Homeಮುಖಪುಟಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ 'ಎಲ್ಲಾ ಪಕ್ಷಗಳಿಗೂ ಸ್ವಾಗತ' ಎಂದ...

ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತದ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದ್ದಾರೆ. ಈ ಬಾರಿಯ ಪ್ರತಿಭಟನೆಯಲ್ಲಿ ಭಾಗಿಯಾಗಲು ಇಚ್ಛಿಸುವವರು ಯಾವುದೇ ಪಕ್ಷದವರಾಗಿದ್ದರೂ ಅವರಿಗೆ ಸ್ವಾಗತ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಆದರೆ ಈ ಬಾರಿ ಕುಸ್ತಿಪಟುಗಳು ಆರೋಪಗಳನ್ನು ಸಮಿತಿಯು ತನಿಖೆ ಮಾಡುತ್ತದೆ ಎಂದು ಭರವಸೆ ನೀಡಿದ ನಂತರ ಮತ್ತು ಬ್ರಿಜ್ ಭೂಷಣ್ ವಿರುದ್ಧ ಪೊಲೀಸರು ದೂರು ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಿಂದ ಹೊರಡುವುದಿಲ್ಲಬ ಎಂದು ಪಟ್ಟು ಹಿಡಿದಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು.

”ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.

”ಸುಳ್ಳು ಆಶ್ವಾಸನೆ”ಯಿಂದ ನಾವು ಜನವರಿಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

”ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಫುಟ್‌ಪಾತ್‌ನಲ್ಲಿ ರಾತ್ರಿ ಕಳೆದ ನಂತರ ಫೋಗಟ್ ಹೇಳಿದರು.

”ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ದೂರಿನ ಮೇರೆಗೆ ಜನವರಿಯಲ್ಲಿ ಕ್ರೀಡಾ ಸಚಿವಾಲಯವು ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಆದರೆ ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹತಾಶೆ ವ್ಯಕ್ತಪಡಿಸಿದರು.

”ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ದೂರುದಾರರ ಹೆಸರನ್ನು ಸೋರಿಕೆ ಮಾಡಬಾರದು ಏಕೆಂದರೆ ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಇದ್ದಾರೆ” ಎಂದು ಅವರು ಹೇಳಿದರು.

ಸರ್ಕಾರದ ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ, ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.

ಜನವರಿ 18ರಂದು ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹಲವಾರು ಕುಸ್ತಿಪಟುಗಳು ಲೈಂಗಿಕ ಕಿರುಕಳದ ಆರೋಪವನ್ನು ಬಹಿರಂಗಪಡಿಸಿ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವಿನ ಮಾತುಕತೆಯು ಯಶಸ್ವಿಯಾಗಲಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಕುಸ್ತಿಯಾಡುವುದಿಲ್ಲ ಎಂದು ಹೇಳಿದ್ದಾರೆ. ಒಕ್ಕೂಟದ ಕಾರ್ಯಚಟುವಟಿಕೆಯಲ್ಲಿ ದುರಾಡಳಿತ ನಡೆಯುತ್ತಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...