Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...