Homeಮುಖಪುಟಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

ಊರಿಗೆ ರಸ್ತೆ ನಿರ್ಮಿಸುವಂತೆ ಗರ್ಭಿಣಿ ಬೇಡಿಕೆ: ಹೆರಿಗೆ ದಿನಾಂಕ ತಿಳಿಸಿ ಎಂದ ಬಿಜೆಪಿ ಸಂಸದ!

- Advertisement -
- Advertisement -

ಮಧ್ಯಪ್ರದೇಶದಲ್ಲಿ ತಮ್ಮ ಊರಿಗೆ ರಸ್ತೆ ನಿರ್ಮಿಸಿಕೊಡುವಂತೆ ಗರ್ಭಿಣಿಯೊಬ್ಬರು ಮನವಿ ಮಾಡಿದ್ದಕ್ಕೆ ಬಿಜೆಪಿ ಸಂಸದ ಹೆರಿಗೆ ದಿನಾಂಕ ಕೇಳಿದ್ದಾರೆ ಎಂದು ವರದಿಯಾಗಿದೆ.

ಸಿಧಿ ಜಿಲ್ಲೆಯ ಖಡ್ಡಿ ಖುರ್ದ್ ಗ್ರಾಮದ ಗರ್ಭಿಣಿ ತಮ್ಮ ಊರಿಗೆ ರಸ್ತೆ ನಿರ್ಮಿಸಿ ಕೊಡುವಂತೆ ಆಡಳಿತಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಧಿ ಬಿಜೆಪಿ ಸಂಸದ ಡಾ.ರಾಕೇಶ್ ಮಿಶ್ರಾ “ಹೆರಿಗೆಗೆ ಒಂದು ವಾರ ಮೊದಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ” ಎಂಬ ಬೇಜವ್ದಾರಿಯ ಉತ್ತರ ನೀಡಿದ್ದಾರೆ.

ಸಾಮಾಜಿಕ ಜಾಲತಾಣದ ಇನ್‌ಪ್ಲುಯೆನ್ಸರ್ ಆಗಿರುವ ಸ್ಥಳೀಯ ಮಹಿಳೆ 25 ವರ್ಷದ ಲೀಲಾ ಸಾಹು ತಮ್ಮ ಊರಿನ ರಸ್ತೆಯ ದುರವಸ್ಥೆಯ ಬಗ್ಗೆ ಗಮನ ಸೆಳೆದಿದ್ದಿದ್ದರು. ಪ್ರಸ್ತುತ ಅವರು ಗರ್ಭಿಣಿಯಾಗಿರುವ ಅವರು, ಸರಿಯಾದ ರಸ್ತೆ ಸಂಪರ್ಕದ ಕೊರತೆಯಿಂದಾಗಿ, ವಿಶೇಷವಾಗಿ ಮಳೆಗಾಲದಲ್ಲಿ ಆಂಬ್ಯುಲೆನ್ಸ್‌ಗಳು ಗ್ರಾಮವನ್ನು ತಲುಪುವುದು ಅಸಾಧ್ಯ ಎಂದು ಇತ್ತೀಚಿನ ವಿಡಿಯೋದಲ್ಲಿ ಹೇಳಿದ್ದರು.

ಗರ್ಭಿಣಿಯರಾದ ನಾವು ಟ್ರ್ಯಾಕ್ಟರ್‌ಗಳಲ್ಲಿ ಆಸ್ಪತ್ರೆಗೆ ಹೋಗಬೇಕಿದೆ. ಇದರಿಂದ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಹಾಯ ಪಡೆಯುವುದು ಕಷ್ಟವಾಗಿದೆ ಎಂದು ಆಕೆ ಸಮಸ್ಯೆ ಹೇಳಿಕೊಂಡಿದ್ದರು.

ಸಾಹು ಅವರು ಕಳೆದೊಂದು ವರ್ಷದಿಂದ ಜಿಲ್ಲಾ ಕೇಂದ್ರದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆ ಇಲ್ಲದಿರುವುದನ್ನು ಬಿಂಬಿಸುವ ರೀಲ್ಸ್‌ಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದೀಗ ಮತ್ತೆ ರಸ್ತೆ ವಿಚಾರವಾಗಿಯೇ ಅವರು ಸುದ್ದಿಯಲ್ಲಿದ್ದಾರೆ.

ಲೀಲಾ ಸಾಹು ಅವರ ಮನವಿಗೆ ಪ್ರತಿಕ್ರಿಯಿಸಿದ ಸಂಸದ ಮಿಶ್ರಾ, “ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದೆ. ನಮ್ಮಲ್ಲಿ ಸಾಕಷ್ಟು ಆಂಬ್ಯುಲೆನ್ಸ್‌ಗಳಿವೆ. ಆಶಾ ಕಾರ್ಯಕರ್ತರಿದ್ದಾರೆ. ಇತರ ವ್ಯವಸ್ಥೆಗಳಿವೆ. ಹಾಗಾಗಿ, ಯಾರು ಕೂಡಾ ಚಿಂತಿಸಬೇಕಿಲ್ಲ. ಲೀಲಾ ಅವರ ಹೆರಿಗೆಯ ನಿಗದಿತ ದಿನಾಂಕವನ್ನು ತಿಳಿಸಿದರೆ, ನಾವು ಆಕೆಯನ್ನು ಒಂದು ವಾರ ಮೊದಲೇ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತೇವೆ ಎಂದಿದ್ದಾರೆ. ಜನರು ಯಾವುದಾದರೊಂದು ರೀತಿಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯತೆಯನ್ನು ಗಳಿಸಲು ಬಯಸುತ್ತಾರೆ. ರಸ್ತೆ ಸಮಸ್ಯೆಯನ್ನು ಈ ರೀತಿ ಮುನ್ನೆಲೆಗೆ ತರುವ ಅಗತ್ಯವೇನಿತ್ತು?” ಎಂದು ಪ್ರಶ್ನಿಸಿದ್ದಾರೆ.

ಮೂರು ದಿನಗಳ ಹಿಂದೆ, ಇದೇ ವಿಷಯದ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್, “ಸಿಧಿಯ ಲೀಲಾ ಸಾಹು ಅವರ ವಿಡಿಯೋ ಬಗ್ಗೆ ನೀವು ಹೇಳುತ್ತಿದ್ದೀರಾ? ಅದು ನಮಗೆ ಸೋಶಿಯಲ್ ಮೀಡಿಯಾದಲ್ಲಿ ಬಂದಿದೆ” ಎಂದು ಹೇಳಿದ್ದರು.

“ಇಂತಹ ಬೇಡಿಕೆಗಳು ಇರುವ ಜನರು ತುಂಬಾ ಇದ್ದಾರೆ. ನಿಮ್ಮ ಅಭಿಪ್ರಾಯವೇನು? ಲೋಕೋಪಯೋಗಿ ಇಲಾಖೆ ಅಥವಾ ಇನ್ನಾವುದೇ ಇಲಾಖೆಗೆ ಸಂಬಂಧಪಟ್ಟಂತೆ ಯಾರಾದರೂ ಏನಾದರೂ ಪೋಸ್ಟ್ ಮಾಡಿದರೆ ನಾವು ತಕ್ಷಣ ಅಲ್ಲಿಗೆ ಹೋಗ್ಬೇಕಾ? ಈಗ ನಾವು ರಸ್ತೆ ನಿರ್ಮಿಸಿ ಕೊಡ್ಬೇಕಾ? ನಮ್ಮಲ್ಲಿ ಅಷ್ಟು ಹಣ ಇದೆಯಾ? ಅದೆಲ್ಲ ಆಗಲ್ಲ, ಎಲ್ಲದಕ್ಕೂ ಒಂದು ಪ್ರಕ್ರಿಯೆ ಇದೆ ಎಂದಿದ್ದರು.

Courtesy : timesofindia.indiatimes.com

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...