Homeಮುಖಪುಟಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ 'ಎಲ್ಲಾ ಪಕ್ಷಗಳಿಗೂ ಸ್ವಾಗತ' ಎಂದ...

ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಭಾರತದ ಅಗ್ರ ಕುಸ್ತಿಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸಿದ್ದಾರೆ. ಈ ಬಾರಿಯ ಪ್ರತಿಭಟನೆಯಲ್ಲಿ ಭಾಗಿಯಾಗಲು ಇಚ್ಛಿಸುವವರು ಯಾವುದೇ ಪಕ್ಷದವರಾಗಿದ್ದರೂ ಅವರಿಗೆ ಸ್ವಾಗತ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು. ಆದರೆ ಈ ಬಾರಿ ಕುಸ್ತಿಪಟುಗಳು ಆರೋಪಗಳನ್ನು ಸಮಿತಿಯು ತನಿಖೆ ಮಾಡುತ್ತದೆ ಎಂದು ಭರವಸೆ ನೀಡಿದ ನಂತರ ಮತ್ತು ಬ್ರಿಜ್ ಭೂಷಣ್ ವಿರುದ್ಧ ಪೊಲೀಸರು ದೂರು ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಿಂದ ಹೊರಡುವುದಿಲ್ಲಬ ಎಂದು ಪಟ್ಟು ಹಿಡಿದಿದ್ದಾರೆ.

ಈ ಬಗ್ಗೆ ಮಾತನಾಡಿದ ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು, ”ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿಸಿದ್ದೇವೆ. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿದರು.

”ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದಾರೆ.

ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಏಳು ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ, ಪೊಲೀಸರು ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುವವರೆಗೆ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾನಿರತ ಅಥ್ಲೀಟ್‌ಗಳು ಹೇಳಿದ್ದಾರೆ.

”ಸುಳ್ಳು ಆಶ್ವಾಸನೆ”ಯಿಂದ ನಾವು ಜನವರಿಯಲ್ಲಿ ಪ್ರತಿಭಟನೆಯನ್ನು ಕೊನೆಗೊಳಿಸಿದ್ದೇವೆ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

”ನಾವು ಹಗಲು ರಾತ್ರಿ ಇಲ್ಲಿ ಕುಳಿತುಕೊಳ್ಳುತ್ತೇವೆ. ನಮಗೆ ನ್ಯಾಯ ಸಿಗುವವರೆಗೂ ನಾವು ಇಲ್ಲಿಯೇ ಕುಳಿತುಕೊಳ್ಳುತ್ತೇವೆ” ಎಂದು ಫುಟ್‌ಪಾತ್‌ನಲ್ಲಿ ರಾತ್ರಿ ಕಳೆದ ನಂತರ ಫೋಗಟ್ ಹೇಳಿದರು.

”ನಾವು ಅವರನ್ನು (ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಇತರ ಸಂಬಂಧಿತ ಅಧಿಕಾರಿಗಳನ್ನು) ಸಂಪರ್ಕಿಸಲು ಮೂರು ತಿಂಗಳಿನಿಂದ ಪ್ರಯತ್ನಿಸುತ್ತಿದ್ದೇವೆ. ಸಮಿತಿಯ ಸದಸ್ಯರು ನಮಗೆ ಪ್ರತಿಕ್ರಿಯಿಸುತ್ತಿಲ್ಲ, ಕ್ರೀಡಾ ಸಚಿವಾಲಯವೂ ಏನನ್ನೂ ಹೇಳಿಲ್ಲ, ಅವರು ನಮ್ಮ ಕರೆಗಳನ್ನು ಸಹ ಸ್ವೀಕರಿಸುವುದಿಲ್ಲ. ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆ ಮತ್ತು ಇದಕ್ಕಾಗಿ ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟಿದ್ದೇವೆ” ಎಂದು ಅವರು ಹೇಳಿದರು.

”ಕುಸ್ತಿಪಟುಗಳ ದೂರಿನ ಮೇರೆಗೆ ಜನವರಿಯಲ್ಲಿ ಕ್ರೀಡಾ ಸಚಿವಾಲಯವು ತನಿಖೆಗಾಗಿ ಒಲಿಂಪಿಕ್ ಪದಕ ವಿಜೇತ ಬಾಕ್ಸರ್ ಎಂಸಿ ಮೇರಿ ಕೋಮ್ ನೇತೃತ್ವದ ಐದು ಸದಸ್ಯರ ಸಮಿತಿಯನ್ನು ರಚಿಸಿತು. ಒಂದು ತಿಂಗಳೊಳಗೆ ತನ್ನ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿತ್ತು. ಆದರೆ ಸಮಿತಿಯು ನೀಡಿದ ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ” ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹತಾಶೆ ವ್ಯಕ್ತಪಡಿಸಿದರು.

”ಮಹಿಳಾ ಕುಸ್ತಿಪಟುಗಳ ಹೇಳಿಕೆಗಳನ್ನು ದಾಖಲಿಸಿರುವ ವರದಿಯು ಸಾರ್ವಜನಿಕವಾಗಬೇಕೆಂದು ನಾವು ಬಯಸುತ್ತೇವೆ. ದೂರುದಾರರ ಹೆಸರನ್ನು ಸೋರಿಕೆ ಮಾಡಬಾರದು ಏಕೆಂದರೆ ಇದು ಸೂಕ್ಷ್ಮ ವಿಷಯವಾಗಿದೆ, ದೂರುದಾರರಲ್ಲಿ ಒಬ್ಬರು ಅಪ್ರಾಪ್ತ ಬಾಲಕಿ ಇದ್ದಾರೆ” ಎಂದು ಅವರು ಹೇಳಿದರು.

ಸರ್ಕಾರದ ಸಮಿತಿಯು ತನ್ನ ವರದಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಸಲ್ಲಿಸಿದೆ, ಆದರೆ ಸಚಿವಾಲಯವು ಆ ವರದಿಯನ್ನು ಇನ್ನೂ ಸಾರ್ವಜನಿಕವಾಗಿ ಪ್ರಕಟಿಸಿಲ್ಲ.

ಜನವರಿ 18ರಂದು ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹಲವಾರು ಕುಸ್ತಿಪಟುಗಳು ಲೈಂಗಿಕ ಕಿರುಕಳದ ಆರೋಪವನ್ನು ಬಹಿರಂಗಪಡಿಸಿ ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಕುಸ್ತಿಪಟುಗಳು ಮತ್ತು ಸರ್ಕಾರದ ನಡುವಿನ ಮಾತುಕತೆಯು ಯಶಸ್ವಿಯಾಗಲಿಲ್ಲ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ನಾವು ಕುಸ್ತಿಯಾಡುವುದಿಲ್ಲ ಎಂದು ಹೇಳಿದ್ದಾರೆ. ಒಕ್ಕೂಟದ ಕಾರ್ಯಚಟುವಟಿಕೆಯಲ್ಲಿ ದುರಾಡಳಿತ ನಡೆಯುತ್ತಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...