುದನ್ನು ತಡೆಯುವ ಶಕ್ತಿ ಇದೆ ಎಂದು ಕಾಂಗ್ರೆಸ್‌ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಥೋರಟ್ ಅವರು ಮಾತನಾಡಿದ್ದು, ತಮ್ಮ ಪಕ್ಷವು ಹಿಮ್ಮೆಟ್ಟಲಿಲ್ಲ ಆದರೆ ಜನರ ತತ್ವಗಳಿಗೆ ಹಿನ್ನಡೆಯಾಗುತ್ತಿವೆ. ಸದ್ಯದ ರಾಜಕೀಯಕ್ಕೆ ಯಾವುದೇ ಸಿದ್ಧಾಂತವಿಲ್ಲ, ಕಾಂಗ್ರೆಸ್‌ ತೊರೆದಿರುವವರು ಅಧಿಕಾರಕ್ಕೆ ಬಂದರೆ ಮತ್ತೆ ಬರುತ್ತಾರೆ. ವಾಣಿಜ್ಯ ರಾಜಕಾರಣ ಮುಂದುವರೆಯಲು ಬಿಡಬೇಡಿ ಇಂತಹವರಿಗೆ ಕಾಂಗ್ರೆಸ್ ಪಕ್ಷದೊಳಗೆ ಅವಕಾಶ ನೀಡಬಾರದು ಇಂತಹ ವಾಣಿಜ್ಯ ರಾಜಕಾರಣಿಗಳಿಗೆ ಜನರು ತಕ್ಕ ಪಾಠ ಕಲಿಸಬೇಕು. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಜನಸಾಮಾನ್ಯರಲ್ಲಿ ಸಕಾರಾತ್ಮಕ ಸ್ಪಂದನೆಯನ್ನು ಉತ್ಪಾದಿಸುತ್ತಿದೆ ಮತ್ತು ಮಹಾ ವಿಕಾಸ್ ಅಘಾಡಿ ಮಹಾರಾಷ್ಟ್ರದಲ್ಲಿ 38ಕ್ಕೂ ಹೆಚ್ಚು ಲೋಕಸಭಾ ಸ್ಥಾನಗಳನ್ನು ಗೆಲ್ಲಬಹುದು. ಕಾಂಗ್ರೆಸ್ ಪಕ್ಷಕ್ಕೆ ಸಂಪ್ರದಾಯ, ತತ್ವ ಮತ್ತು ತೋರಿಸಲು ಕೆಲಸವಿದೆ. ಕಾಂಗ್ರೆಸ್ ದೇಶಕ್ಕಾಗಿ ತ್ಯಾಗ ಮಾಡಿದೆ. ನಾವು ಕಾಂಗ್ರೆಸ್ ಸೇರಿದ್ದೇವೆ ಎಂದು ಹೆಮ್ಮೆ ಪಡಬೇಕು. ಮೈತ್ರಿಯಾಗಿ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಯಾರೇ ಆಗಿರಲಿ, ಬಿಜೆಪಿ ಮತ್ತು ನರೇಂದ್ರ ಮೋದಿ ಅಧಿಕಾರದಲ್ಲಿ ಉಳಿಯಬಾರದು ಎಂಬುದು ನಮ್ಮ ಗುರಿಯಾಗಿದೆ ಎಂದು ಥೋರಟ್ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಪೃಥ್ವಿರಾಜ್ ಚವಾಣ್, ಪ್ರಧಾನಿ ಮೋದಿ ಅವರು ತಮ್ಮ ನಾಯಕತ್ವದಲ್ಲಿ ಭಾರತ 5ನೇ ಅತಿದೊಡ್ಡ ಆರ್ಥಿಕತೆಯ ಬಗ್ಗೆ ನಿರಂತರವಾಗಿ ಮಾತನಾಡುತ್ತಾರೆ ಮತ್ತು 2047ರ ವೇಳೆಗೆ ದೇಶವು ಅಭಿವೃದ್ಧಿ ಹೊಂದಲಿದೆ ಎಂದು ಹೇಳಿದ್ದಾರೆ, ಆದರೆ ಡಾ. ಮನಮೋಹನ್ ಸಿಂಗ್ ಅವರ ಯುಪಿಎ ಸರ್ಕಾರಕ್ಕಿಂತ ಮೋದಿಯ ಆಳ್ವಿಕೆಯಲ್ಲಿ ದೇಶದ ಸ್ಥಿತಿ ಕೆಟ್ಟದಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ‘ಅಕ್ಬರ್‌’, ‘ಸೀತಾ’ ಹೆಸರಿನ ಸಿಂಹಗಳನ್ನು ಒಂದೇ ಸ್ಥಳದಲ್ಲಿ ಬಿಟ್ಟಿದ್ದಕ್ಕೆ ಹೈಕೋರ್ಟ್‌ ಮೆಟ್ಟಿಲೇರಿದ ವಿಹೆಚ್‌ಪಿ: ವಿಲಕ್ಷಣ ಘಟನೆ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...