Homeಮುಖಪುಟಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

- Advertisement -
- Advertisement -

ಮಧ್ಯಪ್ರದೇಶದಲ್ಲಿ ತಮ್ಮ ಊರಿಗೆ ರಸ್ತೆ ನಿರ್ಮಿಸಿಕೊಡುವಂತೆ ಗರ್ಭಿಣಿಯೊಬ್ಬರು ಮನವಿ ಮಾಡಿದ್ದಕ್ಕೆ ಬಿಜೆಪಿ ಸಂಸದ ಹೆರಿಗೆ ದಿನಾಂಕ ಕೇಳಿದ್ದಾರೆ ಎಂದು ವರದಿಯಾಗಿದೆ.

ಸಿಧಿ ಜಿಲ್ಲೆಯ ಖಡ್ಡಿ ಖುರ್ದ್ ಗ್ರಾಮದ ಗರ್ಭಿಣಿ ತಮ್ಮ ಊರಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಆಡಳಿತಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಧಿ ಬಿಜೆಪಿ ಸಂಸದ ಡಾ.ರಾಕೇಶ್ ಮಿಶ್ರಾ “ಹೆರಿಗೆಗೆ ಒಂದು ವಾರ ಮೊದಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ” ಎಂಬ ಬೇಜವ್ದಾರಿಯ ಉತ್ತರ ನೀಡಿದ್ದಾರೆ.

ಸಾಮಾಜಿಕ ಜಾಲತಾಣದ ಇನ್‌ಪ್ಲುಯೆನ್ಸರ್ ಆಗಿರುವ ಸ್ಥಳೀಯ ಮಹಿಳೆ 25 ವರ್ಷದ ಲೀಲಾ ಸಾಹು ತಮ್ಮ ಊರಿನ ರಸ್ತೆಯ ದುರವಸ್ಥೆಯ ಬಗ್ಗೆ ಗಮನ ಸೆಳೆದಿದ್ದಿದ್ದರು. ಪ್ರಸ್ತುತ ಅವರು ಗರ್ಭಿಣಿಯಾಗಿರುವ ಅವರು, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದಾಗಿ, ವಿಶೇಷವಾಗಿ ಮಳೆಗಾಲದಲ್ಲಿ ಆಂಬ್ಯುಲೆನ್ಸ್‌ಗಳು ಗ್ರಾಮವನ್ನು ತಲುಪುವುದು ಅಸಾಧ್ಯ ಎಂದು ಇತ್ತೀಚಿನ ವಿಡಿಯೋದಲ್ಲಿ ಹೇಳಿದ್ದರು.

ಗರ್ಭಿಣಿಯರಾದ ನಾವು ಟ್ರ್ಯಾಕ್ಟರ್‌ಗಳಲ್ಲಿ ಆಸ್ಪತ್ರೆಗೆ ಹೋಗಬೇಕಿದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಹಾಯ ಪಡೆಯುವುದು ಕಷ್ಟವಾಗಿದೆ ಎಂದು ಆಕೆ ಸಮಸ್ಯೆ ಹೇಳಿಕೊಂಡಿದ್ದರು.

ಸಾಹು ಅವರು ಕಳೆದೊಂದು ವರ್ಷದಿಂದ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆ ಇಲ್ಲದಿರುವುದನ್ನು ಬಿಂಬಿಸುವ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೆ ರಸ್ತೆ ವಿಚಾರವಾಗಿಯೇ ಅವರು ಸುದ್ದಿಯಲ್ಲಿದ್ದಾರೆ.

ಲೀಲಾ ಸಾಹು ಅವರ ಮನವಿಗೆ ಪ್ರತಿಕ್ರಿಯಿಸಿದ ಸಂಸದ ಮಿಶ್ರಾ, “ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ನಮ್ಮಲ್ಲಿ ಸಾಕಷ್ಟು ಆಂಬ್ಯುಲೆನ್ಸ್‌ಗಳಿವೆ. ಆಶಾ ಕಾರ್ಯಕರ್ತರಿದ್ದಾರೆ. ಇತರ ವ್ಯವಸ್ಥೆಗಳಿವೆ. ಹಾಗಾಗಿ, ಯಾರು ಕೂಡಾ ಚಿಂತಿಸಬೇಕಿಲ್ಲ. ಲೀಲಾ ಅವರ ಹೆರಿಗೆಯ ನಿಗದಿತ ದಿನಾಂಕವನ್ನು ತಿಳಿಸಿದರೆ, ನಾವು ಆಕೆಯನ್ನು ಒಂದು ವಾರ ಮೊದಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದಿದ್ದಾರೆ. ಜನರು ಯಾವುದಾದರೊಂದು ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆಯನ್ನು ಗಳಿಸಲು ಬಯಸುತ್ತಾರೆ. ರಸ್ತೆ ಸಮಸ್ಯೆಯನ್ನು ಈ ರೀತಿ ಮುನ್ನೆಲೆಗೆ ತರುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಮೂರು ದಿನಗಳ ಹಿಂದೆ, ಇದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್, “ಸಿಧಿಯ ಲೀಲಾ ಸಾಹು ಅವರ ವಿಡಿಯೋ ಬಗ್ಗೆ ನೀವು ಹೇಳುತ್ತಿದ್ದೀರಾ? ಅದು ನಮಗೆ ಸೋಶಿಯಲ್ ಮೀಡಿಯಾದಲ್ಲಿ ಬಂದಿದೆ” ಎಂದು ಹೇಳಿದ್ದರು.

“ಇಂತಹ ಬೇಡಿಕೆಗಳು ಇರುವ ಜನರು ತುಂಬಾ ಇದ್ದಾರೆ. ನಿಮ್ಮ ಅಭಿಪ್ರಾಯವೇನು? ಲೋಕೋಪಯೋಗಿ ಇಲಾಖೆ ಅಥವಾ ಇನ್ನಾವುದೇ ಇಲಾಖೆಗೆ ಸಂಬಂಧಪಟ್ಟಂತೆ ಯಾರಾದರೂ ಏನಾದರೂ ಪೋಸ್ಟ್ ಮಾಡಿದರೆ ನಾವು ತಕ್ಷಣ ಅಲ್ಲಿಗೆ ಹೋಗ್ಬೇಕಾ? ಈಗ ನಾವು ರಸ್ತೆ ನಿರ್ಮಿಸಿ ಕೊಡ್ಬೇಕಾ? ನಮ್ಮಲ್ಲಿ ಅಷ್ಟು ಹಣ ಇದೆಯಾ? ಅದೆಲ್ಲ ಆಗಲ್ಲ, ಎಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ ಎಂದಿದ್ದರು.

Courtesy : timesofindia.indiatimes.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...