Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...