Homeಮುಖಪುಟಮಹಿಳಾ ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿ, ಮೈಕ್ ಕಿತ್ತೆಸೆದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್

ಮಹಿಳಾ ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿ, ಮೈಕ್ ಕಿತ್ತೆಸೆದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್

- Advertisement -
- Advertisement -

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೆಷನ್‌ನ ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಹಿಳಾ ಪತ್ರಕರ್ತೆ ಜೊತೆ ಅನುಚಿತವಾಗಿ ವರ್ತಿಸಿ, ಮೈಕ್ ಕಿತ್ತೆಸೆದ ಘಟನೆ ಜರುಗಿದೆ.

ದೆಹಲಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿದ ಹಿನ್ನಲೆಯಲ್ಲಿ ಟೈಮ್ಸ್‌ ನೌ ಪತ್ರಕರ್ತೆಯೊಬ್ಬರು ಇಂದು ಬ್ರಿಜ್ ಭೂಷಣ್ ಪ್ರತಿಕ್ರಿಯೆ ಪಡೆಯಲು ಯತ್ನಿಸಿದ್ದರು. ನಿಮಗೆ ಹೇಳಲು ನನ್ನಲ್ಲಿ ಹೇಳಲು ಏನು ಇಲ್ಲ ಎಂದು ಪದೇ ಪದೇ ಬ್ರಿಜ್ ಭೂಷಣ್ ಹೇಳಿದ್ದರು. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂದು ಪತ್ರಕರ್ತೆ ಪ್ರಶ್ನಿಸಿದಾಗ ಕುಪಿತನಾದ ಆತ “ನಾನೇಕೆ ರಾಜೀನಾಮೆ ನೀಡುತ್ತೇನೆ? ನೀನೇಕೆ ರಾಜೀನಾಮೆ ಕೇಳುತ್ತಿದ್ದೀಯ? ಚುಪ್ (ಸುಮ್ಮನಿರು) ಎಂದು ಗದರಿದ್ದಾನೆ.

ಆದರೆ ಅಷ್ಟಕ್ಕೆ ಸುಮ್ಮನಾಗದ ಪತ್ರಕರ್ತೆ ಬ್ರಿಜ್ ಭೂಷಣ್ ಕಾರಿನಲ್ಲಿ ಕುಳಿತಾಗಲೂ ಈ ರೀತಿಯಾಗಿ ವರ್ತಿಸುವುದು ಸರಿಯೇ ಎಂದು ಮೈಕ್ ಹಿಡಿದು ಪ್ರಶ್ನಿಸಿದರು. ಆಗ ಮೈಕ್ ಕಿತ್ತೆಸೆದು ಬ್ರಿಜ್ ಭೂಷನ್ ಉದ್ದಟತನ ಮೆರೆದಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಪತ್ರಕರ್ತೆಯೊಂದಿಗೆ ಇಂದಿನ ಬ್ರಿಜ್ ಭೂಷಣ್ ಸಿಂಗ್‌ರವರ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. “ಬ್ರಿಜ್ ಭೂಷಣ್ ಕುಸ್ತಿಪಟು ಹೆಣ್ಣು ಮಕ್ಕಳಿಗೆ ಹೇಗೆ ತಾನೇ ಲೈಂಗಿಕ ಕಿರುಕುಳ ನೀಡಲು ಸಾಧ್ಯ ಎಂದು ಪ್ರಶ್ನಿಸುವವರು ಈ ವಿಡಿಯೋವನ್ನು ನೋಡಲೇಬೇಕು?” ಎಂಬ ಶೀರ್ಷಿಕೆಯೊಂದಿಗೆ ಹಲವಾರು ಜನ ವಿಡಿಯೋ ಟ್ವೀಟ್ ಮಾಡಿದ್ದಾರೆ.

“ಕೆಲವರು ಕೆಟ್ಟ ಸ್ವಭಾವದವರು. ಸರ್ಕಾರ ನಮ್ಮದು ಎಂದು ಇವರ ದುರಹಂಕಾರ ನೋಡಿ. ಇವರನ್ನು ತಲೆ ಮೇಲೆ ಹೊತ್ತು ಮೆರೆಸಿದ ಮಾಧ್ಯಮಗಳು ಇಂದು ಅವರಿಗೇ ಹಿಡಿಶಾಪ ಹಾಕುತ್ತಿವೆ. ಸಾರ್ವಜನಿಕರು ಎಲ್ಲವನ್ನೂ ಅರ್ಥಮಾಡಿಕೊಳ್ಳುತ್ತಾರೆ, ಸಾರ್ವಜನಿಕರು ಉತ್ತರಿಸುತ್ತಾರೆ. ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಲಿ!” ಎಂದು ಹೋರಾಟಗಾರ ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

“ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹೊತ್ತಿರುವ ಬಿಜೆಪಿ ಸಂಸದರೊಬ್ಬರು ಮಹಿಳಾ ಪತ್ರಕರ್ತೆಗೆ ಕ್ಯಾಮರಾ ಎದುರೇ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಆಕೆಯ ಮೈಕ್ ಮುರಿದಿದ್ದಾರೆ. ಇದು ಯಾರ ಮಾತು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿಯವರು ಹೇಳಬಹುದೇ? ಇದು ಯಾರ ಸಂಸ್ಕಾರ?” ಎಂದು ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಪ್ರಶ್ನಿಸಿದ್ದಾರೆ.

“ನಾನು ಇದನ್ನು ಪುನರಾವರ್ತಿಸುತ್ತೇನೆ. ಬ್ರಿಜ್ ಭೂಷಣ್ ಸಿಂಗ್ ಒಬ್ಬ ಗೂಂಡಾ. ಕ್ಯಾಮರಾ ಎದುರು ಮಹಿಳಾ ವರದಿಗಾರರೊಂದಿಗೆ ಈ ರೀತಿ ವರ್ತಿಸುವ ಧೈರ್ಯವಿರುವಾಗ, ಕ್ಯಾಮೆರಾದ ಹೊರಗೆ ಮಹಿಳೆಯರೊಂದಿಗೆ ಅವನು ಹೇಗೆ ವರ್ತಿಸಬೇಕು ಎಂದು ಊಹಿಸಿ! ಈ ಮನುಷ್ಯ ಇರಬೇಕಾದುದ್ದು ಸಂಸತ್ತಿನಲ್ಲಿ ಅಲ್ಲ ಜೈಲಿನಲ್ಲಿ!” ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಕಿಡಿಕಾರಿದ್ದಾರೆ.

ಇದನ್ನೂ ಓದಿ; ಲೈಂಗಿಕ ಕಿರುಕುಳವೆಸಗಿದ ಬ್ರಿಜ್ ಭೂಷಣ್ ವಿರುದ್ಧ ಕಾನೂನು ಕ್ರಮ ಜರುಗಿಸಿ: ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...