Homeಮುಖಪುಟ‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

‘ಫೇಕ್‌‌ ಅಕೌಂಟ್‌ ವಿರುದ್ಧದ ಕಾರ್ಯಾಚರಣೆಯಲ್ಲಿ ಬಿಜೆಪಿ ಸಂಸದನಿಗೆ ವಿನಾಯಿತಿ ನೀಡಲಾಗಿತ್ತು’

ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಸೋಫಿ ಜಾಂಗ್‌ ಹೇಳಿಕೆ

- Advertisement -
- Advertisement -

ಕಳೆದ ವರ್ಷದ ದೆಹಲಿ ಚುನಾವಣೆಗೆ ಮುನ್ನ ಸಾಮಾಜಿಕ ಜಾಲತಾಣದ ನಕಲಿ ಖಾತೆಗಳ ವಿರುದ್ಧ ಆಯ್ದ ಕ್ರಮ ಕೈಗೊಳ್ಳಲಾಗಿತ್ತು” ಎಂದು ಫೇಸ್‌ಬುಕ್‌ನ ಮಾಜಿ ಡೇಟಾ ವಿಜ್ಞಾನಿ ಹೇಳಿದ್ದಾರೆ.

ವಿಸಿಲ್‌ಬ್ಲೋವರ್ (ಕಾನೂನು ಬಾಹಿರ ನಡೆಗಳನ್ನು ಪತ್ತೆ ಹಚ್ಚುವವರು) ಆಗಿರುವ ಸೋಫಿ ಜಾಂಗ್, ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವು ಮತದಾನದ ಮೇಲೆ ಪ್ರಭಾವ ಬೀರಲು ನಕಲಿ ಖಾತೆಗಳನ್ನು ಬಳಸಿದೆ ಎಂದು ಆರೋಪಿಸಿದ್ದಾರೆ. ಆದರೆ ಬಿಜೆಪಿ ಸಂಸದರಿಗೆ ನೇರವಾಗಿ ಲಿಂಕ್ ಮಾಡಿದ ಖಾತೆಗಳ ನೆಟ್‌ವರ್ಕ್ ಅನ್ನು ಮಾತ್ರ ಫೇಸ್‌ಬುಕ್ ತೆಗೆದುಹಾಕಲಿಲ್ಲ ಎಂದು ದೂರಿದ್ದಾರೆ.

“ನಾವು ಐದು ನೆಟ್ವರ್ಕ್ಗಳಲ್ಲಿ ನಾಲ್ಕನ್ನು ತೆಗೆದಿದ್ದೇವೆ, ಆದರೆ ಐದನೆಯದು ಬಿಜೆಪಿ ಸಂಸದರಿಗೆ ಸೇರಿದ್ದೆಂದು ಕೊನೆಯ ಕ್ಷಣದಲ್ಲಿ, ನಾವು ಅದನ್ನು ರದ್ದು ಮಾಡುವ ಮೊದಲು ತಿಳಿಯಿತು. ಅದು ಬಿಜೆಪಿ ರಾಜಕಾರಣಿ, ಲೋಕಸಭಾ ಸದಸ್ಯರಿಗೆ ಸಂಬಂಧಿಸಿದೆ ಎಂದು ನಾವು ಅರಿತುಕೊಂಡೆವು. ಈ ನೆಟ್‌ವರ್ಕ್‌ ನೇರವಾಗಿ ಬಿಜೆಪಿ ಸಂಸದನಿಗೆ ಸೇರಿದೆ ಎಂದು ತಿಳಿದಾಗ, ಈ ನಕಲಿ ಖಾತೆಗಳ ನೆಟ್‌ವರ್ಕ್‌ನೊಂದಿಗೆ ಏನು ಮಾಡಬೇಕೆಂದು ಯಾರಿಂದಲೂ ಉತ್ತರವನ್ನು ಪಡೆಯಲು ಸಾಧ್ಯವಾಗಲಿಲ್ಲ” ಎಂದು ಕಳೆದ ವರ್ಷದವರೆಗೆ ಫೇಸ್‌ಬುಕ್‌ನೊಂದಿಗೆ ಮೂರು ವರ್ಷಗಳ ಕಾಲ ಕೆಲಸ ಮಾಡಿದ ಜಾಂಗ್‌ ಮಾಹಿತಿ ನೀಡಿದ್ದಾರೆ.

2019ರ ಕೊನೆಯಲ್ಲಿ ನಾಲ್ಕು ನಕಲಿ ಜಾಲಗಳನ್ನು ಪತ್ತೆ ಹಚ್ಚಿದ್ದೆವು. ಅದರಲ್ಲಿ ಎರಡು ಬಿಜೆಪಿ ಮತ್ತು ಇತರ ಎರಡು ಕಾಂಗ್ರೆಸ್ ಅನ್ನು ಬೆಂಬಲಿಸಿದ್ದವು ಎಂದು ಹೇಳಿರುವ ಜಾಂಗ್‌, “ನಾವು ಮೂರು ನೆಟ್‌ವರ್ಕ್‌ಗಳನ್ನು ತೆಗೆದುಹಾಕಿದ್ದೇವೆ, ಅದರಲ್ಲಿ ಎರಡು ಕಾಂಗ್ರೆಸ್‌‌ಗೆ, ಮತ್ತೊಂದು ಬಿಜೆಪಿಗೆ ಸಂಬಂಧಿಸಿದ ನೆಟ್‌ವರ್ಕ್‌ ಆಗಿದ್ದವು. ನಾವು ಕೊನೆಯ ನೆಟ್‌ವರ್ಕ್ ತೆಗೆದು ಹಾಕಬೇಕಿತ್ತು. ಆದರೆ ನಾಲ್ಕನೆಯ ನೆಟ್‌ವರ್ಕ್ ನೇರವಾಗಿ ಬಿಜೆಪಿ ರಾಜಕಾರಿಗೆ ಸಂಬಂಧಪಟ್ಟಿದ್ದು, ಆ ರಾಜಕಾರಣಿಯಿಂದಲೇ ನೆಟ್ವರ್ಕ್ ನಡೆಯುತ್ತಿದೆ ಎಂದು ತಿಳಿದಾಗ, ತೆರವು ಕಾರ್ಯ ನಿಲ್ಲಿಸಲು ಸೂಚಿಸಲಾಯಿತು. ನಾನು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ಎಎಪಿ ಪರ ರಾಜಕೀಯ ಸಂದೇಶಗಳನ್ನು ಹರಡಲು ಬಳಸಲಾಗುತ್ತಿರುವ “ಸಾವಿರಾರು ಖಾತೆಗಳ” ನೆಟ್‌ವರ್ಕ್‌ಗಳನ್ನು ಜನವರಿ ವೇಳೆಗೆ ಕಂಡು ಹಿಡಿದಿದ್ದೆ. ಈ ಖಾತೆಗಳು ತಮ್ಮನ್ನು ಪ್ರಧಾನಿ ಮೋದಿಗೆ ಮತ ಹಾಕಿದ ಬಿಜೆಪಿ ಬೆಂಬಲಿಗರು ಎಂದು ತಪ್ಪಾಗಿ ಬಿಂಬಿಸಿಕೊಂಡಿದ್ದು, “ಇತರ ಬಿಜೆಪಿ ಬೆಂಬಲಿಗರನ್ನು ಗೆಲ್ಲುವ ಸ್ಪಷ್ಟ ಉದ್ದೇಶಕ್ಕಾಗಿ ದೆಹಲಿ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುತ್ತಿರುವುದಾಗಿ ಹೇಳಿಕೊಂಡಿದ್ದವು” ಎಂದು ಜಾಂಗ್‌ ಹೇಳಿದ್ದಾರೆ. ಬಿಜೆಪಿ ಸಂಸದನಿಗೆ ಸೇರಿದ ಖಾತೆಯನ್ನು ಜನವರಿ ತಿಂಗಳು ತೆರವುಗೊಳಿಸಲಾಯಿತು ಎಂದು ಜಾಂಗ್‌ ತಿಳಿಸಿದ್ದಾರೆ.

“ಐದನೇ ನಕಲಿ ನೆಟ್‌ವರ್ಕ್‌‌ಗೆ ಯಾರು ಹೊಣೆಗಾರರು ಎಂದು ತಿಳಿದಿದ್ದರೂ ಅದನ್ನು ತೆಗೆದುಹಾಕಲು ನನಗೆ ಸಾಧ್ಯವಾಗಲಿಲ್ಲ. ಪುನರಾವರ್ತಿತ ಜ್ಞಾಪನೆಗಳ ಹೊರತಾಗಿಯೂ, ಫೇಸ್‌ಬುಕ್ ಸಮಸ್ಯೆಯನ್ನು ಒಪ್ಪಿಕೊಳ್ಳಲು ನಿರಾಕರಿಸಿತು” ಎಂದು ಜಾಂಗ್ ವಿಷಾದಿಸಿದ್ದಾರೆ.

ಎನ್‌ಡಿಟಿವಿಯೊಂದಿಗೆ ಮಾತನಾಡಿರುವ ಜಾಂಗ್‌, “ಗಣ್ಯರು ಮತ್ತು ಶಕ್ತಿಶಾಲಿಗಳಿಗೆ ಒಂದು ರೀತಿಯ ನಿಯಮಗಳು ಮತ್ತು ಮತ್ತೊಂದು ವರ್ಗಕ್ಕೆ ಒಂದು ರೀತಿಯ ನಿಯಮಗಳಿದ್ದರೆ ಪ್ರಜಾಪ್ರಭುತ್ವವು ಉಳಿಯಲು ಸಾಧ್ಯವಿಲ್ಲ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿರಿ: ಪ್ರತ್ಯೇಕ ಪ್ರಕರಣ: ನಾಲ್ಕು ವರ್ಷದ ಮಗು, ಬಾಲಕಿ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...