Homeಮುಖಪುಟಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

- Advertisement -
- Advertisement -

ಮಧ್ಯಪ್ರದೇಶದಲ್ಲಿ ತಮ್ಮ ಊರಿಗೆ ರಸ್ತೆ ನಿರ್ಮಿಸಿಕೊಡುವಂತೆ ಗರ್ಭಿಣಿಯೊಬ್ಬರು ಮನವಿ ಮಾಡಿದ್ದಕ್ಕೆ ಬಿಜೆಪಿ ಸಂಸದ ಹೆರಿಗೆ ದಿನಾಂಕ ಕೇಳಿದ್ದಾರೆ ಎಂದು ವರದಿಯಾಗಿದೆ.

ಸಿಧಿ ಜಿಲ್ಲೆಯ ಖಡ್ಡಿ ಖುರ್ದ್ ಗ್ರಾಮದ ಗರ್ಭಿಣಿ ತಮ್ಮ ಊರಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಆಡಳಿತಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಧಿ ಬಿಜೆಪಿ ಸಂಸದ ಡಾ.ರಾಕೇಶ್ ಮಿಶ್ರಾ “ಹೆರಿಗೆಗೆ ಒಂದು ವಾರ ಮೊದಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ” ಎಂಬ ಬೇಜವ್ದಾರಿಯ ಉತ್ತರ ನೀಡಿದ್ದಾರೆ.

ಸಾಮಾಜಿಕ ಜಾಲತಾಣದ ಇನ್‌ಪ್ಲುಯೆನ್ಸರ್ ಆಗಿರುವ ಸ್ಥಳೀಯ ಮಹಿಳೆ 25 ವರ್ಷದ ಲೀಲಾ ಸಾಹು ತಮ್ಮ ಊರಿನ ರಸ್ತೆಯ ದುರವಸ್ಥೆಯ ಬಗ್ಗೆ ಗಮನ ಸೆಳೆದಿದ್ದಿದ್ದರು. ಪ್ರಸ್ತುತ ಅವರು ಗರ್ಭಿಣಿಯಾಗಿರುವ ಅವರು, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದಾಗಿ, ವಿಶೇಷವಾಗಿ ಮಳೆಗಾಲದಲ್ಲಿ ಆಂಬ್ಯುಲೆನ್ಸ್‌ಗಳು ಗ್ರಾಮವನ್ನು ತಲುಪುವುದು ಅಸಾಧ್ಯ ಎಂದು ಇತ್ತೀಚಿನ ವಿಡಿಯೋದಲ್ಲಿ ಹೇಳಿದ್ದರು.

ಗರ್ಭಿಣಿಯರಾದ ನಾವು ಟ್ರ್ಯಾಕ್ಟರ್‌ಗಳಲ್ಲಿ ಆಸ್ಪತ್ರೆಗೆ ಹೋಗಬೇಕಿದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಹಾಯ ಪಡೆಯುವುದು ಕಷ್ಟವಾಗಿದೆ ಎಂದು ಆಕೆ ಸಮಸ್ಯೆ ಹೇಳಿಕೊಂಡಿದ್ದರು.

ಸಾಹು ಅವರು ಕಳೆದೊಂದು ವರ್ಷದಿಂದ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆ ಇಲ್ಲದಿರುವುದನ್ನು ಬಿಂಬಿಸುವ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೆ ರಸ್ತೆ ವಿಚಾರವಾಗಿಯೇ ಅವರು ಸುದ್ದಿಯಲ್ಲಿದ್ದಾರೆ.

ಲೀಲಾ ಸಾಹು ಅವರ ಮನವಿಗೆ ಪ್ರತಿಕ್ರಿಯಿಸಿದ ಸಂಸದ ಮಿಶ್ರಾ, “ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ನಮ್ಮಲ್ಲಿ ಸಾಕಷ್ಟು ಆಂಬ್ಯುಲೆನ್ಸ್‌ಗಳಿವೆ. ಆಶಾ ಕಾರ್ಯಕರ್ತರಿದ್ದಾರೆ. ಇತರ ವ್ಯವಸ್ಥೆಗಳಿವೆ. ಹಾಗಾಗಿ, ಯಾರು ಕೂಡಾ ಚಿಂತಿಸಬೇಕಿಲ್ಲ. ಲೀಲಾ ಅವರ ಹೆರಿಗೆಯ ನಿಗದಿತ ದಿನಾಂಕವನ್ನು ತಿಳಿಸಿದರೆ, ನಾವು ಆಕೆಯನ್ನು ಒಂದು ವಾರ ಮೊದಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದಿದ್ದಾರೆ. ಜನರು ಯಾವುದಾದರೊಂದು ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆಯನ್ನು ಗಳಿಸಲು ಬಯಸುತ್ತಾರೆ. ರಸ್ತೆ ಸಮಸ್ಯೆಯನ್ನು ಈ ರೀತಿ ಮುನ್ನೆಲೆಗೆ ತರುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಮೂರು ದಿನಗಳ ಹಿಂದೆ, ಇದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್, “ಸಿಧಿಯ ಲೀಲಾ ಸಾಹು ಅವರ ವಿಡಿಯೋ ಬಗ್ಗೆ ನೀವು ಹೇಳುತ್ತಿದ್ದೀರಾ? ಅದು ನಮಗೆ ಸೋಶಿಯಲ್ ಮೀಡಿಯಾದಲ್ಲಿ ಬಂದಿದೆ” ಎಂದು ಹೇಳಿದ್ದರು.

“ಇಂತಹ ಬೇಡಿಕೆಗಳು ಇರುವ ಜನರು ತುಂಬಾ ಇದ್ದಾರೆ. ನಿಮ್ಮ ಅಭಿಪ್ರಾಯವೇನು? ಲೋಕೋಪಯೋಗಿ ಇಲಾಖೆ ಅಥವಾ ಇನ್ನಾವುದೇ ಇಲಾಖೆಗೆ ಸಂಬಂಧಪಟ್ಟಂತೆ ಯಾರಾದರೂ ಏನಾದರೂ ಪೋಸ್ಟ್ ಮಾಡಿದರೆ ನಾವು ತಕ್ಷಣ ಅಲ್ಲಿಗೆ ಹೋಗ್ಬೇಕಾ? ಈಗ ನಾವು ರಸ್ತೆ ನಿರ್ಮಿಸಿ ಕೊಡ್ಬೇಕಾ? ನಮ್ಮಲ್ಲಿ ಅಷ್ಟು ಹಣ ಇದೆಯಾ? ಅದೆಲ್ಲ ಆಗಲ್ಲ, ಎಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ ಎಂದಿದ್ದರು.

Courtesy : timesofindia.indiatimes.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...